ಹೊಸಪೇಟೆ: ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕೆ. ರಾಯಪುರ ಗ್ರಾಮದಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದು, ಸಾಮೂಹಿಕ ಬಹಿಷ್ಕಾರ ಹಾಕಲಾಗುತ್ತಿದೆ. ಈ ಬಗ್ಗೆ ಐವರ ವಿರುದ್ಧ ದೂರು ನೀಡಿದರೂ ಇಬ್ಬರನ್ನು ಮಾತ್ರ ಪೊಲೀಸರು ಬಂಧಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿಲ್ಲ. ಮಾದಿಗ ಸಮಾಜದ ಮೇಲೆ ನಿರಂತರ ದೌರ್ಜನ್ಯ ನಡೆಸಲಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು ಎಂದು ದಲಿತ ಸಂಘರ್ಷ ಸಮಿತಿ ವತಿಯಿಂದ ವಿಜಯನಗರ ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪಗೆ ಮನವಿಪತ್ರ ಸಲ್ಲಿಸಿದರು.
ಮನವಿ ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ ಮತ್ತು ಕೂಡ್ಲಿಗಿ ತಹಸೀಲ್ದಾರ್ ರೇಣುಕಮ್ಮ ರಾಯಪುರ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಬಗೆ ಹರಿಸುವ ಭರವಸೆ ನೀಡಿದರು.
ಮುಖಂಡರಾದ ಹನುಮೇಶ್, ಎಸ್. ಪರಮೇಶ್, ಲೋಕೇಶ್, ನಾಗಸಮುದ್ರ ಮರಿಸ್ವಾಮಿ, ಎಂ. ರುದ್ರಯ್ಯ, ವಡೆರಹಳ್ಳಿ ಬಸವರಾಜ್, ರುದ್ರಪ್ಪ, ಓಬಣ್ಣ, ಶಿವಣ್ಣ, ಬಿ.ಕೆ. ಚಂದ್ರಣ್ಣ, ರಾಮಾಂಜನೇಯ, ಹನುಮಂತಪ್ಪ, ಭೀಮಪ್ಪ, ರಾಜು ಮತ್ತಿತರರಿದ್ದರು.