ಮಾಡಲಗೇರಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ತಡೆಗೆ ಕ್ರಮ ಕೈಗೊಳ್ಳಲು ಆಗ್ರಹ

KannadaprabhaNewsNetwork |  
Published : Dec 23, 2025, 02:30 AM IST
22 ರೋಣ 2. ಮಾಡಲಗೇರಿ ಗ್ರಾಮದಲ್ಲಿನ ಅಕ್ರಮ ಸರಾಯಿ ಮಾರಾಟ ತಡೆಗೆ ಮುಂದಾಗಬೇಕು ಎಂದು ಅಬಕಾರಿ ಉಪ ನಿರೀಕ್ಷಕ ಎ.ಎಸ್.ಹೊಸಮನಿ ಅವರಿಗೆ ಮಾಡಲಗೇರಿ ಗ್ರಾಮಸ್ಥರು ರೈತ ಸೇನೆ ಮೂಲಕ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ರೈತಸೇನೆ ಕರ್ನಾಟಕ ಸಂಘದ ರಾಜ್ಯ ವಕ್ತಾರ ಮಹಾದೇವಗೌಡ ಭಾವಿ ಅವರು, ಅಕ್ರಮ ಮದ್ಯ ಮಾರಾಟ ತಡೆಗಟ್ಟುವಲ್ಲಿ ಅಬಕಾರಿ ಇಲಾಖೆಯ ಅಧಿಕಾರಿಗಳು ವಿಫಲರಾಗಿದ್ದು, ಗ್ರಾಮದಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟವಾಗುತ್ತಿದೆ ಎಂದು ಆರೋಪಿಸಿದರು.

ರೋಣ: ಮಾಡಲಗೇರಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿದ್ದು, ಇದರಿಂದ ಮಹಿಳೆಯರು, ಮಕ್ಕಳು, ವೃದ್ಧರು ತೀವ್ರ ಮುಜುಗರಕ್ಕೆ ಒಳಗಾಗುತ್ತಿದ್ದು, ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮದ ಮಹಿಳೆಯರು ರೈತಸೇನೆ ಮೂಲಕ ತಹಸೀಲ್ದಾರ್, ಪೊಲೀಸ್ ಠಾಣೆ ಮತ್ತು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ವೇಳೆ ಮಾತನಾಡಿದ ರೈತಸೇನೆ ಕರ್ನಾಟಕ ಸಂಘದ ರಾಜ್ಯ ವಕ್ತಾರ ಮಹಾದೇವಗೌಡ ಭಾವಿ ಅವರು, ಅಕ್ರಮ ಮದ್ಯ ಮಾರಾಟ ತಡೆಗಟ್ಟುವಲ್ಲಿ ಅಬಕಾರಿ ಇಲಾಖೆಯ ಅಧಿಕಾರಿಗಳು ವಿಫಲರಾಗಿದ್ದು, ಗ್ರಾಮದಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟವಾಗುತ್ತಿದೆ. ಗ್ರಾಮದಲ್ಲಿ ಸುಲಭವಾಗಿ ಮದ್ಯ ಸಿಗುತ್ತಿದೆ. ಇದರಿಂದ ಯುವಕರು ಮದ್ಯವ್ಯಸನಕ್ಕೆ ದಾಸರಾಗುತ್ತಿದ್ದು, ಗ್ರಾಮದಲ್ಲಿ ಅಶಾಂತಿ ವಾತಾವರಣ ನಿರ್ಮಾಣವಾಗಲು ಕಾರಣರಾಗಿದ್ದಾರೆ. ಕುಡಿದು ಗಲಾಟೆ ಮಾಡುವುದು ಹೆಣ್ಣುಮಕ್ಕಳಿಗೆ ಅಶ್ಲೀಲ ಪದ ಬಳಕೆ ಮಾಡಿ ನಿಂದಿಸುವ ಪ್ರಕರಣಗಳು ಹೆಚ್ಚುತ್ತಿವೆ ಎಂದರು.

ಮಾಡಲಗೇರಿ ಗ್ರಾಮದ ಒಂಬತ್ತು ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಸರ್ಕಾರಿ ಶಾಲೆಯ ಪಕ್ಕದಲ್ಲಿಯೆ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಈ ಮಾರಾಟಗಾರರು ಚಿಕ್ಕ ಮಕ್ಕಳು ಹೋದರೂ ಮದ್ಯ ಕೊಡುತ್ತಿದ್ದು, ಈ ಕುರಿತು ಹಲವು ಬಾರಿ ಅಬಕಾರಿ ಇಲಾಖೆಗೆ ದೂರು ನೀಡಿದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಗ್ರಾಮದ ಹಿರಿಯ ಮಹಿಳೆ ಶಂಕ್ರಮ್ಮ ಭೀಮನಗೌಡ್ರ ಮಾತನಾಡಿ, ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಹೆಚ್ಚಾಗಿದ್ದು, ಯುವಕರು ಮದ್ಯದ ಚಟಕ್ಕೆ ಬಿದ್ದು ಅಕಾಲಿಕ ಮರಣ ಹೊಂದುತ್ತಿದ್ದು, ಮಕ್ಕಳನ್ನು ಕಳೆದುಕೊಂಡ ಹಲವು ತಾಯಂದಿರು ಇಂದು ಇಲ್ಲಿ ಬಂದು ಅಧಿಕಾರಿಗಳಿಗೆ ಗ್ರಾಮದಲ್ಲಿ ಮದ್ಯ ಮಾರಾಟ ಮಾಡುವುದನ್ನು ತಡೆಗಟ್ಟಲು ಮನವಿ ಮಾಡಿದ್ದಾರೆ. ಕ್ರಮ ಕೈಗೊಳ್ಳದಿದ್ದರೆ ಅಬಕಾರಿ ಇಲಾಖೆಯ ಕಚೇರಿ ಮುಂದೆ ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು.

ಮನವಿ ಸ್ವೀಕರಿಸಿದ ಅಬಕಾರಿ ಉಪನಿರೀಕ್ಷಕ ಎ.ಎಸ್. ಹೊಸಮನಿ ಮಾತನಾಡಿ, ಮಾಡಲಗೇರಿ ಗ್ರಾಮದಲ್ಲಿ ಅಕ್ರಮ ಮಧ್ಯ ಮಾರಾಟ ಕುರಿತು ಮನವಿ ಸಲ್ಲಿಸಿದ್ದು, ಮೇಲಧಿಕಾರಿಗಳ ಗಮನಕ್ಕೆ ತಂದು ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಭರವಸೆ ನೀಡಿದರು.

ಶಂಕ್ರವ್ವ ಸಿರಗುಂಪಿ ಮಾತನಾಡಿದರು. ಬಸನಗೌಡ ಬಾಲನಗೌಡರ ಶರಣಪ್ಪಗೌಡ ಹಿರೇಸಕ್ಕರಗೌಡರ, ಮಲ್ಲಪ್ಪ ನೈನಪುರ, ಯೋಗಾನಂದ ಹುನಗುಂಡಿ, ಹನುಮವ್ವ ಭೀಮನಗೌಡರ, ಶಂಕ್ರವ್ವ ಶಿರಗುಂಪಿ, ಅಮರವ್ವ ಹುನಗುಂಡಿ, ಗೌರವ್ವ ಭಾವಿ, ಯಲ್ಲವ್ವ ರಾಯನಗೌಡರ, ಬಸವ್ವ ಹಿರೇಸಕರಗೌಡರ, ರತ್ನವ್ವ ಮಂಡಸೊಪ್ಪಿ ಈರವ್ವ ಮಂಡಸೊಪ್ಪಿ, ಶಂಕ್ರವ್ವ ಮಾಗಿ ಶಂಕ್ರವ್ವ ಭೀಮನಗೌಡರ, ಶೋಭಾ, ಪಾರವ್ವ ಹಿರೇಸಕರಗೌಡ್ರ ಮುಂತಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಗೆಹರಿಸಿಕೊಳ್ಳಲು ನಮ್ಮಲ್ಲಿ ಸಮಸ್ಯೆಗಳೇ ಇಲ್ಲ : ಡಿಕೆಶಿ!
ರಾಜಣ್ಣ ನೇಮಿಸಿದ್ದು ನಾನೇ ಎಂದ ಡಿಕೆಗೆ ಸಿದ್ದು ಟಾಂಗ್‌