ಶಿಥಿಲಾವಸ್ಥೆ ಟ್ಯಾಂಕ್ ಕೆಳಗೆ ಶಾಲೆ ಇರುವುದೇ ಸಮಸ್ಯೆ
ಪಟ್ಟಣದ ರಾಜೀವ್ಗಾಂಧಿ ಬಡಾವಣೆಯಲ್ಲಿ ಶಿಥಿಲಾವಸ್ಥೆಗೆ ತಲುಪಿರುವ ಬೃಹತ್ ಕುಡಿಯುವ ನೀರಿನ ಟ್ಯಾಂಕ್ ಕೆಳಗಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಸಮೀಪದ ಶಾಲೆಗೆ ವರ್ಗಾವಣೆ ಮಾಡು ವಂತೆ ಶಾಲೆ ಮಕ್ಕಳ ಪೋಷಕರು ಹಾಗೂ ಸ್ಥಳೀಯ ನಿವಾಸಿಗರು ಪುರಸಭೆ ಹಾಗೂ ಶಿಕ್ಷಣ ಇಲಾಖೆಗೆ ಒತ್ತಾಯಿಸಿದ್ದಾರೆ.
ಶಾಲೆ ಆವರಣದಲ್ಲಿ ಪುರಸಭೆ ಬೃಹತ್ ಕುಡಿಯುವ ನೀರು ಸಂಗ್ರಹ ಟ್ಯಾಂಕ್ ಸುಮಾರು 30 ವರ್ಷ ಹಳೆಯದಾಗಿದ್ದು ಬೀಳುವ ಸ್ಥಿತಿಯಲ್ಲಿರುವುದರಿಂದ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ 1 ರಿಂದ 5ನೇ ತರಗತಿಗಳಲ್ಲಿ 70 ಕ್ಕೂ ಹೆಚ್ಚಿನ ಮಕ್ಕಳು ಕಲಿಯುತ್ತಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಬೇರೆಡೆಗೆ ವರ್ಗಾಯಿಸಲು ಪೋಷಕರು, ಸ್ಥಳೀಯರು ಮತ್ತು ಶಾಲೆ ಶಿಕ್ಷಕಿ ಸೇರಿ ಪುರಸಭೆಗೆ ಅರ್ಜಿ ಸಲ್ಲಿಸಿದ್ದಾರೆ.ಇತ್ತೀಚೆಗೆ ಅಜ್ಜಂಪುರದಲ್ಲಿ ನಡೆದ ಪ್ರಕರಣದಲ್ಲಿ ಕೂದಲೆಳೆ ಅಂತರದಲ್ಲಿ ಅವಾಂತರ ತಪ್ಪಿರುವುದು ಇನ್ನು ಜನರ ಮನಸ್ಸಿನಿಂದ ಮಾಸಿಲ್ಲ. ಇಂತಹ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಟ್ಯಾಂಕ್ ಮತ್ತು ಕೆಳಗಿರುವ ಶಾಲೆ ಪರಿಗಣಿಸಿ ಸಮೀಪದಲ್ಲಿರುವ ಸರ್ಕಾರಿ ಶಾಲೆಗೆ ಮಕ್ಕಳನ್ನು ಹಾಗೂ ಶಿಕ್ಷಕರನ್ನು ಸ್ಥಳಾಂತರಿಸಬೇಕೆಂದು ಪೋಷಕರು ಆಗ್ರಹಿಸಿದ್ದಾರೆ.
--- ಕೋಟ್--
ಈ ಶಾಲೆಯ ಸಮಸ್ಯೆ ಇಲಾಖೆ ಗಮನಕ್ಕೆ ಬಂದಿದ್ದು ಪರಿಶೀಲನೆ ಮಾಡಿ ಇಲಾಖೆ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ತಿಮ್ಮಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ30ಕೆಕೆಡಿಯು1.ಕಡೂರು ಪಟ್ಟಣದ ರಾಜೀವ್ಗಾಂಧಿ ಬಡಾವಣೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಪಕ್ಕದಲ್ಲಿರುವ ಬೃಹತ್ ಕುಡಿಯುವ ನೀರಿನ ಟ್ಯಾಂಕ್ ಭಾಗ ಕಳಚಿ ಬಿದ್ದಿರುವುದು.ಕೆಕೆಡಿಯು2ಎ.ಕಡೂರು ರಾಜೀವ್ಗಾಂಧಿ ಬಡಾವಣೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಟ್ಯಾಂಕ್ ಕೆಳಗೆ ನಡೆಯುತ್ತಿರುವುದು.