ಶ್ರೀಬಸವೇಶ್ವರರ ಕಂಚಿನ ಪುತ್ಥಳಿ ಅನಾವರಣಗೊಳಿಸಲು ಒತ್ತಾಯ

KannadaprabhaNewsNetwork |  
Published : Apr 11, 2026, 02:00 AM IST
ಸಂಡೂರಿನ ತಾಲೂಕು ಕಚೇರಿಯಲ್ಲಿ ಶುಕ್ರವಾರ ವೀರಶೈವ ಲಿಂಗಾಯತ ಸಮಾಜದ ಮುಖಂಡರು ತಹಸೀಲ್ದಾರ್ ಜಿ. ಅನಿಲ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಸಂಡೂರಿನ ಪ್ರಮುಖ ವೃತ್ತವೊಂದರಲ್ಲಿ ವಿಶ್ವಗುರು, ಸಾಂಸ್ಕೃತಿಕ ನಾಯಕ ಶ್ರೀಜಗಜ್ಯೋತಿ ಬಸವೇಶ್ವರರ ಕಂಚಿನ ಪುತ್ಥಳಿ ಅನಾವರಣಗೊಳಿಸುವಂತೆ ಆಗ್ರಹಿಸಿ ಸಲ್ಲಿಸಲಾಯಿತು.

ಸಂಡೂರು: ಪಟ್ಟಣದಲ್ಲಿಯ ಪ್ರಮುಖ ವೃತ್ತವೊಂದರಲ್ಲಿ ವಿಶ್ವಗುರು, ಸಾಂಸ್ಕೃತಿಕ ನಾಯಕ ಶ್ರೀಜಗಜ್ಯೋತಿ ಬಸವೇಶ್ವರರ ಕಂಚಿನ ಪುತ್ಥಳಿ ಅನಾವರಣಗೊಳಿಸಿ, ಆ ವೃತ್ತಕ್ಕೆ ಬಸವೇಶ್ವರ ವೃತ್ತವೆಂದು ನಾಮಕರಣ ಮಾಡುವಂತೆ ಒತ್ತಾಯಿಸಿ ತಾಲೂಕಿನ ವೀರಶೈವ ಲಿಂಗಾಯತ ಸಮಾಜದ ಮುಖಂಡರು ಶುಕ್ರವಾರ ತಾಲೂಕು ಕಚೇರಿಯಲ್ಲಿ ನಡೆದ ಶ್ರೀಬಸವೇಶ್ವರ ಜಯಂತಿ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್ ಜಿ. ಅನಿಲ್‌ಕುಮಾರ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.

ಈಗಾಗಲೇ ಹಲವು ಬಾರಿ ಈ ಬೇಡಿಕೆಯನ್ನು ಮಂಡಿಸಿದ್ದರೂ ಕ್ರಮಕೈಗೊಂಡಿಲ್ಲ. ಆದ್ದರಿಂದ 2027ರ ಶ್ರೀಬಸವೇಶ್ವರ ಜಯಂತಿಯ ಒಳಗಾಗಿ ಪಟ್ಟಣದಲ್ಲಿಯ ಪ್ರಮುಖ ವೃತ್ತದಲ್ಲಿ ಶ್ರೀಬಸವೇಶ್ವರರ ಕಂಚಿನ ಪುತ್ಥಳಿ ಅನಾವರಣ ಹಾಗೂ ಶ್ರೀಬಸವೇಶ್ವರ ವೃತ್ತವೆಂದು ನಾಮಕರಣ ಮಾಡಲು ಕ್ರಮಕೈಗೊಳ್ಳುವಂತೆ ಮನವಿ ಮಾಡಿದರು.

ಸಭೆಯಲ್ಲಿ ಶ್ರೀಬಸವೇಶ್ವರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲು ತೀರ್ಮಾನಿಸಲಾಯಿತು. ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಚಿತ್ರಿಕಿ ಸತೀಶ್‌ಕುಮಾರ್, ಪಿ. ರವಿಕುಮಾರ್, ಮೇಲುಸೀಮೆ ಶಂಕ್ರಪ್ಪ, ಹಗರಿ ಬಸವರಾಜಪ್ಪ, ನಾಗರಾಜ ಗುಡೆಕೋಟೆ, ಗಡಂಬ್ಲಿ ಚೆನ್ನಪ್ಪ, ಕಿನ್ನೂರೇಶ್ವರ, ಬಿ.ಜಿ. ಸಿದ್ದೇಶ್, ಜಿ. ವೀರೇಶ್, ಎಸ್.ವಿ. ಹಿರೇಮಠ, ಎಂ. ಚರಂತಯ್ಯ, ಎಚ್.ಎಂ. ಮಂಜುನಾಥ, ಶಿವಪ್ರಕಾಶ್, ಎ.ಎಂ. ಶರಣಯ್ಯ, ಅವಿನಾಶ್, ಎ. ಮಲ್ಲಪ್ಪ, ಬಿ.ಜಿ ಮಂಜುಳಾ ಮುಂತಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋರ್ಟ್‌ನಲ್ಲಿ ವಾದ ಮಾಡುವಾಗಲೇ ಹೃದಯಾಘಾತದಿಂದ ವಕೀಲ ಸಾವು
ಹಿಟ್ನಾಳ-ಹುಲಿಗಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ