ಬಾಚೇನಹಳ್ಳಿ ಶಾಲೆಯನ್ನು ಕೆಪಿಎಸ್ ಶಾಲೆಯಾಗಿ ಅಭಿವೃದ್ಧಿ ಪಡಿಸಲು ಆಗ್ರಹ

KannadaprabhaNewsNetwork |  
Published : Sep 01, 2026, 01:30 AM IST
ಬಾಚೇನಹಳ್ಳಿ ಶಾಲೆಯನ್ನು ಕೆಪಿಎಸ್ ಶಾಲೆಯಾಗಿ ಅಭಿವೃದ್ಧಿ ಪಡಿಸಲು ಆಗ್ರಹ | Kannada Prabha

ಸಾರಾಂಶ

ತಾಲೂಕಿನ ಗಡಿ ಗ್ರಾಮ ಬಾಚೇನಹಳ್ಳಿ ಸರ್ಕಾರಿ ಶಾಲೆಯನ್ನು ಕೆಪಿಎಸ್ ಶಾಲೆಯಾಗಿ ಅಭಿವೃದ್ಧಿಪಡಿಸಿ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ಶಾಲೆಯ ಆವರಣದಲ್ಲಿ ಗ್ರಾಮಸ್ಥರು ಶಿಕ್ಷಣ ಸಚಿವರನ್ನು ಆಗ್ರಹಿಸಿದ್ದಾರೆ.

ಕನ್ನಡಪ್ರಭ ವಾರ್ತೆ ತಿಪಟೂರು

ತಾಲೂಕಿನ ಗಡಿ ಗ್ರಾಮ ಬಾಚೇನಹಳ್ಳಿ ಸರ್ಕಾರಿ ಶಾಲೆಯನ್ನು ಕೆಪಿಎಸ್ ಶಾಲೆಯಾಗಿ ಅಭಿವೃದ್ಧಿಪಡಿಸಿ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ಶಾಲೆಯ ಆವರಣದಲ್ಲಿ ಗ್ರಾಮಸ್ಥರು ಶಿಕ್ಷಣ ಸಚಿವರನ್ನು ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಸಿ ಬ್ಯಾಂಕ್ ನಿರ್ದೇಶಕ ಜ್ಯೋತಿಗಂಗಾಧರ್, ಈ ಶಾಲೆಗೆ ಸುತ್ತಲಿನ ಹತ್ತಾರು ಹಳ್ಳಿಗಳಿಂದ ವಿದ್ಯಾರ್ಥಿಗಳು ಬರುತ್ತಾರೆ. ೨೫ವರ್ಷಗಳಿಂದ ಕೇಂದ್ರ ಬಿಂದುವಾಗಿದ್ದು ಯಡವನಹಳ್ಳಿ ಹಾಗೂ ಹೆಗ್ಗಟ್ಟ ಎರಡೂ ಗ್ರಾಮ ಪಂಚಾಯಿತಿಗಳಿಗೂ ಇದೊಂದೇ ಪ್ರೌಢಶಾಲೆ ಇದೆ. ಹೆಚ್ಚಿನ ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಆದ್ದರಿಂದ ದಯಮಾಡಿ ಈ ಶಾಲೆಯನ್ನು ಕೆ.ಪಿ.ಎಸ್. ಶಾಲೆಯನ್ನಾಗಿ ಪರಿವರ್ತಿಸಿ ಮತ್ತಷ್ಟು ಸೌಲಭ್ಯಗಳು ದೊರೆಯುವಂತೆ ಮಾಡಬೇಕೆಂದು ಈ ಮೂಲಕ ಸುತ್ತ ಹತ್ತಾರು ಹಳ್ಳಿಗಳ ವಿಧ್ಯಾರ್ಥಿಗಳ ಭವಿಷ್ಯ ರೂಪಿಸಬೇಕೆಂದು ಆಗ್ರಹಿಸಿದರು.ಶಾಲೆಯ ಮುಖ್ಯೋಪಾದ್ಯಾಯರಾದ ಎನ್.ಜಿ.ಉಮಾದೇವಿ ಮನವಿ ಮಾಡಿಕೊಂಡು ನಮ್ಮ ಬಾಚೇನಹಳ್ಳಿ ಶಾಲೆಯು ೧೯೯೬ರಲ್ಲಿ ಪ್ರಾರಂಭವಾಗಿ ಪ್ರತಿ ವರ್ಷವು ಕೂಡ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸುತ್ತಿದೆ. ಈ ಶಾಲೆಯನ್ನು ಮೇಲ್ದರ್ಜೆಗೇರಿಸಿದರೆ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳು ಖಾಸಗಿ ಶಾಲೆಯ ಕಡೆ ಹೋಗುವುದನ್ನು ತಪ್ಪಿಸಬಹುದಾಗಿದ್ದು ಇಲ್ಲಿಯೇ ಎಲ್ಲಾ ಸೌಲಭ್ಯಗಳು ದೊರೆಯುವಂತಾಗಬೇಕು ಎಂದು ತಿಳಿಸಿದರು. ಶಶಿಕುಮಾರ್, ಮಂಜೇಗೌಡ, ಪತ್ರಕರ್ತ ಲೋಕೇಶ್, ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕ ಪುಟ್ಟಸ್ವಾಮಿ, ಎಸ್‌ಡಿಎಂಸಿ ಸದಸ್ಯ ಬೋರೇಗೌಡ, ಶಂಕರೇಗೌಡ, ಷಣ್ಮುಕಯ್ಯ, ರೇಣುಕಯ್ಯ, ದಿನೇಶ್, ರವೀಶ್, ಹಾಗೂ ಜಯಣ್ಣ, ಸಿದ್ದೇಶ್, ಭರತ್ ವಿಜಯ್‌ಕುಮಾರ್ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಡಿವ ನೀರಿನ ಸಮಸ್ಯೆ ನೀಗಿಸುವಂತೆ ಒತ್ತಾಯಿಸಿ ಪ್ರತಿಭಟನೆ
ರೈಲು ಹರಿದು ಅಜ್ಜಿ 2 ಮೊಮ್ಮಕ್ಕಳ ದುರ್ಮರಣ