ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಪುಟ್ಪಾತ್ ವ್ಯಾಪಾರಿಗಳು, ತಳ್ಳುವ ಗಾಡಿಗಳು ಮತ್ತು ಫ್ಲೆಕ್ಸ್ಗಳಿಂದ ತೆರಿಗೆ ಕಟ್ಟುತ್ತಿರುವ ವ್ಯಾಪಾರಸ್ಥರಿಗೆ ತೊಂದರೆಯಾಗುತ್ತಿದ್ದು, ಗಾಂಧಿ ಬಜಾರಿನ ಎರಡು ಕಡೆ ಫುಟ್ಪಾತ್ ಗಳಲ್ಲಿ ವ್ಯಾಪಾರಿಗಳು, ರಸ್ತೆಯ ಮೇಲೆ ತಳ್ಳುವ ಗಾಡಿ ಹಾವಳಿ ಹೆಚ್ಚಾಗಿದೆ. ಗ್ರಾಹಕರು ಅಂಗಡಿ ಒಳಗೆ ಬರಲು ಅಡ್ಡಿಯಾಗುತ್ತಿದೆ. ರಸ್ತೆ ಮೇಲೆ ದ್ವಿಚಕ್ರ ವಾಹನ ಚಲಿಸುವುದು ದುಸ್ತರವಾಗಿದೆ. ಪಾದಚಾರಿಗಳು ಪುಟ್ ಪಾತ್ ಬಿಟ್ಟು ರಸ್ತೆಯಲ್ಲಿ ಓಡಾಡುವಂತಾಗಿದೆ ಎಂದು ತಿಳಿಸಿದರು.
5 ವರ್ಷಗಳ ಹಿಂದೆ ಗಾಂಧಿ ಬಜಾರ್ನಲ್ಲಿ ಉತ್ತಮ ವ್ಯಾಪಾರ ನಡೆಯುತ್ತಿತ್ತು. ಆದರೆ ಇತ್ತೀಚಿಗೆ ಹಲವು ವರ್ಷಗಳಿಂದ ವ್ಯಾಪಾರ ಇಳಿಮುಖವಾಗಿದೆ. ಒಂದು ಕಡೆ ಮಳಿಗೆ ಅಡ್ವಾನ್ಸ್ ಹೆಚ್ಚಾಗಿದ್ದು, ನಮಗೆ ವ್ಯಾಪಾರವಿಲ್ಲದೆ ಜೀವನ ನಡೆಸುವುದು ಕಷ್ಟವಾಗಿದೆ. ಫುಟ್ಪಾತ್ ವ್ಯಾಪಾರಿಗಳು ಹಾಗೂ ತಳ್ಳುವ ಗಾಡಿಯವರಿಂದ ತೊಂದರೆಗಳು ಹೆಚ್ಚಾಗಿದೆ. ಅಂಗಡಿಗೆ ಬರುವ ಗ್ರಾಹಕರು ಫುಟಪಾತ್ ವ್ಯಾಪಾರಿಗಳನ್ನು ದಾಟಿ ಅಂಗಡಿಯ ಒಳಗೆ ಬರುವುದು ಕಷ್ಟವಾಗಿದೆ. ಇದಕ್ಕೆ ಶಾಶ್ವತ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.ಬೇಡಿಕೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ದಶಕಗಳಿಂದ ಮನವಿ ಸಲ್ಲಿಸಿದರೂ ಪರಿಹಾರ ಸಿಗುತ್ತಿಲ್ಲ. ಶಾಶ್ವತ ಪರಿಹಾರ ಒದಗಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.