ಕಬ್ಬು ಬೆಳೆಗಾರರ ಮೇಲಿನ ಕೇಸ್‌ ವಾಪಸ್‌ ಪಡೆಯಲು ಆಗ್ರಹ

KannadaprabhaNewsNetwork |  
Published : Sep 26, 2024, 11:38 AM IST
ಬುಧವಾರ ಹಳಿಯಾಳಕ್ಕೆ ಭೇಟಿ ನೀಡಿದ ಎಸ್ಪಿ ನಾರಾಯಣ ಎಂ. ಅವರಿಗೆ ರೈತರು ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಸದ್ಯ ಪ್ರಕರಣಗಳ ವಿಚಾರಣೆಯು ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಈ ಪ್ರಕರಣಗಳನ್ನು ಹಿಂಪಡೆಯಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಹಳಿಯಾಳ: 2022ರಲ್ಲಿ ಕಬ್ಬಿಗೆ ನ್ಯಾಯಯುತ ಬೆಲೆಯನ್ನು ನೀಡಬೇಕೆಂದು ಆಗ್ರಹಿಸಿ ನಡೆದಿದ್ದ ಹೋರಾಟದಲ್ಲಿ ಪ್ರತಿಭಟನಾನಿರತ ತಾಲೂಕಿನ ಕಬ್ಬು ಬೆಳೆಗಾರರ ಮೇಲೆ ದಾಖಲಿಸಿದ್ದ ಪ್ರಕರಣಗಳನ್ನು ಹಿಂಪಡೆಯಬೇಕೆಂದು ತಾಲೂಕು ಕಬ್ಬು ಬೆಳೆಗಾರರ ಸಂಘವು ಆಗ್ರಹಿಸಿದೆ.ಬುಧವಾರ ಹಳಿಯಾಳಕ್ಕೆ ಭೇಟಿ ನೀಡಿದ ಎಸ್ಪಿ ನಾರಾಯಣ ಎಂ. ಅವರನ್ನು ಹಳಿಯಾಳ ಠಾಣೆಯಲ್ಲಿ ಭೇಟಿಯಾದ ತಾಲೂಕಿನ ಕಬ್ಬು ಬೆಳೆಗಾರರ ನಿಯೋಗವು ಲಿಖಿತ ಮನವಿಯನ್ನು ಸಲ್ಲಿಸಿ ನ್ಯಾಯೋಚಿತವಾಗಿ ಹೋರಾಟ ಮಾಡಿದ ಕಬ್ಬು ಬೆಳೆಗಾರರನ್ನು ಸಂರಕ್ಷಿಸಬೇಕೆಂದು ಮನವಿ ಮಾಡಿದರು.2022ನೇ ಸಾಲಿನ ಹಂಗಾಮಿನಲ್ಲಿ ಇಡೀ ಉತ್ತರ ಕರ್ನಾಟಕದಲ್ಲಿನ ಸಕ್ಕರೆ ಕಾರ್ಖಾನೆಗಳಲ್ಲಿಯೇ ಹಳಿಯಾಳದ ಇಐಡಿ ಸಕ್ಕರೆ ಕಾರ್ಖಾನೆಯವರು ಅತಿ ಕನಿಷ್ಠ ದರವನ್ನು ಘೋಷಿಸಿದನ್ನು ವಿರೋಧಿಸಿ ಹಾಗೂ ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಕುರಿತು ಮತ್ತು ಬಾಕಿ ಬರಬೇಕಾಗಿದ್ದ ಹಣ ಪಾವತಿಸಲು ಆಗ್ರಹಿಸಿ ತಾಲೂಕಿನ ಕಬ್ಬು ಬೆಳೆಗಾರರು ಸತ್ಯಾಗ್ರಹವನ್ನು ಆರಂಭಿಸಿದ್ದರು.

ಈ ಸಂದರ್ಭದಲ್ಲಿ ಕಾರ್ಖಾನೆಯ ಆಡಳಿತ ಮಂಡಳಿಯವರು ನಮ್ಮ ಕಬ್ಬು ಬೆಳೆಗಾರರ ಒಕ್ಕಟನ್ನು ಮುರಿಯುವ ಷಡ್ಯಂತ್ರ ನಡೆಸಿದರಲ್ಲದೇ, ಕೆಲವು ಟ್ರ್ಯಾಕ್ಟರ್ ಮಾಲೀಕರನ್ನು ಮತ್ತು ಚಾಲಕರನ್ನು ಪ್ರಚೋದಿಸಿ ಅವರ ಮುಖಾಂತರ ಸತ್ಯಾಗ್ರಹದಲ್ಲಿ ತೊಡಗಿದ್ದ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸಿದರು. ಸದ್ಯ ಈ ಪ್ರಕರಣಗಳ ವಿಚಾರಣೆಯು ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಈ ಪ್ರಕರಣಗಳನ್ನು ಹಿಂಪಡೆಯಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ಶಂಕರ ಕಾಜಗಾರ, ಪ್ರಮುಖರಾದ ಸಂದೀಪಕುಮಾರ ಬೊಬಾಟೆ, ಅಶೋಕ ಮೇಟಿ, ನಾಗೇಂದ್ರ ಜಿವೋಜಿ, ರಾಮದಾಸ ಬೆಳಗಾಂವಕರ, ಸಾತೇರಿ ಗೊಡೇಮನಿ, ಪ್ರಕಾಶ ಪಾಕ್ರೆ, ಯಲ್ಲಪ್ಪ ಪಾಟೀಲ, ಬಸವರಾಜ ಬೆಂಡಿಗೇರಿಮಠ, ಪುಂಡಲೀಕ ಗೋಡೆಮನಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!