ಅವೈಜ್ಞಾನಿಕವಾಗಿ ಹೊರಡಿಸಿರುವ ಆದೇಶ ಹಿಂಪಡೆಯುವಂತೆ ಆಗ್ರಹ

KannadaprabhaNewsNetwork |  
Published : Nov 08, 2025, 01:30 AM IST
7ಕೆಎಂಎನ್ ಡಿ23 | Kannada Prabha

ಸಾರಾಂಶ

ನಮ್ಮ ದೈನಂದಿನ ಚಟುವಟಿಕೆಗಳ ಮೇಲೆ ದುಷ್ಪರಿಣಾಮ ಬೀರುತ್ತಿವೆ. ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರುಗಳ ಆತ್ಮಸ್ಥೈರ್ಯವನ್ನು ಕುಗ್ಗಿಸುತ್ತಿವೆ. ಇದರ ಪರಿಣಾಮವಾಗಿ ಪದವಿ ಪೂರ್ವ ಕಾಲೇಜುಗಳ ಭವಿಷ್ಯ ಡೋಲಾಯನ ಸ್ಥಿತಿಗೆ ತಲುಪುತ್ತಿವೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಪದವಿ ಪೂರ್ವ ಕಾಲೇಜುಗಳಲ್ಲಿ ಅವೈಜ್ಞಾನಿಕವಾಗಿ ಹೊರಡಿಸಿರುವ ಆದೇಶ ಹಿಂಪಡೆಯುವಂತೆ ಒತ್ತಾಯಿಸಿ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ನಗರದ ಸರ್‌ಎಂ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಸೇರಿದ ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಡೀಸಿ ಮೂಲಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದರು.

ನಮ್ಮ ದೈನಂದಿನ ಚಟುವಟಿಕೆಗಳ ಮೇಲೆ ದುಷ್ಪರಿಣಾಮ ಬೀರುತ್ತಿವೆ. ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರುಗಳ ಆತ್ಮಸ್ಥೈರ್ಯವನ್ನು ಕುಗ್ಗಿಸುತ್ತಿವೆ. ಇದರ ಪರಿಣಾಮವಾಗಿ ಪದವಿ ಪೂರ್ವ ಕಾಲೇಜುಗಳ ಭವಿಷ್ಯ ಡೋಲಾಯನ ಸ್ಥಿತಿಗೆ ತಲುಪುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪರೀಕ್ಷಾ ಮಂಡಳಿಯನ್ನು ಪದವಿ ಪೂರ್ವ ಇಲಾಖೆಯಿಂದ ಪ್ರತ್ಯೇಕಿಸಿದ ನಂತರ ದೇಶದಲ್ಲಿ ಮಾದರಿಯಾಗಿದ್ದ ಪದವಿ ಪೂರ್ವ ಶಿಕ್ಷಣ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಇತ್ತೀಚೆಗೆ ಪದವಿ ಪೂರ್ವ ಶಿಕ್ಷಣಕ್ಕೆ ಸಂಬಂಧನೇ ಇಲ್ಲದ ಡಿಐಇಟಿ ಉಪನ್ಯಾಸಕರನ್ನು ಪದವಿ ಪೂರ್ವ ಕಾಲೇಜುಗಳ ಸ್ಥಿತಿಗತಿಗಳ ದತ್ತಾಂಶ ಕ್ರೂಢೀಕರಿಸುವ ನೆಪದಲ್ಲಿ ಕಾಲೇಜುಗಳನ್ನು ಪರಿಶೀಲನೆಗೊಳಪಡಿಸಲು ಹೊರಟಿರುವುದು ದುರಂತದ ಸಂಗತಿ ಎಂದು ದೂರಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಸ್ತುತ ವೃಂದ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಲು ಇಜ-55 ಎಸ್‌ಎಚ್‌ಎಚ್ ಭಾಗ- 1 ಮತ್ತು ಭಾಗ-2 ರಲ್ಲಿ 910ನೇ ತರಗತಿ ಮತ್ತು 1112ನೇ ತರಗತಿಗಳಿಗೆ ಬೋಧನೆ ಮಾಡುವ ಸಂಬಂಧ ಕಡತವನ್ನು ಶಿಕ್ಷಣ ಸಚಿವರ ಅನುಮೋದನೆಗಾಗಿ ಸಲ್ಲಿಸಿದ್ದು, ಈ ಕಡತವನ್ನು ಸಚಿವರು ಮಾನ್ಯ ಮಾಡದೆ ತಿರಸ್ಕರಿಸಬೇಕು ಎಂದು ಒತ್ತಾಯಿಸಿದರು.

2024-25ನೇ ಸಾಲಿನ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಹಾಗೂ ಸಂಭಾವನೆ ಬಾಕಿ ಇರುವ 13.5 ಕೋಟಿ ಹಣವನ್ನು ಕೂಡಲೇ ಬಿಡುಗಡೆ ಮಾಡಿ ವಿತರಿಸಬೇಕು. ಸರ್ಕಾರಿ/ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೇಗಳು ಮತ್ತು ಪ್ರಾಂಶುಪಾಲರ ಹುದ್ದೇಗಳನ್ನು ಕಾಲಮಿತಿಯಲ್ಲಿ ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.

ಸರ್ಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳಿಗೆ ಮೂಲ ಸೌಕರ್ಯ ಒದಗಿಸಬೇಕು ಹಾಗೂ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕೇತರ ಮತ್ತು ಗ್ರೂಪ್ ಡಿ ಹುದ್ದೇಗಳನ್ನು ಕಾಲಮಿತಿಯಲ್ಲಿ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು. ಉಪನಿರ್ದೇಶಕರ ಕಚೇರಿಯನ್ನು ಬಲವರ್ಧನೆಗೊಳಿಸಲು ಇಬ್ಬರು ಹಿರಿಯ ಪ್ರಾಂಶುಪಾಲರನ್ನು ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ನಿಯೋಜಿಸಿ ಆ ಮುಖಾಂತರ ಇಲಾಖೆ ಪರೀಕ್ಷೆ ಮತ್ತು ಶೈಕ್ಷಣಿಕ ಚಟುವಟಿಕೆಗಳನ್ನು ಉತ್ತೇಜಿಸಬೇಕು ಮನವಿ ಮಾಡಿದರು.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮಲ್ಯ ನಿರ್ಣಯ ಮಂಡಳಿಯಲ್ಲಿರುವರುವ ಪರೀಕ್ಷಾ ವಿಭಾಗವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಈ ಹಿಂದೆ ಇದ್ದಂತೆ ವರ್ಗಾಯಿಸಬೇಕು. ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಪರೀಕ್ಷೆ ಮತ್ತು ಶೈಕ್ಷಣಿಕ ಸುಧಾರಣೆಗಳನ್ನು ತರಲು ಅಕಾಡೆಮಿಕ್ ಕೌನ್ಸಿಲ್ ಸಮಿತಿಯನ್ನು ಉನ್ನತ ಶಿಕ್ಷಣ ಇಲಾಖೆಯಲ್ಲಿರುವಂತೆ ರಚಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಚೆನ್ನಕೃಷ್ಣಯ್ಯ ನೇತೃತ್ವದಲ್ಲಿ ನೂರಾರು ಮಂದಿ ಉಪನ್ಯಾಸಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

PREV

Recommended Stories

83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!