ಬಾಬಾಸಾಹೇಬರು ತಮ್ಮ ಜೀವತಾವಧಿಯಲ್ಲಿ ಎಲ್ಲರ ಏಳಿಗೆಯನ್ನು ಬಯಸಿ ಸರ್ವರಿಗೂ ಅನುಕೂಲವಾಗುವ ಸಂವಿಧಾನವನ್ನು ರಚಿಸಿ ವಿಶ್ವದಲ್ಲಿಯೇ ಮಾದರಿಯಾಗಿದ್ದಾರೆ. ಇಂತಹ ಮಹಾನ್ ನಾಯಕರ ವಿರುದ್ದ ಕೆಲ ಕಿಡಿಗೇಡಿಗಳು ಅವರ ಪುತ್ತಳಿಗೆ ಅವಮಾನ ಮಾಡಿ ಇಡಿ ದೇಶವೇ ತಲೆ ತಗ್ಗಿಸುವ ಕೆಲಸ ಮಾಡಿದ್ದು ಇಂತಹ ಕೃತ್ಯ ಎಸಗಿರುವ ಕಿಡಿಗೇಡಿಗಳನ್ನು ಬಂದಿಸಿ ಅವರಿಗೆ ಗಡಿಪಾರು ಮಾಡಬೇಕು.
ಕನ್ನಡಪ್ರಭ ವಾರ್ತೆ ಚಿತ್ತಾಪುರ
ಸರ್ವರಿಗೂ ಸಮಬಾಳು ಹಾಗೂ ಸಮಪಾಲು ಎನ್ನುವ ಸಿದ್ದಾಂತದಲ್ಲಿ ಸರ್ವರಿಗೂ ನ್ಯಾಯ ಒದಗಿಸಲು ಬಾಬಾಸಾಹೇಬರು ತಮ್ಮ ಜೀವತಾವಧಿಯಲ್ಲಿ ಎಲ್ಲರ ಏಳಿಗೆಯನ್ನು ಬಯಸಿ ಸರ್ವರಿಗೂ ಅನುಕೂಲವಾಗುವ ಸಂವಿಧಾನವನ್ನು ರಚಿಸಿ ವಿಶ್ವದಲ್ಲಿಯೇ ಮಾದರಿಯಾಗಿದ್ದಾರೆ. ಇಂತಹ ಮಹಾನ್ ನಾಯಕರ ವಿರುದ್ದ ಕೆಲ ಕಿಡಿಗೇಡಿಗಳು ಅವರ ಪುತ್ತಳಿಗೆ ಅವಮಾನ ಮಾಡಿ ಇಡಿ ದೇಶವೇ ತಲೆ ತಗ್ಗಿಸುವ ಕೆಲಸ ಮಾಡಿದ್ದು ಇಂತಹ ಕೃತ್ಯ ಎಸಗಿರುವ ಕಿಡಿಗೇಡಿಗಳನ್ನು ಬಂದಿಸಿ ಅವರಿಗೆ ಗಡಿಪಾರು ಮಾಡಬೇಕು ಎಂದು ದಲಿತ ಸಂಘಟನೆಗಳ ಸಮನ್ವಯ ಸಮಿತಿ ಮುಖಂಡ ಆನಂದ ಕಲ್ಲಕ್ಕ್ ಒತ್ತಾಯಿಸಿದರು.
ಪಟ್ಟಣದ ಲಾಡ್ಜಿಂಗ್ ಕ್ರಾಸ್ ಬಳಿ ಬೃಹತ್ ಪ್ರತಿಭಟನೆ ನಂತರ ಮಾತನಾಡಿದ ಅವರು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಕೆಲಸ ಮಾಡುತ್ತಿರುವ ಕಿಡಿಗೇಡಿಗಳು ಯಾರೇ ಆದರೂ ಅವರ ವಿರುದ್ದ ಕಠೀಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.