ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ
ಹಲವು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ತಾಲೂಕಾ ಘಟಕದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಹಳೆ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿಗೆ ತರುವುದು, ಖಾಲಿ ಹುದ್ದೆ ಭರ್ತಿ ಮಾಡುವುದು, ಕಾಲ್ಪನಿಕ ವೇತನ ಜಾರಿಗೆ ತರುವುದು, ಕೆಪಿಎಸ್ ಮತ್ತು ಪಿಎಂಶ್ರೀ ಶಾಲೆಗಳನ್ನು ಅನುದಾನಿತ ಶಾಲೆಯಿಂದ ಮೂರು ಕಿಮೀ ವ್ಯಾಪ್ತಿಯ ಹೊರಗೆ ಆರಂಭಿಸುವುದು, ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ನೀಡುವ ಎಲ್ಲ ಸೌಲಭ್ಯಗಳನ್ನು ಅನುದಾನಿತ ಶಾಲೆಯ ವಿದ್ಯಾರ್ಥಿಗಳಿಗೆ ವಿಸ್ತರಿಸುವುದು, ಸರ್ಕಾರಿ ಶಾಲೆಯ ಶಿಕ್ಷಕರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ಅನುದಾನಿತ ಶಾಲಾ ಶಿಕ್ಷಕರಿಗೂ ವಿಸ್ತರಿಸುವುದು. ದ್ವಿಭಾಷಾ ಪದ್ಧತಿಯನ್ನು ಅನುದಾನಿತ ಶಾಲೆಗಳಿಗೂ ವಿಸ್ತರಿಸುವುದು ಮುಂತಾದ ಬೇಡಿಕೆಗಳನ್ನು ಪಟ್ಟಿ ಮಾಡಿ ಮನವಿಯಲ್ಲಿ ಸೇರಿಸಿ ಶೀಘ್ರ ಇತ್ಯರ್ಥಕ್ಕೆ ಸರ್ಕಾರವನ್ನು ಒತ್ತಾಯಿಸಲಾಯಿತು.ಸಮಾಜದ ಮೂಲಭೂತ ಹಕ್ಕುಗಳಲ್ಲಿ ಒಂದಾದ ಶಿಕ್ಷಣ ವ್ಯವಸ್ಥೆಯನ್ನು ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಎಂಬ ಭೇದಭಾವ ಮಾಡದೆ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಧ್ಯೇಯದೊಂದಿಗೆ ನೌಕರರ ಹಿತಾಸಕ್ತಿಯನ್ನು ಕಾಪಾಡಲು ಸರ್ಕಾರ ಯೋಜನೆ ರೂಪಿಸಬೇಕೆಂದು ಆಗ್ರಹಿಸಲಾಯಿತು.