ಬಸವಕಲ್ಯಾಣ: ಭಾವನಾತ್ಮಕ ವಿಷಯ ಕೆರಳಿಸಿ ಯುವರಕಲ್ಲಿ ಜಾತಿ ವಿಷ ಬಿತ್ತುವ ಕೆಲಸವು ಕೋಮುವಾದಿ ಶಕ್ತಿಗಳಿಂದ ನಡೆಯುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅಸಮಧಾನ ವ್ಯಕ್ತಪಡಿಸಿದರು.
ಸ್ವಾಭಿಮಾನಕ್ಕಾಗಿ ನಡೆದ ಈ ಯುದ್ಧ ಐತಿಹಾಸಿಕವಾಗಿತ್ತು. ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಆಶಯಗಳಿಗೆ ಇಂದು ಅಪಾಯ ಎದುರಾಗಿದೆ. ಸಂವಿಧಾನ ರಕ್ಷಣೆಗಾಗಿ ನಾವು ನೀವೆಲ್ಲರೂ ಕಟಿಬದ್ಧರಾಗಬೇಕಿದೆ ಎಂದು ಖಂಡ್ರೆ ಮನವಿ ಮಾಡಿದರು.
ನ್ಯಾಯವಾದಿ ಚಿಂತಕ ಡಾ. ತಾತ್ಯಾರಾವ್ ಕಾಂಬಳೆ ಮಾತನಾಡಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿಚಾರ, ಜೀವನ ಚರಿತ್ರೆಯ, ತತ್ವಜ್ಞಾನವನ್ನು ಯುವಕರು ಅಧ್ಯಯನ ಮಾಡಬೇಕು. ಉತ್ತಮ ಚಾರಿತ್ರ್ಯ ನಿರ್ಮಿಸಿಕೊಳ್ಳಬೇಕೆಂದರು.ಮಾಜಿ ಎಂಎಲ್ಸಿ ವಿಜಯಸಿಂಗ್, ಕಾಂಗ್ರೆಸ್ ಮುಖಂಡ ಧನರಾಜ ತಾಳಂಪಳ್ಳಿ ಮಾತನಾಡಿ, ಭೀಮಾ ಕೋರೆಗಾಂವ ವಿಜಯೋತ್ಸವವನ್ನು ರವಿ ಗಾಯಕವಾಡ ಅವರು ಅತ್ಯಂತ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ದಲಿತ ಪ್ಯಾಂಥರ್ ತಾಲೂಕು ಅಧ್ಯಕ್ಷ ರವಿ ಗಾಯಕವಾಡ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ವಾಭಿಮಾನದಿಂದ ಬದುಕಬೇಕೆಂದರು. ಕಲಬುರಗಿ ಬುದ್ಧ ವಿಹಾರದ ಸಂಗಾನಂದ ಭಂತೆ ಹಾಗೂ ಸಿದ್ದರಾಮ ಶರಣರು ಬೆಲ್ದಾಳ ಸಾನಿಧ್ಯವಹಿಸಿದ್ದರು.