26 ಸಕ್ರೀಯ ಡೆಂಘೀ ಪ್ರಕರಣ । ನಿರಂತರ ಲಾರ್ವಾ ಸಮೀಕ್ಷೆ
ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳು ಜುಲೈನಲ್ಲಿ ಇಳಿಮುಖವಾಗುತ್ತಿದ್ದು, ಡೆಂಘೀಯಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್ ಬಾಬು ಹೇಳಿದ್ದಾರೆ.
ಶುಕ್ರವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಕ್ಕೆ ಇಲಾಖೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು ಜನವರಿಯಿಂದ ಜು.18 ರವರೆಗೆ ಜಿಲ್ಲೆಯಲ್ಲಿ 630 ದೃಢೀಕೃತ ಡೆಂಘೀ ಪ್ರಕರಣ ದಾಖಲಾಗಿದ್ದು, ಇದರಲ್ಲಿ 26 ಡೆಂಘೀ ಸಕ್ರಿಯ ಪ್ರಕರಣಗಳಾಗಿವೆ ಎಂದು ಮಾಹಿತಿ ನೀಡಿದರು.ಸಿಂಧಿಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ದೇವಗೊಂಡನಹಳ್ಳಿಯಲ್ಲಿ ಕೀಲುನೋವುಗಳ ಪ್ರಕರಣ ಇವೆ ಎಂದು ವರದಿಯಾಗಿದ್ದು, ಆ ಗ್ರಾಮದಲ್ಲಿ 357 ಮನೆಗಳಿದ್ದು 1421 ಜನಸಂಖ್ಯೆ ಹೊಂದಿದೆ. ಆರೋಗ್ಯ ಸಿಬ್ಬಂದಿ 6 ಕ್ಷಿಪ್ರ ತಂಡ ರಚಿಸಿ ಭೇಟಿ ನೀಡಿ ಲಾರ್ವಾ ಸಮೀಕ್ಷೆ, ಸೊಳ್ಳೆ ನಿರ್ಮೂಲನಾ ಕಾರ್ಯ ನಡೆಸಲಾಗಿದೆ ಎಂದು ಹೇಳಿದರು.
ಜಿಲ್ಲಾ ಮಟ್ಟದ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಹಾಗೂ ಮೇಲ್ವಿಚಾರಣಾ ತಂಡ ಗ್ರಾಮಕ್ಕೆ ಭೇಟಿ ನೀಡಿ ಲಾರ್ವಾ ಸಮೀಕ್ಷೆ ಅಡ್ಡ ಪರೀಕ್ಷೆ ನಡೆಸಿ ಅಲ್ಲಿನ ಸಿಬ್ಬಂದಿಗೆ ಗುಣಾತ್ಮಕ ಹಾಗೂ ಪರಿಣಾಮಕಾರಿ ಲಾರ್ವಾ ಸಮೀಕ್ಷೆ ನಡೆಸಿ ರೋಗಿಗಳನ್ನು ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳುಹಿಸಲು ಸೂಚಿಸ ಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಡಿಟಿಒ ಡಾ. ಹರೀಶ್ಬಾಬು, ಆರ್ಸಿಎಚ್ ಡಾ. ಮಂಜುನಾಥ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಬಾಲಕೃಷ್ಣ ಉಪಸ್ಥಿತರಿದ್ದರು.ಪೋಟೋ ಫೈಲ್ ನೇಮ್ 19 ಕೆಸಿಕೆಎಂ 2