ರಾಮನಗರ: ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ವಿರೋಧಿಸಿ 428 ದಿನಗಳಿಂದ ಹೋರಾಟ ನಡೆಸುತ್ತಿರುವ ರೈತ ಮುಖಂಡರೊಂದಿಗೆ ಭಾನುವಾರ ಸಮಾಲೋಚನೆ ನಡೆಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಬಂಧಪಟ್ಟ ಅಧಿಕಾರಿಗಳಿಗೆ ಕಾನೂನು ಚೌಕಟ್ಟಿನೊಳಗೆ ಸೂಕ್ತ ನಿರ್ದೇಶನ ನೀಡುವುದಾಗಿ ಭರವಸೆ ನೀಡಿದರು.
ಈ ವೇಳೆ ರೈತ ಮುಖಂಡರು ಮಾತನಾಡಿ, ಕರ್ನಾಟಕ ನಗರಾಭಿವೃದ್ಧಿ ಕಾಯ್ದೆ 1987ರ ಅಡಿಯಲ್ಲಿ ಬಿಡದಿ ಟೌನ್ ಶಿಪ್ ಯೋಜನೆಗಾಗಿ ಹೊರಡಿಸಿರುವ ಪ್ರಾಥಮಿಕ ಅಧಿಸೂಚನೆಯನ್ನು ರದ್ದು ಪಡಿಸಬೇಕು ಹಾಗೂ ಅಂತಿಮ ಅಧಿಸೂಚನೆಗಾಗಿ ನಡೆಸುತ್ತಿರುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕೆಂದು ಮನವಿ ಮಾಡಿದರು.
ಈ ಯೋಜನೆಗೆ ಗುರುತಿಸಿರುವ ಬೈರಮಂಗಲ ಗ್ರಾಮ ಪಂಚಾಯಿತಿಯ 10 ಹಾಗೂ ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿಯ 16 ಗ್ರಾಮಗಳು ಸಂಪೂರ್ಣ ನೀರಾವರಿಯಿಂದ ಕೂಡಿದ ಫಲವತ್ತಾದ ಕೃಷಿ ಭೂಮಿಯಾಗಿದೆ. ಇಲ್ಲಿ ಬಹು ವಾರ್ಷಿಕ ಬೆಳೆಗಳು ಸೇರಿದಂತೆ ಆಹಾರಧಾನ್ಯ, ಹಾಲು ವಿವಿಧ ರೀತಿಯ ತರಕಾರಿ , ಹಣ್ಣುಗಳನ್ನು ಬೆಳೆಯಲಾಗುತ್ತಿದೆ.ಪ್ರಾಥಮಿಕ ಅಧಿಸೂಚನೆ ಮಾಹಿತಿ ತಿಳಿದ ದಿನದಿಂದಲೇ ರೈತರು ವಿರೋಧ ವ್ಯಕ್ತಪಡಿಸಿ ಬೈರಮಂಗಲ ವೃತ್ತದಲ್ಲಿ 428 ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಾ ಬಂದಿದ್ದಾರೆ. ಅಲ್ಲದೆ ಪ್ರಾಥಮಿಕ ಅಧಿಸೂಚನೆಗೆ ಸುಮಾರು 3500ಕ್ಕೂ ಹೆಚ್ಚು ರೈತ ಕುಟುಂಬಗಳು ಆಕ್ಷೇಪಣೆಯನ್ನು ಲಿಖಿತವಾಗಿ ಸಲ್ಲಿಸಿವೆ. ನಮ್ಮ ಚಳವಳಿಗೆ ಅನೇಕ ಸಂಘಟನೆಗಳು ಬೆಂಬಲ ನೀಡಿದ್ದು, ಹಲವಾರು ಬಗೆಯ ಹೋರಾಟಗಳು ನಡೆದಿವೆ ಎಂದು ರೈತ ಮುಖಂಡರು, ಡಿ.ಕೆ.ಶಿವಕುಮಾರ್ ಅವರಿಗೆ ಮನವರಿಕೆ ಮಾಡಿಕೊಟ್ಟರು.
ರೈತರ ಅಹವಾಲು ಆಲಿಸಿದ ಡಿ.ಕೆ.ಶಿವಕುಮಾರ್ ಬಿಡದಿ ಟೌನ್ ಶಿಪ್ ಗಾಗಿ ನೋಟಿಫಿಕೇಷನ್ ಮಾಡಿರುವುದನ್ನು ಡಿ ನೋಟಿಫಿಕೇಷನ್ ಮಾಡಲು ಸಾಧ್ಯವಿಲ್ಲ. ಅದರಿಂದಾಗುವ ಕಾನೂನು ತೊಡಕುಗಳನ್ನು ವಿವರಿಸಿದರು. ಅಲ್ಲದೆ, ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ಅನುಷ್ಠಾನದಿಂದಾಗ ಅನುಕೂಲ, ಭೂ ಮಾಲೀಕರಿಗೆ ಸಿಗುವ ನ್ಯಾಯಯುತ ಪರಿಹಾರದ ಬಗ್ಗೆ ಮನವರಿಕೆ ಮಾಡಿಕೊಟ್ಟರು ಎನ್ನಲಾಗಿದೆ.
ಕೋಟ್ ...
-ಪ್ರಕಾಶ , ಮಾಜಿ ಸದಸ್ಯರು, ತಾಪಂ
ರೈತರ ಬೇಡಿಕೆಗಳು
2. ಬೈರಮಂಗಲ ಹಾಗೂ ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಪೂರ್ಣ ನೀರಾವರಿಯಿಂದ ಕೂಡಿದ ಫಲವತ್ತಾದ ಬಹುವಾರ್ಷಿಕ ಕೃಷಿ ಭೂಮಿಯ ಭೂ ಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದು ಪಡಿಸಬೇಕು.
17ಕೆಆರ್ ಎಂಎನ್ 3.ಜೆಪಿಜಿ
ಬೆಂಗಳೂರಿನ ಖಾಸಗಿ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿಗಳ ರೈತರ ಭೂ ಹಿತರಕ್ಷಣಾ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಂದ ಅಹವಾಲು ಆಲಿಸಿ ಚರ್ಚಿಸಿದರು.