ಕನ್ನಡಪ್ರಭ ವಾರ್ತೆ ಕುಶಾಲನಗರ
ಕಳೆದ ಕೆಲವು ವರ್ಷಗಳಿಂದ ಕುಶಾಲನಗರ ಮೈಸೂರು ರಾಷ್ಟ್ರೀಯ ಹೆದ್ದಾರಿ ರಸ್ತೆ ಬದಿಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ವಾರದ ಸಂತೆ ನಡೆಯುತ್ತಿದ್ದು ಸಾರ್ವಜನಿಕರಿಂದ ಹಲವು ದೂರುಗಳು ಕೇಳಿ ಬಂದಿವೆ.
ಸಂತೆ ಮಾರುಕಟ್ಟೆಯಲ್ಲಿ ಮಧ್ಯವರ್ತಿಗಳ ಹಾವಳಿ, ಹೆದ್ದಾರಿಯಲ್ಲಿ ವಾಹನ ಸಂಚಾರ ಸಮಸ್ಯೆ, ಸಂತೆ ಆವರಣದಲ್ಲಿ ಕಸ ವಿಲೇವಾರಿ ಸಮಸ್ಯೆಗಳ ಸೇರಿದಂತೆ ಸಮರ್ಪಕವಾಗಿ ಸಂತೆ ನಡೆಸುವ ಸಂಬಂಧ ಸ್ಥಳೀಯ ಪೊಲೀಸ್, ಕೃಷಿ ಮಾರುಕಟ್ಟೆ ಅಧಿಕಾರಿಗಳು ಮತ್ತು ಸಂತೆ ವ್ಯಾಪಾರಿಗಳ ಸಂಘದ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದರು.ಸಂತೆ ಪ್ರಾರಂಭವಾಗುವ ಸಂದರ್ಭ ಸಂಬಂಧಿಸಿದ ಅಧಿಕಾರಿಗಳು ಆ ಬಗ್ಗೆ ಗಮನಿಸಿ ಕ್ರಮ ಕೈಗೊಳ್ಳುವುದು.
ವ್ಯಾಪಾರಿಗಳು ಎಲ್ಲೆಂದರಲ್ಲಿ ವ್ಯಾಪಾರ ಮಾಡುವ ಮೂಲಕ ಸಂಚಾರ ವ್ಯವಸ್ಥೆಗೆ ತೊಡಕುಂಟು ಮಾಡುವುದು ವಾಹನಗಳ ಅಸಮರ್ಪಕ ನಿಲುಗಡೆ ಹಿನ್ನೆಲೆಯಲ್ಲಿ ಹೆದ್ದಾರಿ ರಸ್ತೆಗೆ ಸಂಚಾರಕ್ಕೆ ಅಡ್ಡಿ ಉಂಟು ಮಾಡುವುದು ಇವುಗಳನ್ನು ತಕ್ಷಣ ಸರಿಪಡಿಸುವಂತೆ ತಹಸೀಲ್ದಾರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸಲಹೆ ನೀಡಿದರು.
ಮುಂದಿನ ಮಂಗಳವಾರದಿಂದ ಸಮರ್ಪಕವಾಗಿ ಸಂತೆ ವ್ಯಾಪಾರ ವಹಿವಾಟು ಮತ್ತು ಯಾವುದೇ ರೀತಿಯ ಗೊಂದಲ ಇರದಂತೆ ನೋಡಿಕೊಳ್ಳುವ ಬಗ್ಗೆ ಅಧಿಕಾರಿಗಳಿಗೆ ಸಲಹೆ ನೀಡಿದರು.