ಕನ್ನಡಪ್ರಭ ವಾರ್ತೆ ಬೆಳಗಾವಿವಾಯು ಅಗ್ನಿವೀರ ತರಬೇತಿ ಪೂರ್ಣಗೊಳಿಸಿದ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಸಾಂಬ್ರಾದ ಏರ್ಮೆನ್ ಟ್ರೈನಿಂಗ್ ಸ್ಕೂಲ್ನಲ್ಲಿ ಶನಿವಾರ ನಡೆಯಿತು
ಕನ್ನಡಪ್ರಭ ವಾರ್ತೆ ಬೆಳಗಾವಿವಾಯು ಅಗ್ನಿವೀರ ತರಬೇತಿ ಪೂರ್ಣಗೊಳಿಸಿದ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಸಾಂಬ್ರಾದ ಏರ್ಮೆನ್ ಟ್ರೈನಿಂಗ್ ಸ್ಕೂಲ್ನಲ್ಲಿ ಶನಿವಾರ ನಡೆಯಿತು. ಪುರುಷ ಮತ್ತು ಮಹಿಳೆಯರು ಸೇರಿ ಒಟ್ಟು 2614 ಪ್ರಶಿಕ್ಷಣಾರ್ಥಿಗಳು 22 ವಾರಗಳ ಅವಧಿಯ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರು. ಆಕರ್ಷಕ ಪಥಸಂಚಲನವನ್ನು ನಡೆಸಿದರು. ಅಲ್ಲದೇ, ಪ್ರಶಿಕ್ಷಣಾರ್ಥಿಗಳು ವಿವಿಧ ದೈಹಿತ ಕೌಶಲ್ಯಗಳನ್ನು ಕೂಡ ಪ್ರದರ್ಶಿಸಿದರು.
ಏರ್ ವೈಸ್ ಮಾರ್ಷಲ್ ಆರ್ ರವಿಶಂಕರ್ ಅವರು ಪಾಸಿಂಗ್ ಔಟ್ ಪರೇಡ್ನ ಪರಿಶೀಲಿಸಿ, ತರಬೇತಿ ಪೂರ್ಣಗೊಳಿಸಿದ ಪ್ರಶಿಕ್ಷಣಾರ್ಥಿಗಳನ್ನು ಅಭಿನಂದಿಸಿದರು. ಅಲ್ಲದೇ, ವಿವಿಧ ವಿಭಾಗಗಳಲ್ಲಿ ಅವರ ಅತ್ಯುತ್ತಮ ಸಾಧನೆಗಾಗಿ ಪ್ರತಿಭಾನ್ವಿತ ಪ್ರಶಿಕ್ಷಣಾರ್ಥಿಗಳಿಗೆ ಟ್ರೋಫಿಗಳನ್ನು ನೀಡಿ ಗೌರವಿಸಿದರು. ಎಜಿವಿಟಿ ವಿವೇಕ್ ಸಿಂಗ್ ರಾವತ್ ಅವರಿಗೆ ಅತ್ಯುತ್ತಮ ಶೈಕ್ಷಣಿಕ ಪ್ರಶಸ್ತಿ, ಎಜಿವಿಟಿ ನೀತೇಶ್ ಬೆಸ್ಟ್ ಇನ್ ಗ್ರೌಂಡ್ ಸರ್ವಿಸ್ ಟ್ರೈನಿಂಗ್ ಮತ್ತು ಎಜಿವಿಟಿ ವಿವೇಕ್ ಸಿಂಗ್ ರಾವತ್ ಅತ್ಯುತ್ತಮ ಆಲ್ ರೌಂಡರ್ ಪ್ರಶಸ್ತಿಗೆ ಭಾಜನರಾದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.