ಬೆದರಿಕೆಯೊಡ್ಡಿ ಪಾದಯಾತ್ರೆಗೆ ಜೆಡಿಎಸ್‌ ಸೇರ್ಪಡೆ: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಟೀಕೆ

KannadaprabhaNewsNetwork |  
Published : Aug 03, 2024, 12:34 AM ISTUpdated : Aug 03, 2024, 10:48 AM IST
 ಡಿಕೆಶಿ  | Kannada Prabha

ಸಾರಾಂಶ

ಜೆಡಿಎಸ್‌ನವರನ್ನು ಹೆದರಿಸಿ, ಬೆದರಿಸಿ ಪಾದಯಾತ್ರೆಗೆ ಸೇರಿಸಿಕೊಂಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರೋಪಿಸಿರು.

 ಬೆಂಗಳೂರು :  ಜೆಡಿಎಸ್‌ನವರನ್ನು ಹೆದರಿಸಿ, ಬೆದರಿಸಿ ಪಾದಯಾತ್ರೆಗೆ ಸೇರಿಸಿಕೊಂಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರೋಪಿಸಿರು.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾದಯಾತ್ರೆಯಿಂದ ಜೆಡಿಎಸ್‌ನವರಿಗೆ ತಮ್ಮ ಪ್ರಾಬಲ್ಯ ಕಳೆದುಕೊಳ್ಳುವ ಭೀತಿ ಇತ್ತು. ಹೀಗಾಗಿ, ಅವರು ಅದರಿಂದ ದೂರಾಗಲು ಪ್ರಯತ್ನಿಸಿದರು. ಆದರೆ, ಅವರನ್ನು ಬೆದರಿಸಿ ಸೇರಿಸಿಕೊಳ್ಳಲಾಗಿದೆ. ಮುಡಾ ನಿವೇಶನ ಹಂಚಿಕೆ ಹಗರಣ ಮತ್ತು ವಾಲ್ಮೀಕಿ ನಿಗಮ ಹಗರಣದ ನೆಪದಲ್ಲಿ ಬಿಜೆಪಿ-ಜೆಡಿಎಸ್‌ನವರು ನಮ್ಮ ಸರ್ಕಾರದ ವಿರುದ್ಧ ಮಾಡುತ್ತಿರುವ ಪಾದಯಾತ್ರೆಗೆ ಯಾವುದೇ ವಿಷಯ ಮತ್ತು ಅರ್ಥ ಇಲ್ಲ ಎಂದು ಹೇಳಿದರು.

ವಿಪಕ್ಷಗಳು ತಮ್ಮ ಅವಧಿಯ ಹಗರಣಗಳನ್ನು ಬಯಲಿಗೆ ಎಳೆಯಲು ಕೋರಿ ಪಾದಯಾತ್ರೆ ನಡೆಸುತ್ತಿರುವಂತಿದೆ. ಅದಕ್ಕಾಗಿ ನಾವು ಪ್ರತಿ ನಿತ್ಯ ಅವರ ಅವಧಿಯ ನಾಲ್ಕೈದು ಹಗರಣಗಳು, ವಿಷಯಗಳ ಕುರಿತು ಪ್ರಶ್ನೆಗಳನ್ನು ಕೇಳುತ್ತೇವೆ. ಅದಕ್ಕವರು ಉತ್ತರ ನೀಡಲಿ. ಅವರ ಪಾದಯಾತ್ರೆಗೆ ಪ್ರತಿಯಾಗಿ ನಾವು ಜನಾಂದೋಲನ ಮಾಡುತ್ತೇವೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸೌದೆ ಒಲೆಗೆ ಖಾನಾವಳಿ ಮೊರೆ-ಒಂದು ಕ್ವಿಂಟಲ್ ಕಟ್ಟಿಗೆಗೆ 900 ರು. ವೆಚ್ಚ
ಮಂಗ್ಳೂರಿಗೆ 2 ಲಕ್ಷ ಟನ್‌ ಕಚ್ಚಾ ತೈಲ ಹಡಗು ಆಗಮನ