ಸಿಎಂ ಸ್ಥಾನದ ವಿಚಾರ : ನಾನುಂಟು ದೇವರುಂಟು ಎಂದ ಡಿ.ಕೆ.ಶಿವಕುಮಾರ್

KannadaprabhaNewsNetwork |  
Published : Oct 15, 2025, 02:06 AM ISTUpdated : Oct 15, 2025, 11:52 AM IST
DK Shivakumar

ಸಾರಾಂಶ

ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಕುಟುಂಬ ಸಮೇತರಾಗಿ ಬಂದು ಮಂಗಳವಾರ ಹಾಸನಾಂಬ ದೇವಿ ದರ್ಶನ ಪಡೆದರು. ನಂತರ ಮಾತನಾಡಿ, ಈ ಬಾರಿ ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಉತ್ತಮ‌ ವ್ಯವಸ್ಥೆ ಮಾಡಿದ್ದಾರೆ. 

ಹಾಸನ: ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಕುಟುಂಬ ಸಮೇತರಾಗಿ ಬಂದು ಮಂಗಳವಾರ ಹಾಸನಾಂಬ ದೇವಿ ದರ್ಶನ ಪಡೆದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಾರಿ ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಉತ್ತಮ‌ ವ್ಯವಸ್ಥೆ ಮಾಡಿದ್ದಾರೆ. ಪ್ರತಿವರ್ಷ ದೇವಿ ದರ್ಶನ‌ ಮಾಡುತ್ತಿದ್ದೇನೆ.‌ ದೇವರು ಹಾಗೂ ಭಕ್ತರಿಗೂ ವ್ಯವಹಾರ ನಡೆಯುವ ಜಾಗವೇ ದೇವಸ್ಥಾನ. ನಾನು ಕೂಡ ಎಲ್ಲರಿಗೂ ಒಳ್ಳೆಯದಾಗಲೆಂದು ದೇವರಲ್ಲಿ ಬೇಡಿಕೊಂಡಿದ್ದೇನೆ ಎಂದರು.

ಸಿಎಂ ಸ್ಥಾನದ ವಿಚಾರವಾಗಿ ನಾನುಂಟು ದೇವರುಂಟು ಎಂದಷ್ಟೆ ಹೇಳಿದರು.ಈ ಸಂದರ್ಭದಲ್ಲಿ ಸಂಸದರಾದ ಶ್ರೇಯಸ್ ಎಂ ಪಟೇಲ್, ಕರ್ನಾಟಕ ರಾಜ್ಯ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಎಂ.ಶಿವಲಿಂಗೇಗೌಡ, ಜಿಲ್ಲಾಧಿಕಾರಿ ಲತಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್. ಪೂರ್ಣಿಮಾ ಮತ್ತಿತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಸಾಧನೆಗೆ ಸತತ ಪ್ರಯತ್ನ, ಪ್ರಾಮಾಣಿಕತೆ ಅಗತ್ಯ
ಹಿಪ್ಪರಗಿ ಬ್ಯಾರೇಜ್‌ ನೀರು ಸಂಗ್ರಹದಲ್ಲಿ ಚೇತರಿಕೆ