ಬದನಗುಪ್ಪೆ ಸರ್ಕಾರಿ ಪ್ರಾಥಮಿಕ ಶಾಲೆಗೆ ಜಿಲ್ಲಾಧಿಕಾರಿ ಶ್ರೀರೂಪ ಅನಿರೀಕ್ಷಿತ ಭೇಟಿ

KannadaprabhaNewsNetwork |  
Published : Jan 08, 2026, 01:45 AM IST
 ಜಿಲ್ಲಾಧಿಕಾರಿ ಶ್ರೀರೂಪ | Kannada Prabha

ಸಾರಾಂಶ

ಶಾಲೆಯಲ್ಲಿ ಬಿಸಿಯೂಟದ ವ್ಯವಸ್ಥೆ, ಬಿಸಿಯೂಟ ತಯಾರಿಕೆಗೆ ದಸ್ತಾನು ಮಾಡಲಾಗಿದ್ದ ಆಹಾರ ಸಾಮಗ್ರಿ ಪರಿಶೀಲಿಸಿದರು. ಕುಡಿಯುವ ನೀರು, ಶಾಲೆಯ ಸ್ವಚ್ಚತೆ ಸಹ ವೀಕ್ಷಿಸಿದರು.

ಕನ್ನಡಪ್ರಭ ವಾರ್ತೆ, ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪ ಅವರು ತಾಲೂಕಿನ ಬದನಗುಪ್ಪೆಯ ಸರ್ಕಾರಿ ಪ್ರಾಥಮಿಕ ಶಾಲೆಗೆ ಬುಧವಾರ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು.

ಶಾಲೆಯಲ್ಲಿ ಬಿಸಿಯೂಟದ ವ್ಯವಸ್ಥೆ, ಬಿಸಿಯೂಟ ತಯಾರಿಕೆಗೆ ದಸ್ತಾನು ಮಾಡಲಾಗಿದ್ದ ಆಹಾರ ಸಾಮಗ್ರಿ ಪರಿಶೀಲಿಸಿದರು. ಕುಡಿಯುವ ನೀರು, ಶಾಲೆಯ ಸ್ವಚ್ಚತೆ ಸಹ ವೀಕ್ಷಿಸಿದರು.

ಮಕ್ಕಳ ಹಾಜರಾತಿ, ಬೋಧನಾ ಪ್ರಕ್ರಿಯೆ, ಇನ್ನಿತರ ವ್ಯವಸ್ಥೆಗಳನ್ನು ಪರಿಶೀಲಿಸಿ ಮಾಹಿತಿ ಪಡೆದುಕೊಂಡರು. ಮಕ್ಕಳೊಂದಿಗೆ ಆತ್ಮೀಯವಾಗಿ ಸಂವಾದ ನಡೆಸಿ ಕಲಿಕಾ ಸಾಮರ್ಥ್ಯದ ಬಗ್ಗೆ ತಿಳಿದುಕೊಂಡರು.

ಶಾಲೆಯಲ್ಲಿ ಆಗಬೇಕಿರುವ ಮೂಲ ಸೌಲಭ್ಯಗಳ ಕಾಮಗಾರಿ ನಿರ್ವಹಣೆ ಸಂಬಂಧ ಅಗತ್ಯ ಸೂಚನೆಯನ್ನು ನೀಡಿದರು. ಇದಕ್ಕೂ ಮೊದಲು ಮಂಗಳವಾರ ರಾತ್ರಿ ಬೆಂಡರವಾಡಿ ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಪಘಾತ ಕುರಿತು ಮಾಹಿತಿ ಪಡೆದರು. ಸಾರ್ವಜನಿಕರು, ವಾಹನ ಸಂಚಾರ ಸುರಕ್ಷತೆಗೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ