ಬಳ್ಳಾರಿ: ಉಪಲೋಕಾಯುಕ್ತ ನ್ಯಾ.ಬಿ.ವೀರಪ್ಪ ನಗರದ ಜಿಲ್ಲಾ ಆಸ್ಪತ್ರೆ ಮತ್ತು ಬಿಮ್ಸ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅವಧಿ ಮೀರಿದ ಔಷಧಿಗಳನ್ನು ವಿತರಿಸುವಂತಿಲ್ಲ.
ಜಿಲ್ಲಾಸ್ಪತ್ರೆ, ಬಿಮ್ಸ್ ಸೇರಿದಂತೆ ಯಾವುದೇ ಆಸ್ಪತ್ರೆಗಳಲ್ಲಿ ಅವಧಿ ಮೀರಿದ ಔಷಧಿ, ಶಸ್ತ್ರಚಿಕಿತ್ಸಕ ವಸ್ತುಗಳನ್ನು ಯಾವುದೇ ಕಾರಣಕ್ಕೂ ವಿತರಿಸುವಂತಿಲ್ಲ ಮತ್ತು ಬಳಸುವಂತಿಲ್ಲ ಎಂದು ಜಿಲ್ಲಾ ಆಸ್ಪತ್ರೆ ಮತ್ತು ಬಿಮ್ಸ್ ಔಷಧಿ ವಿತರಣಾ ವಿಭಾಗದ ವೈದ್ಯಾಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳಿಗೆ ಔಷಧಿಯನ್ನು ಹೊರಗಡೆ ತರುವಂತೆ ಚೀಟಿ ಬರೆದುಕೊಡಲಾಗುತ್ತಿದೆ ಎಂದು ಅನೇಕ ರೋಗಿಗಳು ದೂರಿದ್ದಾರೆ. ಯಾವುದೇ ಕಾರಣಕ್ಕೂ ಹೊರಗಡೆ ತರಲು ಸೂಚನೆ ನೀಡಬಾರದು. ಆಸ್ಪತ್ರೆಯಿಂದಲೇ ವಿತರಿಸುವಂತೆ ಸರ್ಕಾರದ ಸುತ್ತೋಲೆ ಇದ್ದಾಗ್ಯೂ ಹೊರಗಡೆ ಔಷಧಿ ತರುವಂತೆ ಚೀಟಿ ಬರೆದುಕೊಡುವುದು ಏಕೆ ಎಂದು ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸರ್ಕಾರಿ ಆಸ್ಪತ್ರೆಗಳಿಗೆ ಶ್ರೀಮಂತರು ಬರುವುದಿಲ್ಲ. ಬಡವರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಅವರಿಗೆ ಸೂಕ್ತ ವೈದ್ಯಕೀಯ ಸೇವೆ ನೀಡುವುದು ನಿಮ್ಮ ಜವಾಬ್ದಾರಿ. ಆದರೆ, ನೀವು ರೋಗಿಗಳನ್ನು ನಿರ್ಲಕ್ಷ್ಯ ಮಾಡುತ್ತಿರುವುದು ಕಂಡು ಬರುತ್ತಿದ್ದು, ಹೊರಗಡೆ ಔಷಧಿ ತರಲು ಹೇಳುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ನಿಮ್ಮಂದಾಗಿಯೇ (ವೈದ್ಯರು) ಬಿಮ್ಸ್ ಆಸ್ಪತ್ರೆಯ ಸುತ್ತ 20ಕ್ಕೂ ಹೆಚ್ಚು ಔಷಧಿ ಮಳಿಗೆಗಳು ಸುತ್ತುವರಿದಿವೆ ಎಂದು ಅಸಮಾಧಾನಗೊಂಡರು.
ಆರ್ಟಿಒ ಕಚೇರಿಗೆ ದಿಢೀರ್ ಭೇಟಿ:
ಈ ವೇಳೆ ಜಿಲ್ಲಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ, ಎಸ್ಪಿ ಡಾ.ಶೋಭಾರಾಣಿ, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಎಡಿಸಿ ಮಹಮ್ಮದ್ ಝುಬೇರ್, ಲೋಕಾಯುಕ್ತದ ಅಪರ ನಿಬಂಧಕ ಕೆ.ಎಂ.ರಾಜಶೇಖರ್, ಸಹಾಯಕ ನಿಬಂಧಕ ಶುಭವೀರ್ ಜೈನ್.ಬಿ., ಉಪ ನಿಬಂಧಕ ಅರವಿಂದ.ಎನ್.ವಿ., ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ, ಬಳ್ಳಾರಿ ಲೋಕಾಯುಕ್ತ ಎಸ್ಪಿ ಸಿ.ಸಿದ್ದರಾಜು, ಡಿವೈಎಸ್ಪಿ ವಸಂತಕುಮಾರ್ ಇದ್ದರು.