ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಹಿಂದೂ ಜಾಗರಣಾ ವೇದಿಕೆ ಪ್ರಾಂತ ಕಾರ್ಯಕಾರಣಿ ಸದಸ್ಯ ಶ್ರೀಕಾಂತ್ ಶೆಟ್ಟಿ ಕಾರ್ಕಳ ದಿಕ್ಕೂಚಿ ಭಾಷಣ ಮಾಡಿದರು.
ಸಾವಿರ ಕಂಬದ ಬಸದಿಯಿಂದ ಸ್ವರಾಜ್ಯ ಮೈದಾನದವರೆಗೆ ಕುಣಿತ ಭಜನೆಯ ತಂಡಗಳು ದೇವರ ನಾಮಸ್ಮರಣೆಯನ್ನು ಮಾಡುತ್ತಾ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ನೀಡುತ್ತಿರುವ ಅವಿವೇಕಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂದು ಭಗವಂತನಲ್ಲಿ ಪ್ರಾರ್ಥಿಸಿದರು.ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಚಂದ್ರಶೇಖರ್, ತಾಲೂಕು ಅಧ್ಯಕ್ಷ ಲಕ್ಷ್ಮಣ್ ಸುವರ್ಣ, ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲಾ ಸಹ ಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ, ವಿಶ್ವಹಿಂದು ಪರಿಷತ್ ಕಾರ್ಯಾಧ್ಯಕ್ಷ ಶಾಮ್ ಹೆಗ್ಡೆ, ಸಾಮಾಜಿಕ ಕಾರ್ಯಕರ್ತ ರಮಿತಾ ಶೈಲೇಂದ್ರ ಕಾರ್ಕಳ, ಹಿಂದು ಸಂಘಟನೆ ಪ್ರಮುಖರಾದ ಪ್ರಶಾಂತ್ ಕೆಂಪುಗುಡ್ಡೆ, ಸುಚೇತನ್ ಜೈನ್, ರಂಜಿತ್ ಪೂಜಾರಿ ತೋಡಾರು, ಅಶೋಕ್ ಶೆಟ್ಟಿ ಬೇಲೂಟ್ಟು, ಮಂಜುನಾಥ್ ಬೆಳುವಾಯಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.