ಕನ್ನಡಪ್ರಭ ವಾರ್ತೆ ತುಮಕೂರು
ನಗರದ ಸಿದ್ಧಗಂಗಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಒಕ್ಕಲಿಗ ಯುವ ಬ್ರಿಗೇಡ್, ಎನ್ಆರ್ಐ, ಒಕ್ಕಲಿಗ ಬ್ರಿಗೇಡ್ ವತಿಯಿಂದ ಎಂಬ ಹೆಸರಿನಲ್ಲಿ ಹಮ್ಮಿಕೊಂಡಿದ್ದ ಉದ್ಯೋಗಮೇಳ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಲು ಇದೊಂದು ಉತ್ತಮ ವೇದಿಕೆ ಎಂದರು.
ಅಭ್ಯರ್ಥಿಗಳಿಗೆ ಶಿಕ್ಷಣವಷ್ಟೇ ಮುಖ್ಯವಲ್ಲ. ನಿಮ್ಮಲ್ಲಿರುವ ಮಾನವೀಯ ಗುಣಗಳು, ಸಾಮಾನ್ಯ ಜ್ಞಾನ ಹಾಗೂ ನಿಮ್ಮ ಸಾಮಾಜಿಕ ನಡವಳಿಕೆಗಳು ಸಹ ಉದ್ಯೋಗ ನೀಡಲು ಸಹಕಾರಿಯಾಗಿರುತ್ತದೆ. ಕಮ್ಯುನಿಕೇಷನ್ ಸ್ಕಿಲ್ ಕೂಡ ಮುಖ್ಯ ವಾಗುತ್ತದೆ ಎಂದರು.ಇಂದು ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಒಂದು ಹುದ್ದೆಗೆ ಸಾವಿರಾರು ಜನರು ಅರ್ಜಿ ಸಲ್ಲಿಸುತ್ತಿರುವುದನ್ನು ಕಾಣಬಹುದು. ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಪ್ರವೇಶ ಪರೀಕ್ಷೆ ನಡೆಯುತ್ತಿದ್ದು, ಲಕ್ಷಾಂತರ ಜನರು ಪರೀಕ್ಷೆ ಬರೆಯುತ್ತಿದ್ದಾರೆ. ಸ್ವಾವಲಂಬಿಗಳಾಗಿ ಬದುಕಲು ಇಂತಹದ್ದೇ ಹುದ್ದೆ ಬೇಕು ಅಂತಿಲ್ಲ. ಆದರೆ ನಾವು ಮಾಡುವ ಕೆಲಸದಲ್ಲಿ ಶ್ರದ್ದೆ ಮತ್ತು ಪ್ರಾಮಾಣಿಕತೆ ಮುಖ್ಯ. ಕೃಷಿಯ ಕಡೆಗೆ ಯಾರು ಸಹ ತಿರುಗಿಯೂ ನೋಡುತ್ತಿಲ್ಲ. ಕೊರೊನ ಸಂದರ್ಭದಲ್ಲಿ ಕೆಲವರು ಕೃಷಿಯ ಕಡೆಗೆ ಮುಖ ಮಾಡಿದ್ದರು. ಪರಾವಲಂಬಿಗಳಾಗದೆ ಸ್ವಾವಲಂಬಿಗಳಾಗಿ ಸಿಕ್ಕ ಕೆಲಸವನ್ನು ಮಾಡಿ. ಕೆಲಸಕ್ಕೆ ಸೇರಿದ ನಂತರ ಬಿಡುವ ಕೆಲಸ ಆಗಬಾರದು. ಸಂಸ್ಥೆ ಮತ್ತು ಉದ್ಯೋಗಿ ಇಬ್ಬರ ನಡುವೆ ಬಿಡಿಸಲಾರದ ಸಂಬಂಧವಿದೆ ಎಂದು ಸ್ವಾಮೀಜಿ ನುಡಿದರು.
ಕಾರ್ಯಕ್ರಮದಲ್ಲಿ ಉದ್ಯೋಗ ಮೇಳದ ಅವಶ್ಯಕತೆ ಕುರಿತಂತೆ ಒಕ್ಕಲಿಗ ಯುವ ಬ್ರಿಗೇಡ್ನ ಸಂಸ್ಥಾಪಕ ಅಧ್ಯಕ್ಷ ನಂಜೇಗೌಡ ನಂಜುಂಡ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಸುಮಾರು ೪೦ಕ್ಕೂ ಹೆಚ್ಚು ವಿವಿಧ ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಂಡಿದ್ದವು.