ಬದುಕಿಗೆ ಆಸೆಗಳೇ ಇಂಧನ: ಜಿ.ಎಲ್.ತ್ರಿಪುರಾಂತಕ

KannadaprabhaNewsNetwork |  
Published : Dec 24, 2025, 03:00 AM IST
ಜಿ.ಎಲ್‌ತ್ರಿಪುರಾಂತಕ | Kannada Prabha

ಸಾರಾಂಶ

ಕಾರ್ಕಳ ಜ್ಞಾನಸುಧಾಶಿಕ್ಷಣ ಸಂಸ್ಥೆಯ ಆವರಣದಲ್ಲಿ ಮೌಲ್ಯಸುಧಾ ಮಾಲಿಕೆ-೪೩ರಲ್ಲಿ‘ಆಕಾಂಕ್ಷೆಗಳು ಮತ್ತು ಕನಸುಗಳು’ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೆರವೇರಿತು.

ಕಾರ್ಕಳ: ಬದುಕಿಗೆ ಆಸೆಗಳೇ ಇಂಧನ. ನಮ್ಮ ಸಾಮರ್ಥ್ಯದ ಅರಿವು ನಮಗಿರಬೇಕು. ನಮ್ಮಗೌರವದ ಸ್ಥಾನಮಾನಗಳು ಸಾವಿರ ಮಂದಿಗೆ ಕನಸಿನ ತಾಣವಾಗಿರುವಂತೆ ಬೆಳೆಯಬೇಕು. ಅತಿಯಾಸೆ ಇರುವವನು ಬಡವ, ಮಹತ್ತರವಾದ ಕನಸುಗಳನ್ನು ಕಾಣುವವನು ಶ್ರೀಮಂತ ಎಂದು ಮೈಸೂರಿನ ಸುತ್ತೂರು ಜೆ.ಎಸ್.ಎಸ್ ಸಂಸ್ಥೆಗಳ ಸಂಯೋಜನಾಧಿಕಾರಿ ಹಾಗೂ ವಾಗ್ಮಿ ಜಿ.ಎಲ್‌ ತ್ರಿಪುರಾಂತಕ ಹೇಳಿದರು.

ಕಾರ್ಕಳ ಜ್ಞಾನಸುಧಾಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್‌ ಎಜುಕೇಶನ್‌ ಟ್ರಸ್ಟ್‌ ಸಹಯೋಗದಲ್ಲಿ ನಡೆಯುತ್ತಿರುವ ಮೌಲ್ಯಸುಧಾ ಮಾಲಿಕೆ-೪೩ರಲ್ಲಿ‘ಆಕಾಂಕ್ಷೆಗಳು ಮತ್ತು ಕನಸುಗಳು’ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು.

ಬೆಲೆಬಾಳುವ ಒಂದು ವಜ್ರದಕ್ಕಿದ ಮೇಲೆ ಎಷ್ಟಾದರೂ ಕಲ್ಲುಗಳನ್ನು ಕಲೆ ಹಾಕಬಹುದು. ಹೆತ್ತವರು ನಮ್ಮ ಆಸೆಗಳನ್ನು ಈಡೇರಿಸಬಹುದು. ಆದರೆ ನಮ್ಮ ಕನಸುಗಳನ್ನು ನನಸು ಮಾಡುವ ಹೊಣೆ ನಮ್ಮದೇ ಎಂದರು.

ಕಾರ್ಯಕ್ರಮದಲ್ಲಿ ಅಜೆಕಾರ್ ಪದ್ಮಗೋಪಾಲ್‌ ಎಜ್ಯುಕೇಶನ್ ಟ್ರಸ್ಟಿನ ಟ್ರಸ್ಟಿ ಅನಿಲ್ ಕುಮಾರ್‌ ಜೈನ್, ಸಿ.ಇ.ಒ ಹಾಗೂ ಪ್ರಾಂಶುಪಾಲರಾದ ದಿನೇಶ್ ಎಂ ಕೊಡವೂರ್, ಉಪಪ್ರಾಂಶುಪಾಲರಾದ ಸಾಹಿತ್ಯ ಉಪಸ್ಥಿತರಿದ್ದರು. ಉಪನ್ಯಾಸಕಿ ಸಹನಾ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ