ಬೆಲೆ ಏರಿಕೆ ಇದ್ದರೂ ಯುಗಾದಿ ಹಬ್ಬದ ವ್ಯಾಪಾರ ಬಲು ಜೋರು

KannadaprabhaNewsNetwork |  
Published : Mar 30, 2025, 03:01 AM IST
ಚಿತ್ರ ಶೀರ್ಷಿಕೆ28ಎಂ ಎಲ್ ಕೆ2ಮೊಳಕಾಲ್ಮುರು ಪಟ್ಟಣದಲ್ಲಿ ಹೂ,ಹಣ್ಣು ಖರೀದಿಯಲ್ಲಿ ತೊಡಗಿದ್ದ ಜನರು. | Kannada Prabha

ಸಾರಾಂಶ

ಮೊಳಕಾಲ್ಮುರು: ತೀವ್ರ ಬೆಲೆ ಏರಿಕೆಯ ನಡುವೆಯೂ ಪಟ್ಟಣ ಸೇರಿದಂತೆ ತಾಲೂಕಿನ ನಾನಾ ಗ್ರಾಮಗಳಲ್ಲಿ ಶನಿವಾರ ಯುಗಾದಿ ಹಬ್ಬದ ವ್ಯಾಪಾರ ಭರ್ಜರಿಯಾಗಿ ನಡೆಯಿತು.

ಮೊಳಕಾಲ್ಮುರು: ತೀವ್ರ ಬೆಲೆ ಏರಿಕೆಯ ನಡುವೆಯೂ ಪಟ್ಟಣ ಸೇರಿದಂತೆ ತಾಲೂಕಿನ ನಾನಾ ಗ್ರಾಮಗಳಲ್ಲಿ ಶನಿವಾರ ಯುಗಾದಿ ಹಬ್ಬದ ವ್ಯಾಪಾರ ಭರ್ಜರಿಯಾಗಿ ನಡೆಯಿತು.ಪಟ್ಟಣ ಹಾಗೂ ತಾಲೂಕಿನ ರಾಂಪುರ ಪ್ರಮುಖ ವ್ಯಾಪಾರ ಕೇಂದ್ರಗಳಲ್ಲಿ ಜನಜಂಗುಳಿ ಕಂಡುಬಂತು. ಯಾವುದೇ ಅಂಗಡಿಗೆ ತೆರಳಿದರೂ ಜನರು ಬೇಳೆ, ಬೆಲ್ಲ, ಸಕ್ಕರೆ, ಅಕ್ಕಿ, ರಾಗಿ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಯಲ್ಲಿ ಮುಗಿ ಬಿದ್ದಿದ್ದು ಕಂಡು ಬಂತು.

ಕಳೆದ ಬಾರಿಗೆ ಹೋಲಿಕೆ ಮಾಡಿಕೊಂಡಲ್ಲಿ ಈ ಬಾರಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿ ಗ್ರಾಹಕರಿಗೆ ಹೊರೆಯಾಗಿದ್ದರೂ ವ್ಯಾಪಾರ ವಹಿವಾಟು ಭರ್ಜರಿಯಾಗಿ ಸಾಗಿತು.

ಸೇವಂತಿಗೆ ಮಾರಿಗೆ 200 ರು. ಕನಕಾಂಬರ 200 ರು., ಕೆ.ಜಿಗೆ ಸೇಬು 100 ರು., ಬಾಳೆಹಣ್ಣು ದರ ನಿಗದಿಯಾಯಾಗಿತ್ತು. ದುಬಾರಿ ಬೆಲೆ ಇದ್ದರೂ ಹೂ, ಹಣ್ಣು, ತರಕಾರಿ, ಬಟ್ಟೆ ಸೇರಿದಂತೆ ದಿನಸಿ ವ್ಯಾಪಾರ ಜೋರಾಗಿಯೇ ನಡೆಯಿತು.

ಅಮವಾಸ್ಯೆಯ ದಿನವಾಗಿದ್ದ ಶನಿವಾರ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ಜರುಗಿದವು. ವಾಹನಗಳಿಗೆ ಹೂಗಳಿಂದ ಸಿಂಗರಿಸಿ ಪೂಜಿಸುವುದು ಕಂಡುಬಂತು. ಬೆಲೆ ಏರಿಕೆಯ ನಡುವೆಯೂ ಯುಗಾದಿ ಹಬ್ಬ ಸಂಭ್ರಮಕ್ಕೆ ಎಂಬಂತೆ ಅಗತ್ಯ ವಸ್ತುಗಳ ವ್ಯಾಪಾರ ಬಿರುಸಾಗಿ ಸಾಗಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಪಾಲಿನ ಶ್ರೀರಾಮ : ಶಾಸಕ ಪ್ರದೀಪ್‌ ಈಶ್ವರ್‌
ಜಿ ರಾಮ್‌ ಜಿ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ ಪಡೆ - ದುಡಿವ ಕೈಗಳ ಅನ್ನ ಕಸಿವ ಕಾಯ್ದೆ