)
ಆತ್ಮಭೂಷಣ್ಕನ್ನಡಪ್ರಭ ವಾರ್ತೆ ಮಂಗಳೂರು
ಉನ್ನತ ಶಿಕ್ಷಣ ಇಲಾಖೆಯಲ್ಲಿ ಸರ್ಕಾರಿ ನೌಕರರು ವ್ಯಾಸೆಕ್ಟಮಿ ಹಾಗೂ ಟ್ಯುಬೋಕ್ಟ್ಯಮಿಯಂತಹ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆಗೆ ಒಳಗಾದರೆ ಅವರಿಗೆ ಪ್ರತ್ಯೇಕ ಸೌಲಭ್ಯ ನೀಡುವುದು ಕ್ರಮ. ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ನಡೆಸಿದವರಿಗೆ ಶೇ.3ರಷ್ಟು ಸಣ್ಣ ಕುಟುಂಬ ನಿಯಂತ್ರಣ ಭತ್ಯೆ/ವಿಶೇಷ ವೇತನ ಬಡ್ತಿಯನ್ನು ನೀಡಲಾಗುತ್ತಿತ್ತು. ಆದರೆ, ಕಳೆದ 9 ವರ್ಷಗಳಿಂದ ಈ ಸೌಲಭ್ಯಕ್ಕೆ ಕೊಕ್ಕೆ ಹಾಕಲಾಗಿದೆ.
ಉನ್ನತ ಶಿಕ್ಷಣ ನೌಕರರಲ್ಲಿ ಯುಜಿಸಿ ವೇತನ ಪಡೆಯುವವರೂ ಇದ್ದಾರೆ. ಇವರೆಲ್ಲರಿಗೆ 2015ರ ವರೆಗೆ ಈ ಪ್ರತ್ಯೇಕ ಸೌಲಭ್ಯ ನೀಡಲಾಗುತ್ತಿತ್ತು. ಹೀಗಾಗಿಯೇ ಅನೇಕ ಮಂದಿ ಪುರುಷ ಹಾಗೂ ಮಹಿಳಾ ನೌಕರರು ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆಗೆ ಒಳಗಾಗಿ ಸೌಲಭ್ಯ ಪಡೆದುಕೊಂಡಿದ್ದರು. ಸಣ್ಣ ಕುಟುಂಬ ನಿಯಂತ್ರಣ ಭತ್ಯೆ/ವಿಶೇಷ ವೇತನ ಬಡ್ತಿಯನ್ನು ನಿಯಮಿತವಾಗಿ ಪಡೆದುಕೊಳ್ಳುತ್ತಿದ್ದರು.ಗೊಂದಲ ಮಾಡಿಕೊಂಡ ಇಲಾಖೆ:
ಹಾಲಿ ಜಾರಿಯಲ್ಲಿರುವ ಯುಜಿಸಿ ನಿಯಮಗಳಲ್ಲಿ ನೀಡಿರುವ ಸೂಚನೆಯ ಅನ್ವಯ ಜಾರಿಗೊಳಿಸಬೇಕೇ ಅಥವಾ ಕೇಂದ್ರ ಸರ್ಕಾರಿ ನೌಕರರಿಗೆ ಮಂಜೂರು ಮಾಡುವ ಸಣ್ಣ ಕುಟುಂಬ ವಿಶೇಷ ವೇತನ ಬಡ್ತಿಯ ದರಗಳಲ್ಲಿ ಮಂಜೂರು ಮಾಡಬೇಕೇ ಅಥವಾ ಈ ಹಿಂದೆ ಇಲಾಖೆಯಲ್ಲಿ ಈ ಭತ್ಯೆಯನ್ನು ಮಂಜೂರು ಮಾಡುತ್ತಿರುವ ಕ್ರಮವನ್ನು ಮುಂದುವರಿಸಬೇಕೇ ಎಂದು ಸರ್ಕಾರದ ಮಾರ್ಗದರ್ಶನ ಕೋರಲಾಗಿದೆ. ಈ ಬಗ್ಗೆ ಇಲಾಖೆಯ ಅಧಿಕಾರಿಗಳು 2022ರಲ್ಲಿ ರಾಜ್ಯದ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರುಗಳಿಗೆ ಪತ್ರ ಬರೆದು ಕೋರಿದ್ದರು. ಅಲ್ಲದೆ, ಈ ಕುರಿತು ಸಿಬ್ಬಂದಿಗಳ ಮನವಿ ಪತ್ರ ಹಾಗೂ ಅಫಿಡವಿಟ್ ಸಲ್ಲಿಸುವಂತೆಯೂ ಸೂಚಿಸಿದ್ದರು.
ಸಣ್ಣ ಕುಟುಂಬ ನಿಯಂತ್ರಣ ಭತ್ಯೆ/ವಿಶೇಷ ವೇತನ ಬಡ್ತಿಯನ್ನು ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಕಾಲೇಜು ಅಧ್ಯಾಪಕರ ಸಂಘ ಸರ್ಕಾರಕ್ಕೆ ಮನವಿ ಸಲ್ಲಿಸಿ ಒತ್ತಾಯಿಸಿದೆ. ಕಳೆದ 9 ವರ್ಷಗಳಿಂದ ನಡೆಸುತ್ತಿದ್ದ ಹೋರಾಟಕ್ಕೆ ಇನ್ನೂ ಫಲ ಸಿಕ್ಕಿಲ್ಲ.
----ಸಿಗದ ಉತ್ತರ
- ನೊಂದ ನೌಕರರು, ಬೆಂಗಳೂರು.