ನರೇಗಾ ಕಾಮಗಾರಿಗಳ ನಾಶ ಅಪರಾಧ

KannadaprabhaNewsNetwork |  
Published : Jul 05, 2024, 12:52 AM IST
ಕೆ ಕೆ ಪಿ ಸುದ್ದಿ 02:ನಾರಾಯಣಪುರ ಗ್ರಾ.ಪಂ.ಆವರಣ  ದಲ್ಲಿ ನಡೆದ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆಯಲ್ಲಿ ಜಿಲ್ಲಾ ಸಂಯೋಜಕ ಶ್ರೀನಿವಾಸ್ ವರದಿ ಮಂಡಿಸಿದರು. | Kannada Prabha

ಸಾರಾಂಶ

ಕನಕಪುರ: ನರೇಗಾ ಯೋಜನೆಯಡಿ ಅನಾವಶ್ಯಕ ಕಾಮಗಾರಿ ಕೈಗೊಂಡು ಒಡೆದು ಹಾಕುವುದು ಕ್ರಿಮಿನಲ್ ಅಪರಾಧ, ಕಾಮಗಾರಿ ಒಡೆದು ಹಾಕಿರುವವರು ಮರು ನಿರ್ಮಾಣ ಮಾಡಬೇಕು. ಇಲ್ಲ ಸರ್ಕಾರಕ್ಕೆ ಹಣ ವಾಪಸ್ ಕಟ್ಟಬೇಕು ಎಂದು ನರೇಗಾ ಜಿಲ್ಲಾ ಸಂಯೋಜಕ ಶ್ರೀನಿವಾಸ್ ಸೂಚನೆ ನೀಡಿದರು.

ಕನಕಪುರ: ನರೇಗಾ ಯೋಜನೆಯಡಿ ಅನಾವಶ್ಯಕ ಕಾಮಗಾರಿ ಕೈಗೊಂಡು ಒಡೆದು ಹಾಕುವುದು ಕ್ರಿಮಿನಲ್ ಅಪರಾಧ, ಕಾಮಗಾರಿ ಒಡೆದು ಹಾಕಿರುವವರು ಮರು ನಿರ್ಮಾಣ ಮಾಡಬೇಕು. ಇಲ್ಲ ಸರ್ಕಾರಕ್ಕೆ ಹಣ ವಾಪಸ್ ಕಟ್ಟಬೇಕು ಎಂದು ನರೇಗಾ ಜಿಲ್ಲಾ ಸಂಯೋಜಕ ಶ್ರೀನಿವಾಸ್ ಸೂಚನೆ ನೀಡಿದರು.

ತಾಲೂಕಿನ ಕಸಬಾ ಹೋಬಳಿಯ ನಾರಾಯಣಪುರ ಗ್ರಾಪಂ ಆವರಣದಲ್ಲಿ ನಡೆದ 2023-2024 ನೇ ಸಾಲಿನ ಸಾಮಾಜಿಕ ಲೆಕ್ಕಪರಿಶೋಧನಾ ವಿಶೇಷ ಗ್ರಾಮ ಸಭೆಯಲ್ಲಿ ವರದಿ ಮಂಡಿಸಿ ಮಾತನಾಡಿದ ಅವರು, ಕೆಲ ಫಲಾನುಭವಿಗಳು ಅನಾವಶ್ಯಕವಾಗಿ ಕಾಮಗಾರಿಗಳನ್ನು ಕೈಗೊಂಡು ನಂತರ ಅದನ್ನು ಒಡೆದು ಹಾಕಿದ್ದಾರೆ. ಈ ರೀತಿ ಹಣ ಪೋಲು ಮಾಡಿದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಲು ಅವಕಾಶ ಇದೆ ಎಂದು ಎಚ್ಚರಿಕೆ ನೀಡಿದರು.

ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಲ್ಲಿ 849 ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಗ್ರಾಪಂ 671 ಕಾಮಗಾರಿಯಿಂದ 2,13,86,698 ರು. ಖರ್ಚಾಗಿದೆ. ಅರಣ್ಯ ಇಲಾಖೆ 23 ಕಾಮಗಾರಿಗಳಿಂದ 23,48,344 ಖರ್ಚು, ತೋಟಗಾರಿಕೆ ಇಲಾಖೆಯ 71 ಕಾಮಗಾರಿಳಿಂದ 7,45,538 ಖರ್ಚಾಗಿದೆ. ಕೃಷಿ ಇಲಾಖೆ 10 ಕಾಮಗಾರಿಗಳಿಂದ 2,76,559 ರು. ಖರ್ಚಾಗಿದೆ. ಒಟ್ಟಾರೆ 849 ಕಾಮಗಾರಿಗಳನ್ನು ಕೈಗೊಂಡು 2,65,19,151 ಖರ್ಚಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಇಂಜಿನಿಯರ್ ಶಿವಪ್ರಸಾದ್ ಮಾತನಾಡಿ, ನರೇಗಾ ಯೋಜನೆಯಡಿ ರೈತರಿಗೆ ಅನುಕೂಲವಾಗುವ ಕಾರ್ಯಕ್ರಮಗಳಿದ್ದು ರೈತರು ತಮಗೆ ಅನುಕೂಲವಾಗುವ ಕಾಮಗಾರಿಗಳನ್ನು ಕೈಗೊಳ್ಳಬೇಕು. ಅನಾವಶ್ಯಕ ಯಾವುದೇ ಕಾಮಗಾರಿಗಳನ್ನು ಕೈಗೊಂಡು ಸರ್ಕಾರದ ಹಣ ಪೋಲು ಮಾಡಬೇಡಿ ಎಂದು ಸಲಹೆ ನೀಡಿದರು.

ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಧುಮಾಲ, ಅಭಿವೃದ್ಧಿ ಅಧಿಕಾರಿ ಮಹಾಂತೇಶ್, ಗ್ರಾಪಂ ಅಧ್ಯಕ್ಷ ಚಾಮುಂಡಿ, ಉಪಾಧ್ಯಕ್ಷೆ ಗಿರಿಜಮ್ಮ, ಸದಸ್ಯರಾದ ರೇಣುಕಪ್ಪ, ಕಮಲಮ್ಮ, ಮಾಜಿ ಅಧ್ಯಕ್ಷ ಗುರುರಾಜ, ಎಸ್‌ಡಿಎ ಸುರೇಶ್, ಸಿಬ್ಬಂದಿ ಉಪಸ್ಥಿತರಿದ್ದರು.

ಕೆ ಕೆ ಪಿ ಸುದ್ದಿ 02:

ನಾರಾಯಣಪುರ ಗ್ರಾಪಂ ಆವರಣದಲ್ಲಿ ನಡೆದ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮಸಭೆಯಲ್ಲಿ ಜಿಲ್ಲಾ ಸಂಯೋಜಕ ಶ್ರೀನಿವಾಸ್ ವರದಿ ಮಂಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ