ದುಗ್ಗಳ ಸದಾನಂದ
ವೆಸ್ಟ್ ಕೊಳಕೇರಿ ಗ್ರಾಮದಲ್ಲಿ ಕಾಡು ಹಂದಿಗಳ ಉಪಟಳ ವಿಪರೀತವಾಗಿದ್ದು, ಬತ್ತದ ಬೆಳೆ ಸಂಪೂರ್ಣ ನಾಶವಾಗಿದೆ. ತಡವಾಗಿ ಭತ್ತ ಕೊಯ್ಲು ಮಾಡಲು ಹೊರಟ ಬೆಳೆಗಾರರಿಗೆ ಏನು ದಕ್ಕದ ಪರಿಸ್ಥಿತಿ ನಿರ್ಮಾಣವಾಗಿ ಭಾರಿ ನಷ್ಟ ಸಂಭವಿಸಿ ಚಿಂತೆಗೀಡಾಗಿದ್ದಾರೆ.
ಇಲ್ಲಿಗೆ ಸಮೀಪದ ವೆಸ್ಟ್ ಕೊಳಕೇರಿ ಗ್ರಾಮದ ನಿವಾಸಿ ಕಲಿಯಂಡ ದರ್ಶನ್ ಅಯ್ಯಪ್ಪ ಅವರ ಗದ್ದೆಗೆ ಕಾಡು ಹಂದಿಗಳು ದಿನಂಪ್ರತಿ ಗುಂಪು ಗುಂಪಾಗಿ ದಾಳಿ ಮಾಡಿ ಪೈರುಗಳನ್ನು ನಾಶಪಡಿಸಿವೆ. ಸುಮಾರು ಒಂದು ಎಕರೆಯಷ್ಟು ಕೃಷಿ ಭೂಮಿ ಕಾಡು ಹಂದಿಗಳ ದಾಳಿಗೆ ತುತ್ತಾಗಿ ಇಳುವರಿ ಹೋಗಲಿ ಹುಲ್ಲು ಕೂಡ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ.ಅವರು ಅಧಿಕ ಇಳುವರಿ ನೀಡಬಲ್ಲ ತಮಿಳುನಾಡಿನ ನಾಟಿ ಬತ್ತದ ತಳಿಯನ್ನು ಬಿತ್ತಿದ್ದರು. ಅಧಿಕ ಮಳೆಯಿಂದಾಗಿ ಆಗಸ್ಟ್ ತಿಂಗಳಲ್ಲಿ ಡ್ರಮ್ ಸೀಡ್ ಪದ್ಧತಿಯಲ್ಲಿ ವ್ಯವಸ್ಥಿತವಾಗಿ ನಾಟಿ ಕೈಗೊಳ್ಳಲಾಗಿತ್ತು. ಇದೀಗ ಬೆಳೆ ಕಟಾವ್ ಮಾಡುವ ಅವಧಿಯಾಗಿದ್ದು, ಕಾಡು ಹಂದಿಗಳ ಉಪಟಳದಿಂದಾಗಿ ಬೆಳೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.
ಈ ನಿಟ್ಟಿನಲ್ಲಿ ಕೃಷಿ ಇಲಾಖೆ ಹಾಗೂ ಸರ್ಕಾರ ಸೂಕ್ತ ಪರಿಹಾರ ಹಾಗೂ ಸಹಕಾರ ನೀಡಿ ಪ್ರೋತ್ಸಾಹಿಸಬೇಕೆಂದು ಇಲ್ಲಿಯ ಗದ್ದ ಬೇಸಾಯಗಾರರು ಒತ್ತಾಯ ಪಡಿಸಿದ್ದಾರೆ.
। ಕಲಿಯ೦ಡ ದರ್ಶನ್ ಅಯ್ಯಪ್ಪ, ವೆಸ್ಟ್ ಕೊಳಕೇರಿ ಗ್ರಾಮ