ಕನ್ನಡಪ್ರಭ ವಾರ್ತೆ ಕಲಬುರಗಿ
ಗುರುವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಮುದ್ರಕರೊಂದಿಗೆ ಸಭೆ ನಡೆಸಿದ ಅವರು, ಪ್ರಜಾ ಪ್ರತಿನಿಧಿ ಕಾಯ್ದೆ-1951ರ ನಿಯಮ 127ಎ ಪ್ರಕಾರ ಚುನಾವಣೆ ಪ್ರಚಾರಕ್ಕೆ ಸಂಬಂಧಿಸಿದ ಪ್ರತಿ ಕರಪತ್ರ, ಹ್ಯಾಂಡ್ ಬಿಲ್, ಬಂಟಿಂಗ್, ಬ್ಯಾನರ್, ಪಾಂಫ್ಲೆಟ್ಸ್ ಮೇಲೆ ಮುದ್ರಕರ ಮತು ಪ್ರಕಾಶರ ವಿವರ ಮತ್ತು ಮುದ್ರಣ ಸಂಖ್ಯೆ ನಮೂದಿಸುವುದು ಕಡ್ಡಾಯವಾಗಿದೆ. ಇದನ್ನು ಎಲ್ಲಾ ಮುದ್ರಕರು ಪಾಲಿಸುವ ಮೂಲಕ ಚುನಾವಣಾ ಆಯೋಗಕ್ಕೆ ಸಹಕಾರ ನೀಡಬೇಕು ಎಂದರು.
ಜಿಲ್ಲೆಯ ಪ್ರತಿ ಮುದ್ರಕರು ತಮ್ಮ ಬಳಿಗೆ ಮುದ್ರಣಕ್ಕೆ ಬರುವ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳಿಂದ ಪ್ರತಿ ಚುನಾವಣಾ ಸಾಮಗ್ರಿಗೆ ಪ್ರತ್ಯೇಕವಾಗಿ ಅಪೆಂಡಿಕ್ಸ್ “ಎ” ನಲ್ಲಿ ದೃಢೀಕರಣ ಪಡೆಯಬೇಕು. ಈ ದೃಢೀಕರಣಕ್ಕೆ ಪ್ರಕಾಶಕರನ್ನು ಚೆನ್ನಾಗಿ ಬಲ್ಲ ಇಬ್ಬರು ಪ್ರತಿ ಸಹಿ ಮಾಡಬೇಕು. ಚುನಾವಣಾ ಪ್ರಚಾರ ಸಾಮಗ್ರಿ ಮುದ್ರಿಸಿದ ಮೂರು ದಿನದೊಳಗೆ ಅಪೆಂಡಿಕ್ಸ್ “ಬಿ” ನಲ್ಲಿ ಮುದ್ರಕರು ಮುದ್ರಣ ಸಾಮಗ್ರಿ ವಿವರ, ಪ್ರತಿ, ವೆಚ್ಚ ಒಳಗೊಂಡಂತೆ ಮಾಹಿತಿ ಭರ್ತಿ ಮಾಡಿ ಅದರೊಂದಿಗೆ ಪ್ರಚಾರ ಸಾಮಗ್ರಿ ಮೂರು ಪ್ರತಿ ಹಾಗೂ ಪ್ರಕಾಶಕರು ನೀಡಿರುವ ಅಪೆಂಡಿಕ್ಸ್ ‘ಎ’ ನಮೂನೆ ಲಗತ್ತಿಸಿ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ಕಣ್ಗಾವಲು ಸಮಿತಿಗೆ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. ಚುನಾವಣಾ ಪ್ರಚಾರ ಸಾಮಗ್ರಿ ಹೊರತಾಗಿ ಇತರೆ ಮುದ್ರಣ ಕಾರ್ಯದ ಬಗ್ಗೆ ಯಾವುದೇ ಮಾಹಿತಿ ನೀಡಬೇಕಿಲ್ಲ ಎಂದು ಡಿ.ಸಿ. ಸ್ಪಷ್ಟಪಡಿಸಿದರು.ಜಾತಿ, ಧರ್ಮ, ಪಂಗಡ, ಭಾಷೆ, ಜನಾಂಗ ಆಧಾರದ ಮೇಲೆ ಮತ ಕೇಳುವ, ಎದುರಾಳಿಯ ವೈಯಕ್ತಿಕ ಚಾರಿತ್ರ್ಯ ಹರಣ ಮಾಡುವ, ದೇಶದ ಏಕತೆಗೆ ಧಕ್ಕೆ ತರುವ ಸೇರಿದಂತೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಮುದ್ರಣ ಕಾರ್ಯ ಮಾಡಬೇಕು ಎಂದರು.
ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರು ಚುನಾವಣೆಯ ಮಾದರಿ ನೀತಿ ಸಂಹಿತೆ ಅವಧಿಯ ಸಂದರ್ಭದಲ್ಲಿ ಮುದ್ರಕರು ಅನುಸರಿಸಬೇಕಾದ ಕ್ರಮಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು. ಸಭೆಯಲ್ಲಿ ಜಿಲ್ಲೆಯ ಮುದ್ರಕರು ಭಾಗವಹಿಸಿದ್ದರು.