ಕನ್ನಡಪ್ರಭ ವಾರ್ತೆ ಮಹಾಲಿಂಗಪುರಚಿಮ್ಮಡ ಗ್ರಾಮದ ಘಟಪ್ರಭಾ ಎಡದಂಡೆ ಕಾಲುವೆಯ ಜಮಖಂಡಿ ಉಪಕಾಲುವೆಯಿಂದ ಚಿಮ್ಮಡ-ಜಗದಾಳ ಹೊರವಲಯ ರಸ್ತೆಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯ ಕಾಮಗಾರಿಯನ್ನು ಕೂಡಲೆ ದುರಸ್ತಿ ಮಾಡಬೇಕು ಎಂದು ಸ್ಥಳೀಯ ನಾಗರಿಕರು ಒತ್ತಾಯಿಸಿದ್ದಾರೆ.
ಈ ಭಾಗದ ರೈತರು ತಮ್ಮ ಹೊಲ ಗದ್ದೆಗಳಿಗೆ ತೆರಳಲು ಇದೊಂದು ಮುಖ್ಯ ರಸ್ತೆಯಾಗಿದ್ದು, ಅಲ್ಲದೇ ಸೀಮೆ ಲಕ್ಕವ್ವದೇವಿ ದೇವಸ್ಥಾನಕ್ಕೆ, ಹಾಗೂ ಪ್ರಾಥಮಿಕ ಶಾಲೆಗೆ ಬರಲು ಇದೇ ರಸ್ತೆಯಲ್ಲಿಯೇ ಬರಬೇಕು. ಜಲ್ಲಿ ತುಂಬಿದ್ದರಿಂದ ಸಂಚಾರ ಕಷ್ಟ. ಈ ರಸ್ತೆಯಲ್ಲಿ ಹಲವಾರು ವಿದ್ಯಾರ್ಥಿಗಳು ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಹೀಗಾಗಿ, ಅಧಿಕಾರಿಗಳು ಕೂಡಲೆ ಈ ಕಾಮಗಾರಿಯನ್ನು ಕೈಗೆತ್ತಿಕೊಂಡು ಸಮರ್ಪಕ ರಸ್ತೆ ನಿರ್ಮಿಸಬೇಕು ಎಂದು ಆಗ್ರಹಿಸಿದ್ದಾರೆ.ಕೋಟ್ಈ ಕಾಮಗಾರಿಯ ಟೆಂಡರ್ ಪಡೆದ ಗುತ್ತಿಗೆದಾರ ಇಲಾಖೆಯ ಸಂಪರ್ಕಕ್ಕೆ ಸಿಗುತ್ತಿಲ್ಲ, ಈಗಾಗಲೇ ಅವರಿಗೆ ಕಾಮಗಾರಿ ಪ್ರಾರಂಭಿಸುವಂತೆ ಲಿಖಿತ ನೋಟಿಸ್ ನೀಡಲಾಗಿದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಈ ಗುತ್ತಿಗೆಯನ್ನು ರದ್ದುಗೊಳಿಸಿ ಮರುಟೆಂಡರ್ ನೊಂದಿಗೆ ಕಾಮಗಾರಿಯನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು.
- ಚೇತನ್ ಅಬ್ಬಿಗೇರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಜಿಎಲ್ಬಿಸಿ ರಬಕವಿ.