ಹದಗೆಟ್ಟ ರಸ್ತೆ: ಸಂಚಾರಕ್ಕೆ ವಾಹನ, ಜನರ ಪರದಾಟ

KannadaprabhaNewsNetwork |  
Published : Jun 03, 2024, 12:30 AM IST
ಮಹಾಲಿಂಗಪುರ  | Kannada Prabha

ಸಾರಾಂಶ

ಚಿಮ್ಮಡ ಗ್ರಾಮದ ಘಟಪ್ರಭಾ ಎಡದಂಡೆ ಕಾಲುವೆಯ ಜಮಖಂಡಿ ಉಪಕಾಲುವೆಯಿಂದ ಚಿಮ್ಮಡ-ಜಗದಾಳ ಹೊರವಲಯ ರಸ್ತೆಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯ ಕಾಮಗಾರಿಯನ್ನು ಕೂಡಲೆ ದುರಸ್ತಿ ಮಾಡಬೇಕು ಎಂದು ಸ್ಥಳೀಯ ನಾಗರಿಕರು ಒತ್ತಾಯಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಹಾಲಿಂಗಪುರಚಿಮ್ಮಡ ಗ್ರಾಮದ ಘಟಪ್ರಭಾ ಎಡದಂಡೆ ಕಾಲುವೆಯ ಜಮಖಂಡಿ ಉಪಕಾಲುವೆಯಿಂದ ಚಿಮ್ಮಡ-ಜಗದಾಳ ಹೊರವಲಯ ರಸ್ತೆಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯ ಕಾಮಗಾರಿಯನ್ನು ಕೂಡಲೆ ದುರಸ್ತಿ ಮಾಡಬೇಕು ಎಂದು ಸ್ಥಳೀಯ ನಾಗರಿಕರು ಒತ್ತಾಯಿಸಿದ್ದಾರೆ.

ತಗ್ಗು ದಿನ್ನೆಗಳಿಂದ ಕೂಡಿದ್ದು, ಈ ರಸ್ತೆಯನ್ನು ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಕಳೆದ ವರ್ಷ ಗುಂಪು ಕಾಮಗಾರಿಯೊಂದಿಗೆ ಸೇರಿಸಿ ಟೆಂಡರ್ ನಡೆಸಲಾಗಿತ್ತು. ಗುತ್ತಿಗೆದಾರರು ಕೂಡ 900 ಮೀ. ಉದ್ದದ ಈ ರಸ್ತೆಗೆ ದಪ್ಪ ಜಲ್ಲಿ ಸುರಿಯುವ ಮೂಲಕ ಕಾಮಗಾರಿಯನ್ನು ಪ್ರಾರಂಭಿಸಿದ್ದರು. ಆದರೆ ಕಳೆದ ಒಂದು ವರ್ಷದಿಂದ ಯಾವುದೇ ಚಟುವಟಿಕೆ ಇಲ್ಲದೇ ಕಾಮಗಾರಿ ಸ್ಥಗಿತಗೊಂಡಿದೆ. ಇದರಿಂದಾಗಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸಂಚಾರಕ್ಕೆ ವಾಹನಗಳು ಮತ್ತು ಸಾರ್ವಜನಿಕರು ಪರದಾಟ ನಡೆಸಿದ್ದಾರೆ.

ಈ ಭಾಗದ ರೈತರು ತಮ್ಮ ಹೊಲ ಗದ್ದೆಗಳಿಗೆ ತೆರಳಲು ಇದೊಂದು ಮುಖ್ಯ ರಸ್ತೆಯಾಗಿದ್ದು, ಅಲ್ಲದೇ ಸೀಮೆ ಲಕ್ಕವ್ವದೇವಿ ದೇವಸ್ಥಾನಕ್ಕೆ, ಹಾಗೂ ಪ್ರಾಥಮಿಕ ಶಾಲೆಗೆ ಬರಲು ಇದೇ ರಸ್ತೆಯಲ್ಲಿಯೇ ಬರಬೇಕು. ಜಲ್ಲಿ ತುಂಬಿದ್ದರಿಂದ ಸಂಚಾರ ಕಷ್ಟ. ಈ ರಸ್ತೆಯಲ್ಲಿ ಹಲವಾರು ವಿದ್ಯಾರ್ಥಿಗಳು ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಹೀಗಾಗಿ, ಅಧಿಕಾರಿಗಳು ಕೂಡಲೆ ಈ ಕಾಮಗಾರಿಯನ್ನು ಕೈಗೆತ್ತಿಕೊಂಡು ಸಮರ್ಪಕ ರಸ್ತೆ ನಿರ್ಮಿಸಬೇಕು ಎಂದು ಆಗ್ರಹಿಸಿದ್ದಾರೆ.ಕೋಟ್‌ಈ ಕಾಮಗಾರಿಯ ಟೆಂಡರ್ ಪಡೆದ ಗುತ್ತಿಗೆದಾರ ಇಲಾಖೆಯ ಸಂಪರ್ಕಕ್ಕೆ ಸಿಗುತ್ತಿಲ್ಲ, ಈಗಾಗಲೇ ಅವರಿಗೆ ಕಾಮಗಾರಿ ಪ್ರಾರಂಭಿಸುವಂತೆ ಲಿಖಿತ ನೋಟಿಸ್ ನೀಡಲಾಗಿದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಈ ಗುತ್ತಿಗೆಯನ್ನು ರದ್ದುಗೊಳಿಸಿ ಮರುಟೆಂಡರ್ ನೊಂದಿಗೆ ಕಾಮಗಾರಿಯನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು.

- ಚೇತನ್ ಅಬ್ಬಿಗೇರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಜಿಎಲ್ಬಿಸಿ ರಬಕವಿ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೌಶಲ್ಯ ದೇಶದ ಆರ್ಥಿಕ ಪ್ರಗತಿಗೆ ಅಡಿಪಾಯ
ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಕೈಜೋಡಿಸಿ: ಡಿಗ್ರಿಜ