ಕನ್ನಡಪ್ರಭ ವಾರ್ತೆ ಮಂಡ್ಯ
ಶುಕ್ರವಾರ ನಗರದ ಮಾಂಡವ್ಯ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ಸ್ವಾಮಿ ವಿವೇಕಾನಂದರ ೧೬೧ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯುವಕರು ಈ ದೇಶದ ಆಸ್ತಿ. ದೇಶದ ಪ್ರಗತಿಗೆ ಯುವಶಕ್ತಿ ಸರಿಯಾದ ರೀತಿಯಲ್ಲಿ ಸದ್ಬಳಕೆ ಆಗಬೇಕು. ಆಗ ಮಾತ್ರ ರಾಷ್ಟ್ರ ಅಭಿವೃದ್ಧಿ ಪಥದಲ್ಲಿ ಮುನ್ನಡೆಯಲು ಸಾಧ್ಯ ಎಂದು ನುಡಿದರು.
ಯುವಕರು ದುಶ್ಚಟಗಳಿಗೆ ಬಲಿಯಾಗದೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ವಿವೇಕಾನಂದರಂತಹ ಆದರ್ಶಪುರುಷರನ್ನು ಮಾದರಿಯಾಗಿಸಿಕೊಂಡಾಗ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.ಯುವಕರು ಸಂಘಟಿತರಾದಾಗ ನವಭಾರತ ನಿರ್ಮಾಣ ಸಾಧ್ಯವಾಗಲಿದೆ. ದೇಶದಲ್ಲಿ ಏನಾದರೊಂದು ಬದಲಾವಣೆ ತರಬೇಕಾದರೆ ಅದು ಯುವಕರಿಂದ ಮಾತ್ರ ಸಾಧ್ಯ. ಯುವಜನಾಂಗ ಎಚ್ಚೆತ್ತುಕೊಂಡು ರಾಷ್ಟ್ರವನ್ನು ಸುಭದ್ರವಾಗಿ ಕಟ್ಟಿ ಬೆಳೆಸುವುದಕ್ಕೆ ಪಣ ತೊಡಬೇಕು. ವಿವೇಕಾನಂದರ ಜೀವನಾದರ್ಶಗಳನ್ನು ರೂಢಿಸಿಕೊಂಡು ಆದರ್ಶಮಯ ಜೀವನ ನಡೆಸುವಂತೆ ಸಲಹೆ ನೀಡಿದರು.
ಪ್ರಸ್ತುತ ಎಲ್ಲ ಕ್ಷೇತ್ರಗಳಲ್ಲೂ ಸ್ಪರ್ಧೆ ಇದೆ. ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲೂ ಖಾಸಗೀ ಶಿಕ್ಷಣ ಸಂಸ್ಥೆಗಳು ಬರುತ್ತಿವೆ. ಹೆಚ್ಚಿನ ಪರಿಶ್ರಮದಿಂದ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆ ಮಾಡಿದರಷ್ಟೇ ಉಳಿಯಲು ಸಾಧ್ಯ ಎಂಬುದನ್ನು ಎಲ್ಲರೂ ಮನಗಾಣಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಯುವ ಪರಿಷತ್ ಅಧ್ಯಕ್ಷರಾಗಿ ಮಹದೇವು ಮತ್ತು ತಂಡದವರಿಗೆ ಮಾಜಿ ಅಧ್ಯಕ್ಷ ಮಂಗಲ ಎಂ. ಯೋಗೀಶ್ ಜವಾಬ್ದಾರಿ ಹಸ್ತಾಂತರಿಸಿದರು. ಕೃಷಿಕ್ ಲಯನ್ಸ್ ಆಡಳಿತಾಕಾರಿ ಕೆ.ಟಿ. ಹನುಮಂತು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.