ದೇವಾಡಿಗ ಸಂಘದ ಪದಗ್ರಹಣ ಮತ್ತು ಪ್ರತಿಭಾ ಪುರಸ್ಕಾರ

KannadaprabhaNewsNetwork |  
Published : Jun 19, 2025, 11:50 PM ISTUpdated : Jun 19, 2025, 11:51 PM IST
ಪೊಟೋ ಪೈಲ್ : 19ಬಿಕೆಲ್2 | Kannada Prabha

ಸಾರಾಂಶ

ಸಮಾಜದಲ್ಲಿ ಒಗ್ಗಟ್ಟು ತರುವ ಉದ್ದೇಶದಿಂದ ಸಂಘವನ್ನು ಸ್ಥಾಪಿಸಲಾಗಿದೆ.

ಭಟ್ಕಳ: ತಾಲೂಕು ದೇವಾಡಿಗ ಸಂಘದಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಶೇ.೯೦ಕ್ಕಿಂತ ಹೆಚ್ಚು ಅಂಕ ಪಡೆದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಂಘದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಬೇಂಗ್ರೆ ಯಕ್ಷೆಮನೆ ದೇವಾಡಿಗ ಸಮುದಾಯ ಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಭಟ್ಕಳ ತಾಲೂಕು ದೇವಾಡಿಗ ಸಂಘದ ಅಧ್ಯಕ್ಷ ಲಕ್ಷ್ಮಣ ಕೋಟದಮಕ್ಕಿ ಮಾತನಾಡಿ, ಸಮಾಜದಲ್ಲಿ ಒಗ್ಗಟ್ಟು ತರುವ ಉದ್ದೇಶದಿಂದ ಸಂಘವನ್ನು ಸ್ಥಾಪಿಸಲಾಗಿದ್ದು, ಸಮಾಜದ ವಿದ್ಯಾರ್ಥಿಗಳ ಶಿಕ್ಷಣ ಮತ್ತು ಆರೋಗ್ಯ ಸುಧಾರಣೆಗೆ ಹೆಚ್ಚಿನ ಒತ್ತನ್ನು ನೀಡಲಾಗುವುದು. ಮುಂದಿನ ದಿನಗಳಲ್ಲಿ ಸಮಾಜದ ಎಲ್ಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಅನುಕೂಲವಾಗುವಂತೆ ಯೋಜನೆ ರೂಪಿಸಲಾಗಿದೆ ಎಂದರು.

ಸಂಘದ ಮಾಜಿ ಅಧ್ಯಕ್ಷ ಪರಮೇಶ್ವರ ದೇವಾಡಿಗ ಮಾತನಾಡಿದರು. ಸಂಘದ ಉಪಾಧ್ಯಕ್ಷ ನಾರಾಯಣ ಜಿ. ದೊಡ್ಮನೆ, ದೇವಾಡಿಗ ಗುರುವಂದನಾ ಸಮಿತಿಯ ಅಧ್ಯಕ್ಷ ಗಜಾನನ ದೇವಾಡಿಗ, ತಾಪಂ ಮಾಜಿ ಸದಸ್ಯ ವಿಷ್ಣು ದೇವಾಡಿಗ, ಬೆಂಗ್ರೆ ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷ ವೆಂಕ್ಟಯ್ಯ ಭೈರುಮನೆ, ಬೈಲೂರು ಗ್ರಾಪಂ ಸದಸ್ಯ ಕೃಷ್ಣ ಭಂಡಾರಿ, ನಿವೃತ್ತ ಯೋಧ ಎಂ.ಡಿ.ಫಕ್ಕಿ, ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾಗೇಶ ದೇವಾಡಿಗ, ನಿವೃತ್ತ ಉಪನ್ಯಾಸಕ ಕಮಲಾಕರ ಕೋಟದಮಕ್ಕಿ, ದೊಡ್ಡಯ್ಯ ದೇವಾಡಿಗ, ದೇವಾಡಿಗ ಯುವ ವೇದಿಕೆಯ ಅಧ್ಯಕ್ಷ ನಾಗರಾಜ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ ದೇವಾಡಿಗ ಸ್ವಾಗತಿಸಿದರು. ಲಾವಣ್ಯ ಹಾಗೂ ಸಂಗಡಿಗರು ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಭಾಸ್ಕರ ದೇವಾಡಿಗ ವಂದಿಸಿದರು.

ಭಟ್ಕಳ ತಾಲೂಕು ದೇವಾಡಿಗ ಸಂಘದ ಪ್ರತಿಭಾ ಪುರಸ್ಕಾರ, ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ