ದೇವರಮುದ್ದನಹಳ್ಳಿ ಮೂಡಲಹಿಪ್ಪೆ ಸಂಪರ್ಕ ರಸ್ತೆ ಗುಂಡಿ

KannadaprabhaNewsNetwork |  
Published : Oct 19, 2024, 12:28 AM IST
ಹೊಳೆನರಸೀಪುರ ತಾ. ದೇವರಮುದ್ದನಹಳ್ಳಿಯಿಂದ ಮೂಡಲಹಿಪ್ಪೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಕಿರು ಸೇತುವೆಯೊಂದು ಕುಸಿದಿರುವ ಕಾರಣದಿಂದ ದೊಡ್ಡ ಕಂದಕ ಏರ್ಪಟ್ಟಿದೆ. | Kannada Prabha

ಸಾರಾಂಶ

ಹಳ್ಳಿಮೈಸೂರು ಹೋಬಳಿಯ ದೇವರಮುದ್ದನಹಳ್ಳಿಯಿಂದ ಮೂಡಲಹಿಪ್ಪೆ ಗ್ರಾಮಕ್ಕೆಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಗುಂಡಿಗಳು ಬಿದ್ದಿರುವ ಜತೆಗೆ ಕಿರು ಸೇತುವೆಯೊಂದು ಕುಸಿದಿರುವ ಕಾರಣದಿಂದ ಬಸ್ ಸಂಚಾರವಿಲ್ಲದೇ ವಿದ್ಯಾರ್ಥಿಗಳ ಪಾಡು ಶೋಚನೀಯವಾಗಿದ್ದರೂ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳದೇ ಇರುವುದಕ್ಕೆ ಗ್ರಾಮೀಣ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಹೊಳೆನರಸೀಪುರ

ತಾಲೂಕಿನ ಹಳ್ಳಿಮೈಸೂರು ಹೋಬಳಿಯ ದೇವರಮುದ್ದನಹಳ್ಳಿಯಿಂದ ಮೂಡಲಹಿಪ್ಪೆ ಗ್ರಾಮಕ್ಕೆಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಗುಂಡಿಗಳು ಬಿದ್ದಿರುವ ಜತೆಗೆ ಕಿರು ಸೇತುವೆಯೊಂದು ಕುಸಿದಿರುವ ಕಾರಣದಿಂದ ಬಸ್ ಸಂಚಾರವಿಲ್ಲದೇ ವಿದ್ಯಾರ್ಥಿಗಳ ಪಾಡು ಶೋಚನೀಯವಾಗಿದ್ದರೂ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳದೇ ಇರುವುದಕ್ಕೆ ಗ್ರಾಮೀಣ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಲೂಕಿನಲ್ಲಿ ಹಳ್ಳಿಮೈಸೂರು ಹೋಬಳಿಯು ಆಡಳಿತಾತ್ಮಕವಾಗಿ ಹೊಳೆನರಸೀಪುರ ತಾಲೂಕಿಗೆ ಸೇರುತ್ತದೆ ಹಾಗೂ ರಾಜಕೀಯವಾಗಿ ಅರಕಲಗೂಡು ವಿಧಾನಸಭಾ ಕ್ಷೇತ್ರ ಒಳಪಡುತ್ತದೆ. ಜತೆಗೆ ಚುನಾವಣೆ ಸಂದರ್ಭಗಳಲ್ಲಿ ಮಾತ್ರ ರಾಜಕಾರಣಿಗಳಿಗೆ ಪ್ರಿಯವಾಗುವ ಕ್ಷೇತ್ರವಾಗಿದೆ. ಊಟದ ನಂತರ ಉಪ್ಪಿನಕಾಯಿ ಹೇಗೆ ಬೇಡವಾಗುತ್ತೊ ಅದೇ ರೀತಿ ಜನಪ್ರತಿನಿಧಿಗಳು ಹಳ್ಳಿಮೈಸೂರು ಹೋಬಳಿ ಕಡೆಗಣಿಸುತ್ತಿದ್ದಾರೆ ಎಂಬ ದೂರಿದೆ.

ದೇವರಮುದ್ದನಹಳ್ಳಿಯಿಂದ ಮೂಡಲಹಿಪ್ಪೆ ಗ್ರಾಮ ಸಂಪರ್ಕಿಸುವ ರಸ್ತೆಯ ದುಸ್ಥಿತಿ ರಾಜಕಾರಣಿಗಳ ಈ ಮನೋಭಾವಕ್ಕೆ ತಾಜಾ ಉದಾಹರಣೆಯಾಗಿದೆ ಹಾಗೂ ದೇವರಮುದ್ದನಹಳ್ಳಿಯಿಂದ ಮೂಡಲಹಿಪ್ಪೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಗುಂಡಿಗಳು ಬಿದ್ದಿರುವ ಜತೆಗೆ ಕಿರು ಸೇತುವೆಯೊಂದು ಕುಸಿದಿರುವ ಕಾರಣ ದೊಡ್ಡ ಕಂದಕ ಏರ್ಪಟ್ಟಿದ್ದು, ವಾಹನ ಚಾಲಕರಿಗೆ ನರಕ ದರ್ಶನ ಮಾಡಿಸುವ ಜತೆಗೆ ಜೀವಭಯದಿಂದ ಸಂಚರಿಸಬೇಕಾದ ದುಸ್ಥಿತಿ ಬಂದಿದೆ.

ಸೋಮವಾರದಿಂದ ಶಾಲಾ ಕಾಲೇಜುಗಳು ಪುನರಾರಂಭವಾಗುತ್ತಿದ್ದು, ಶಾಲಾ ವಿದ್ಯಾರ್ಥಿಗಳು, ನೌಕರರು ಹಾಗೂ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ನಾಲ್ಕೈದು ಕಿ.ಮಿ. ನಡೆದು ನಂತರ ಬಸ್ ಹಿಡಿದು, ಪಟ್ಟಣದ ಕಾಲೇಜಿಗೆ ಹೋಗಬೇಕಲ್ಲಾ ಎಂಬುದೇ ದೊಡ್ಡ ತಲೆಬೇನೆಯಾಗಿದೆ.

ದೇವರಮುದ್ದನಹಳ್ಳಿ ಗ್ರಾಮದ ಪುಟ್ಟಸ್ವಾಮಿಗೌಡ ಹಾಗೂ ಶಿವಕುಮಾರ್ ಎಂಬುವರು ಮಾತನಾಡಿ, ಗ್ರಾಮೀಣ ಜನರಿಗೆ ಅತ್ಯಗತ್ಯವಾದ ಮೂಲಭೂತ ಸೌಕರ್ಯ ಕಲ್ಪಿಸುವ ಜತೆಗೆ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ ವಾತಾವರಣ ಒದಗಿಸುವ ನಿಟ್ಟಿನಲ್ಲಿ ಮೊದಲಿಗೆ ರಸ್ತೆ ದುರಸ್ತಿ ಕಾರ್ಯ ಮಾಡಿಸುವಂತೆ ಒತ್ತಾಯಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ