ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರ:
ಮಾಜಿ ಪ್ರಧಾನಿ ದೇವೇಗೌಡ 94ನೇ ಹುಟ್ಟುಹಬ್ಬದ ಅಂಗವಾಗಿ ಚಿಕ್ಕಬಳ್ಳಾಪುರದ ಹೆಚ್.ಡಿ. ದೇವೇಗೌಡ ಅಭಿಮಾನಿಗಳ ಬಳಗದಿಂದ ನಗರದ ಬಲಮುರಿ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದ ಬಳಿಕ ತಾಲೂಕಿನ ಸುಲ್ತಾನ್ಪೇಟೆಯ ಶ್ರೀ ಸಾಯಿ ದ್ವಾರಕಮಾಯಿ ವೃದ್ಧಾಶ್ರಮದಲ್ಲಿ ವೃದ್ಧರೊಂದಿಗೆ ಕೇಕ್ ಕತ್ತರಿಸಿ, ತರಕಾರಿ, ಹಣ್ಣು-ಹಂಪಲು ಹಾಗೂ ಬ್ರೆಡ್ ವಿತರಿಸಿದ ನಂತರ ಮಾತನಾಡಿ, ದೇವೇಗೌಡರು ದೀನ ದಲಿತರು, ರೈತರು, ಕಾರ್ಮಿಕರು ಹಾಗೂ ಮಹಿಳೆಯರ ಪರ ಸದಾ ಧ್ವನಿ ಎತ್ತಿ, ಅವರಿಗೆ ನ್ಯಾಯ ಸಿಗುವಂತೆ ಕಾಳಜಿ ವಹಿಸುತ್ತಿದ್ದಾರೆ ಎಂದು ಹೇಳಿದರು.
ದೇವೇಗೌಡರು ಜಾತ್ಯತೀತ ನಾಯಕರಾಗಿದ್ದು, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಮುದಾಯದ ಅನೇಕ ಜನರನ್ನು ರಾಜಕೀಯವಾಗಿ ಬೆಳೆಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಬೆಳೆದ ಹಲವರು ಇಂದು ವಿವಿಧ ಪಕ್ಷಗಳಲ್ಲಿ ಪ್ರಮುಖ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ .ದೇವರು ಅವರಿಗೆ ಇನ್ನಷ್ಟು ಆರೋಗ್ಯ ಹಾಗೂ ಶಕ್ತಿ ನೀಡಲಿ ಎಂದು ಹಾರೈಸಿದರು.ಈ ಸಂದರ್ಭದಲ್ಲಿ ಶ್ರೀ ಸಾಯಿ ದ್ವಾರಕಮಾಯಿ ವೃದ್ಧಾಶ್ರಮದ ವೃದ್ಧರು ಸಹ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದರು.
-------- ಸಿಕೆಬಿ-2 ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಜನ್ಮ ದಿನಾಚರಣೆ ಪ್ರಯುಕ್ತ ಚಿಕ್ಕಬಳ್ಳಾಪುರದ ಹೆಚ್.ಡಿ. ದೇವೇಗೌಡ ಅಭಿಮಾನಿಗಳ ಬಳಗದಿಂದ ತಾಲೂಕಿನ ಸುಲ್ತಾನ್ಪೇಟೆಯ ಶ್ರೀ ಸಾಯಿ ದ್ವಾರಕಮಾಯಿ ವೃದ್ಧಾಶ್ರಮದಲ್ಲಿ ವೃದ್ಧರಿಗೆ ಬ್ರೆಡ್ ವಿತರಿಸಿದರು.