ಹೋರಾಟದಿಂದ ಹಿಂದೆ ಸರಿಯೋ ಪ್ರಶ್ನೆಯೇ ಇಲ್ಲ ಎಂದ ದೇವೇಗೌಡರು

KannadaprabhaNewsNetwork |  
Published : Aug 11, 2026, 01:45 AM IST
10ಎಚ್ಎಸ್ಎನ್20 : ಹರದನಹಳ್ಳಿಯಲ್ಲಿರುವ ದೇವೇಗೌಡರ ನಿವಾಸಕ್ಕೆ ಸೋಮವಾರ ಸಂಜೆ ಶ್ರೀಕ್ಷೇತ್ರ ಶ್ರವಣಬೆಳಗೊಳದ ಶ್ರಷೀ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಭೇಟಿ ನೀಡಿದ್ದರು. | Kannada Prabha

ಸಾರಾಂಶ

ಯಾರು ಕೃಷಿಯನ್ನೇ ನಂಬಿ ಜೀವನ ನಡೆಸುತ್ತಿದ್ದಾರೆಯೋ ಅವರಿಗೆ ತೊಂದರೆ ಕೊಡುವುದು, ಅವರನ್ನು ಬೀದಿಪಾಲು ಮಾಡುವುದು ಎಷ್ಟು ಸರಿ, ಯಾರಿಗಾಗಿ ಈ ಬಡಾವಣೆ ಎಂದು ಆಕ್ರೋಶ ಹೊರಹಾಕಿದರು. ಹೋರಾಟ ಕೇವಲ ಒಕ್ಕಲಿಗರಿಗಾಗಿ ಅಲ್ಲ, ಸಾಕಷ್ಟು ಹಿಂದುಳಿದ ಸಣ್ಣ ಸಮುದಾಯಗಳಿವೆ. ಅವರ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಆಗಬಾರದು ಎಂದರು. ಸರ್ಕಾರದ ಕಡೆಯಿಂದ ಪೊಲೀಸರ ಮೇಲೆ ಒತ್ತಡ ಹಾಕಿದ್ದಾರೆ. ನಾಳೆ ಬೆಂಗಳೂರಿಗೆ ಹೊಗುತ್ತೇನೆ. ನಿಖಿಲ್ ಹಾಗೂ ನಾಯಕರಿಂದ ಮಾಹಿತಿ ಪಡೆಯುತ್ತೇನೆ ಎಂದು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು ಕಿಡಿಕಾರಿದರು.

ಕನ್ನಡಪ್ರಭ ವಾರ್ತೆ ಹಾಸನ

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಅತ್ಯಂತ ಹೇಯ ಕೃತ್ಯ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು ಕಿಡಿಕಾರಿದರು.ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ಸೋಮವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪೊಲೀಸ್ ಅಧಿಕಾರಿಗಳ ಬಗ್ಗೆ ಮಾತನಾಡಲ್ಲ. ಭಾನುವಾರ ಸಿಎಂ ಯಾರಿಗೂ ಬಲವಂತ ಇಲ್ಲ ಎಂದಿದ್ದಾರೆ. ಹಾಗಿದ್ದರೆ ಇಂದು ಪಾದಯಾತ್ರೆ ಯಾಕೆ ತಡೆದರು ಎಂದು ಖಾರವಾಗಿ ಪ್ರಶ್ನಿಸಿದದರು. ಇದು ನಿಗೂಢ ಪ್ರಶ್ನೆ, ಇಂದು ಸುಮಾರು ೩೫-೪೦ ಸಾವಿರ ಖಾಲಿ ನಿವೇಶನ ಬಿಡಿಎ ವ್ಯಾಪ್ತಿಯಲ್ಲಿವೆ. ಹೀಗಿರುವಾಗ ಯಾರು ಕೃಷಿಯನ್ನೇ ನಂಬಿ ಜೀವನ ನಡೆಸುತ್ತಿದ್ದಾರೆಯೋ ಅವರಿಗೆ ತೊಂದರೆ ಕೊಡುವುದು, ಅವರನ್ನು ಬೀದಿಪಾಲು ಮಾಡುವುದು ಎಷ್ಟು ಸರಿ, ಯಾರಿಗಾಗಿ ಈ ಬಡಾವಣೆ ಎಂದು ಆಕ್ರೋಶ ಹೊರಹಾಕಿದರು. ಹೋರಾಟ ಕೇವಲ ಒಕ್ಕಲಿಗರಿಗಾಗಿ ಅಲ್ಲ, ಸಾಕಷ್ಟು ಹಿಂದುಳಿದ ಸಣ್ಣ ಸಮುದಾಯಗಳಿವೆ. ಅವರ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಆಗಬಾರದು ಎಂದರು. ಸರ್ಕಾರದ ಕಡೆಯಿಂದ ಪೊಲೀಸರ ಮೇಲೆ ಒತ್ತಡ ಹಾಕಿದ್ದಾರೆ. ನಾಳೆ ಬೆಂಗಳೂರಿಗೆ ಹೊಗುತ್ತೇನೆ. ನಿಖಿಲ್ ಹಾಗೂ ನಾಯಕರಿಂದ ಮಾಹಿತಿ ಪಡೆಯುತ್ತೇನೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಗಸ್ಟ್ ೧೮ರಂದು ಸಭೆ ನಡೆಸಲು ತೀರ್ಮಾನ ಮಾಡಲಾಗಿದೆ. ಈ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸರ್ಕಾರಕ್ಕೆ ನೇರ ಸವಾಲು ಹಾಕಿದರು.

ಫ್ರೀಡಂ ಪಾರ್ಕ್‌ನಲ್ಲಿ ಸಹಸ್ರಾರು ಕಾರ್ಯಕ್ರಮ ಮಾಡಿದ್ದಾರೆ. ನಾನೇ ಮಾಡಿದ್ದೇನೆ. ಈ ಸರ್ಕಾರದವರು ಏನು ನಿರ್ಧಾರ ಮಾಡುತ್ತಾರೋ, ಅದನ್ನು ನೋಡಿಕೊಂಡು ಆನಂತರ ನಾವು ತೀರ್ಮಾನ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. ಮೂರು ವರ್ಷ ನೀವೇ ಡಿಸಿಎಂ ಆಗಿರಲಿಲ್ಲವೇ, ಬೆಂಗಳೂರನ್ನ ಐದು ಕಾರ್ಪೊರೇಷನ್ ಮಾಡಿದ್ದು ನೀವೇ ಅಲ್ಲವೇ? ಸಿಎಂ ಆಗಿದ್ದ ಸಿದ್ದರಾಮಯ್ಯ ಅವರನ್ನು ಇಳಿಸಿ ಒಂದೇ ತಿಂಗಳಿಗೆ ಈ ಪ್ರಾಜೆಕ್ಟ್ ಯಾಕೆ ಎಂದು ಗೌಡರು ಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಪ್ರಶ್ನಿಸಿದರು.

ದೆಹಲಿ ನಾಯಕರಿಗೆ ಕೊಟ್ಟ ಮಾತಿನಂತೆ ತರಾತುರಿಯಲ್ಲಿ ಈ ಯೋಜನೆ ಮಾಡಲು ಹೊರಟಿದ್ದೀರಾ ಎಂದ ಮಾಜಿ ಪ್ರಧಾನಿ, ಏನೇ ಆಗಲಿ ಬಡವರ ಪರವಾಗಿ ನಾವು ಈ ಹೋರಾಟ ಮುಂದುವರೆಸುತ್ತೇವೆ ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಿಪಟೂರು ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ
ಯುವ ಕಾಂಗ್ರೆಸ್ ದೇಶದ ಭವಿಷ್ಯ ಕಟ್ಟುವ ಯುವ ಶಕ್ತಿ: ಪ್ರಸನ್ನಕುಮಾರ್