ಕನ್ನಡಪ್ರಭ ವಾರ್ತೆ ಅಥಣಿ
ಇಲ್ಲಿನ ಜಾದವಜಿ ಶಿಕ್ಷಣ ಸಂಸ್ಥೆಯ ಕೆ.ಎ.ಲೋಕಾಪುರ ಪದವಿ ಮಹಾವಿದ್ಯಾಲಯದ ಹಿಂದಿನ ವಿದ್ಯಾರ್ಥಿಗಳ ಸಮ್ಮಿಲನ ಸ್ಮೃತಿ ಸುಮನ-2026 ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೆಲವು ಮುಂದುವರಿದ ದೇಶಗಳಿಗೆ ಹೋಲಿಸಿದಾಗ ನಮ್ಮ ಶಿಕ್ಷಣ ಪದ್ಧತಿಯಲ್ಲಿ ಕೆಲವು ಲೋಪದೋಷಗಳಿದ್ದು, ಅವುಗಳನ್ನ ಇಂತಹ ಸಮ್ಮೇಳನಗಳಲ್ಲಿ ಚಿಂತನ ಮಂಥನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ನಮಗೆ ಇಂದು ಮಾಹಿತಿ ನೀಡುವ ಶಿಕ್ಷಣ ಬೇಕಾಗಿಲ್ಲ, ದೇಶಾಭಿಮಾನ, ದೇಶದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದರ ಜೊತೆಗೆ ಸುಂದರ ಬದುಕು ಕಟ್ಟಿಕೊಳ್ಳುವ ಶಿಕ್ಷಣ ಬೇಕು. ದೇಶಕ್ಕಾಗಿ ಇಲ್ಲವೇ ಜಗತ್ತಿಗೆ ಅಗತ್ಯವಿರುವ ವಿಶೇಷ ಕೊಡುಗೆ ನೀಡುವ ವ್ಯಕ್ತಿಗಳನ್ನು ರೂಪಿಸುವ ಶಿಕ್ಷಣ ಅಗತ್ಯ. ಮೂರನೇ ತರಗತಿ ಕಲಿತ ಅಲ್ವಾ ಎಡಿಸನ್ ಸತತ ಪ್ರಯತ್ನದಿಂದ ಬಲ್ಬ್ ಕಂಡುಹಿಡಿದು ಜಗತ್ತಿಗೆ ಬೆಳಕು ನೀಡಿದ. ಯಾವುದೇ ಶಿಕ್ಷಣ ಇಲ್ಲದೆ ರೈತರು ಚನ್ನಾಗಿ ಉಳಿಮೆ ಮಾಡುತ್ತಾರೆ, ಇಂದು ಉನ್ನತ ಶಿಕ್ಷಣ ಪಡೆದ ಅನೇಕ ಗೋಲ್ಡ್ ಮೆಡಲ್ ಪಡೆದ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆತ್ಮವಿಶ್ವಾಸ ಮೂಡಿಸುವ ಶಿಕ್ಷಣ ನಮಗೆ ಬೇಕು. ಏನಾದರೂ ಹೊಸದನ್ನು ಕ್ರಿಯೇಟಿವ್ ಮಾಡುವ ಮನಸ್ಸು ನಮ್ಮದಾಗಬೇಕು ಎಂದರು.
ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಅರವಿಂದರಾವ ದೇಶಪಾಂಡೆ ಮಾತನಾಡಿ, ಇಂದಿನ ಹಳೆಯ ವಿದ್ಯಾರ್ಥಿಗಳೇ ನಮ್ಮ ಸಂಸ್ಥೆಯ ಅಸ್ತಿ, ಅನೇಕ ಹಳೆಯ ವಿದ್ಯಾರ್ಥಿಗಳು ಈ ಸಂಸ್ಥೆಗೆ ದೇಣಿಗೆ ನೀಡುವ ಮೂಲಕ ಪಟ್ಟಣ ನಿರ್ಮಾಣಕ್ಕೆ ಸಹಕಾರ ನೀಡಿದ್ದಾರೆ. ಈ ಕಾಲೇಜಿನಲ್ಲಿ ಕಲಿತ ಕಳೆದ 20 ವರ್ಷದ ವಿದ್ಯಾರ್ಥಿಗಳು ಇಲ್ಲಿ ಸೇರಿದ್ದು, ತಾವು ಸೇವೆ ಸಲ್ಲಿಸುತ್ತಿರುವ ಸಂಸ್ಥೆಗಳಿಂದ ನೀವು ಕಲಿತ ಕಾಲೇಜಿಗೆ, ವಿದ್ಯಾರ್ಥಿಗಳ ಶಿಕ್ಷಣದ ದೃಷ್ಟಿಯಿಂದ ಸಮಾಜಕ್ಕೆ ಸೇವೆ ನೀಡಬೇಕೆಂದು ಕರೆ ನೀಡಿದರು.ಧಾರವಾಡದ ಶಿಕ್ಷಣ ತಜ್ಞ ಮಹೇಶ ಮಾಶಾಳ ಉಪನ್ಯಾಸ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯಧ್ಯಕ್ಷ ಡಾ.ರಾಮ ಕುಲಕರ್ಣಿ ಹಾಗೂ ಮುಖ್ಯ ಅತಿಥಿ ರಾಜು ಲೋಕಾಪುರ ಮಾತನಾಡಿದರು. ಮಹಾವಿದ್ಯಾಲಯದ ಪ್ರಾಚಾರ್ಯ ಆರ್.ಎಂ.ದೇವರೆಡ್ಡಿ ಸ್ವಾಗತಿಸಿದರು. ಶ್ರೀಶೈಲ ಯಡಹಳ್ಳಿ ಅತಿಥಿಗಳನ್ನ ಪರಿಚಯಿಸಿದರು. ಸಂತೋಷ ಬಡಕಂಬಿ, ಅಮೃತಾ ಧೂಪ ನಿರೂಪಿಸಿದರು. ಭಾಗ್ಯಶ್ರೀ ಗುಂಡಾ ವಂದಿಸಿದರು.
- ನಿರ್ಭಯಾನಂದ ಸ್ವಾಮೀಜಿ, ವಿವೇಕಾನಂದ ಆಶ್ರಮ, ಗದಗ