ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಭಾರತೀ ಕಾಲೇಜು ಅರ್ಥಶಾಸ್ತ್ರ ವಿಭಾಗ, ಭಾರತೀ ಸ್ನಾತಕ ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರ, ಭಾರತಿ ಪದವಿ ಪೂರ್ವ ಕಾಲೇಜು ಮತ್ತು ಐಕ್ಯೂ ಎಸಿ ಸಹಯೋಗದೊಂದಿಗೆ ನಡೆದ ರಾಜ್ಯ ಮಟ್ಟದ ಒಂದು ದಿನದ ಕಾರ್ಯಾಗಾರದಲ್ಲಿ ಮಹಿಳಾ ಸಬಲೀಕರಣದ ಮೇಲೆ ಕಿರುಬಂಡವಾಳ ವಿಷಯವಾಗಿ ಮಾತನಾಡಿದರು.
ವೈಜ್ಞಾನಿಕ ನೆಲೆಯಲ್ಲಿ ಸ್ವಸಹಾಯ ಗುಂಪುಗಳು ರೂಪಗೊಂಡು ಅನುತ್ಪಾದಕ ಚಟುವಟಿಕೆಗಳಿಗೆ ಸಂಪನ್ಮೂಲ ಬಳಕೆ ಆಗುವುದನ್ನು ತಡೆಗಟ್ಟಿ, ವೃತ್ತಿ ಆಧಾರಿತ ಉತ್ಪನ್ನದಾಯಕ ಚಟುವಟಿಕೆಗಳಿಗೆ ಕಿರು ಹಣಕಾಸು ಸಂಸ್ಥೆಗಳ ಸಾಲ ಸೌಲಭ್ಯ ಪೂರೈಕೆ ಆಗುವಂತೆ ಆಗಬೇಕು. ಪ್ರತಿಯೊಬ್ಬರೂ ಪ್ರಶ್ನೆ ಮಾಡುವ ಮನೋಧರ್ಮ ರೂಪಿಸಿಕೊಳ್ಳಬೇಕು ಎಂದರು.ಸಂಪನ್ಮೂಲ ವ್ಯಕ್ತಿ ಎಂ.ನಾಗರಾಜೇಗೌಡ ಮಾತನಾಡಿ, ಮಹಿಳಾ ಸಬಲೀಕರಣದ ಪ್ರಯೋಜನಗಳು ಸ್ವಸಹಾಯ
ಬ್ಯಾಂಕ್ಗಳು ಮತ್ತು ಸರ್ಕಾರದ ವಿವಿಧ ಯೋಜನೆಗಳಲ್ಲಿ ಮಹಿಳೆಯರಿಗೆ ಲಭ್ಯವಾಗುವ ಆಧಾರರಹಿತ ಸಾಲದ ಪ್ರಯೋಜನಗಳು ಅರ್ಹ ಫಲಾನುಭವಿಗಳಿಗೆ ಲಭ್ಯವಾಗುವಂತೆ ಆಗಬೇಕು ಎಂದರು.
ಭಾರತೀ ಸ್ನಾತಕೋತ್ತರ ಮತ್ತು ಸಂಶೋಧನೆ ಕೇಂದ್ರದ ನಿರ್ದೇಶಕರು ಮತ್ತು ಡೀನ್ ಪ್ರೊ.ಎಸ್.ನಾಗರಾಜ, ಅರ್ಥಶಾಸ್ತ ವಿಭಾಗದ ನಿವೃತ್ತ ಮುಖ್ಯಸ್ಥ ಎಂ. ಪುಟ್ಟಸ್ವಾಮಿಗೌಡ, ಐಕ್ಯೂಎಸಿ ಸಂಯೋಜಕರಾದ ಡಾ.ಎಂ.ಪಿ. ತೇಜೇಶ್ ಕುಮಾರ್, ಎ.ಎಸ್. ಸಂಜೀವ್, ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿ ಕಳ್ಳಿಮೆಳ್ಳೆದೊಡ್ಡಿ ಪ್ರಸನ್ನಕುಮಾರ್,
ಚಂದ್ರಶೇಖರ್ ಹಾಗೂ ಅಧ್ಯಾಪಕರ ಮತ್ತು ಅಧ್ಯಾಪಕೇತರರು ಇದ್ದರು.