ಮಕ್ಕಳಲ್ಲಿ ಸಂವಹನ ಸಾಮರ್ಥ್ಯ ಬೆಳೆಸಿ

KannadaprabhaNewsNetwork |  
Published : Oct 01, 2024, 01:22 AM IST
ಚಿತ್ರದುರ್ಗ ಎರಡನೇ ಪುಟದ ಟಿಂಟ್ ಬಾಟಂ | Kannada Prabha

ಸಾರಾಂಶ

ಚಿತ್ರದುರ್ಗದ ಡಯಟ್‍ನಲ್ಲಿ ಆಂಗ್ಲ ಮಾಧ್ಯಮದಲ್ಲಿ ಬೋಧಿಸುವ ಶಿಕ್ಷಕರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಪ್ರಾಚಾರ್ಯ ಎಂ.ನಾಸಿರುದ್ದೀನ್ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಮಕ್ಕಳಿಗೆ ಇಂಗ್ಲೀಷ್ ಭಾಷೆಯಲ್ಲಿ ಸಂವಹನ ಸಾಮರ್ಥ್ಯ ಬೆಳೆಸಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.

ನಗರದ ಡಯಟ್‍ನಲ್ಲಿ ಜಿಲ್ಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 6ನೇ ತರಗತಿಗೆ ಆಂಗ್ಲ ಮಾಧ್ಯಮದಲ್ಲಿ ಬೋಧಿಸುತ್ತಿರುವ ಶಿಕ್ಷಕರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಭಾಷೆಯನ್ನು ಯಾಂತ್ರಿಕವಾಗಿ ಕಲಿಸದೆ ಭಾಷಾ ಕೌಶಲ್ಯಗಳಾದ ಆಲಿಸುವ, ಮಾತನಾಡುವ, ಓದುವ ಮತ್ತು ಬರೆಯುವ ಕೌಶಲ್ಯಗಳಲ್ಲಿ ಸಾಮರ್ಥ್ಯ ಬೆಳೆಸಬೇಕು ಎಂದರು.

ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳನ್ನು ಸಜ್ಜುಗೊಳಿಸಲು ಇಂಗ್ಲಿಷ್ ಭಾಷೆಯಲ್ಲಿ ಸಂವಹನ ಸಾಮರ್ಥ್ಯ ಗಳಿಸಲು ಮಾರ್ಗದರ್ಶನ ಮಾಡಬೇಕು ಎಂದು ಸಲಹೆ ನೀಡಿದರು.

ಗ್ರಾಮೀಣ ಪ್ರದೇಶದ ಬಹುತೇಕ ಮಕ್ಕಳು ಇಂಗ್ಲೀಷ್ ವಿಚಾರದಲ್ಲಿ ಭೀತಿ ಇಟ್ಟುಕೊಂಡಿರುವ ಸಾಧ್ಯತೆಗಳಿವೆ. ಇದನ್ನು ಹೋಗಲಾಡಿಸಿ ಅವರಲ್ಲಿ ಕಲಿಕೆ ಆಸಕ್ತಿ ಮೂಡಿಸಬೇಕು. ಇಂಗ್ಲೀಷ್ ಭಾಷಾ ಸಾಮರ್ಥ್ಯವನ್ನು ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದರು.

ನೋಡಲ್ ಅಧಿಕಾರಿ ಅಶ್ವಥ್ ನಾರಾಯಣ ಮಾತನಾಡಿ, ಇಂಗ್ಲಿಷ್ ಭಾಷೆಯ ಕಲಿಕೆ ಅಗತ್ಯವಾಗಿದ್ದು ಕನ್ನಡ ಭಾಷೆಯ ಜತೆಗೆ ಪ್ರಾಥಮಿಕ ಹಂತದಲ್ಲಿ ಮೂಲ ಕೌಶಲಗಳಲ್ಲಿ ಸಾಮರ್ಥ್ಯ ಪಡೆಯಲು ಮಕ್ಕಳಿಗೆ ಮಾರ್ಗದರ್ಶನ ನೀಡಬೇಕು. ಶಿಕ್ಷಕರು ಕಲಿಕಾರ್ಥಿಯನ್ನು ಕಲಿಕೆಗೆ ಪ್ರೇರೇಪಿಸುವದರ ಜತೆಗೆ ಆತ್ಮವಿಶ್ವಾಸದಿಂದ ಸಂವಹನ ನಡೆಸಲು ಚಟುವಟಿಕೆಗಳು, ಕಲಿಕಾ ಸಾಮಗ್ರಿಗಳನ್ನು ಬಳಸಬೇಕು ಎಂದರು.

ಈ ಸಂದರ್ಭದಲ್ಲಿ ಹಿರಿಯ ಉಪನ್ಯಾಸಕರಾದ ಜ್ಞಾನೇಶ್ವರ, ಗಿರಿಜಾ, ಅರ್ಜುಮಂದ್ ಬಾನು, ರೇವಣ್ಣ, ಎಸ್.ಬಸವರಾಜು, ಸಂಪನ್ಮೂಲ ವ್ಯಕ್ತಿಗಳಾದ ಪ್ರಕಾಶ್, ರಂಜಿತಾ, ಮಲ್ಲಿಕಾರ್ಜುನ, ನಾಗರತ್ನ, ಅನಿಲ್ ಮತ್ತು ಶಿಕ್ಷಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ