ಕನ್ನಡಪ್ರಭ ವಾರ್ತೆ ಬೀದರ್
ನಗರದ ಮಾಮನಕೇರಿಯ ಜ್ಞಾನಸುಧಾ ವಿದ್ಯಾಲಯದ ಜ್ಞಾನರಂಗ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ‘ಯುವಕರೊಂದಿಗೆ ಸಂವಾದ’ ಕಾರ್ಯಕ್ರಮದಲ್ಲಿ ಮಾತನಾಡಿ,‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ವಿ ಬದುಕು ರೂಪಿಸಿಕೊಳ್ಳಬೇಕೆಂದರೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕು. ಈ ಪರೀಕ್ಷೆಗಳಲ್ಲಿ ಯಶಸ್ಸು ಕಾಣಲು ಎಲ್ಲ ವಿಷಯಗಳನ್ನು ಸರಿಯಾಗಿ ಅರ್ಥಮಾಡಿಕೊಂಡು ವ್ಯಾಸಂಗ ಮಾಡುವುದರೊಂದಿಗೆ ಪ್ರತಿದಿನ ಕನ್ನಡ ಮತ್ತು ಇಂಗ್ಲಿಷ್ ಪತ್ರಿಕೆಯನ್ನು ಓದುವ ಹವ್ಯಾಸ ಮೈಗೂಡಿಸಿಕೊಳ್ಳಬೇಕು’ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಸಮೂಹ ಸನ್ನಿಗೆ ಒಳಗಾಗದೆ, ವೈಯಕ್ತಿಕವಾಗಿ ಮಾಡಿದ ಆಲೋಚನೆಯೊಂದಿಗೆ ಮುನ್ನುಗ್ಗಬೇಕು. ಅಂದಾಗ ಮಾತ್ರ ಏನನ್ನಾದರೂ ಹೊಸದನ್ನು ಸಾಧನೆ ಮಾಡಲು ಸಾಧ್ಯವಾಗುತ್ತದೆ’ ಎಂದರುವಿದ್ಯಾರ್ಥಿ ಜೀವನದಲ್ಲಿ ಇಂದು ಮಾಡಬೇಕಾದ ಕೆಲಸ ನಾಳೆ ಅಥವಾ ಇನ್ನೊಂದು ದಿನ ಮಾಡಿದರಾಯಿತು ಎನ್ನುವ ಮನಸ್ಥಿತಿ ಹೊಂದಬಾರದು. ಪ್ರತಿಯೊಂದು ಚಟುವಟಿಕೆಯಲ್ಲೂ ಪಾಲ್ಗೊಂಡು ತಮ್ಮ ಜ್ಞಾನ ಸಂಪತ್ತು ವೃದ್ಧಿಸಿ ಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.
ಮತ್ತೊಬ್ಬ ವಿದ್ಯಾರ್ಥಿನಿ ‘ಫೇಕ್ ಮಾಹಿತಿ ಹೇಗೆ ಗೊತ್ತು ಮಾಡಿಕೊಳ್ಳಬೇಕು’ ಎಂದು ಕೇಳಿದ ಪ್ರಶ್ನೆಗೆ ‘ಸಾಮಾಜಿಕ ಜಾಲತಾಣಗಳ ಮೇಲೆ ಪೂರ್ತಿ ನಂಬಿಕೆ ಇಡಬಾರದು. ಪುಸ್ತಕಗಳನ್ನು ಓದುವ ಮೂಲಕ ಸರಿಯಾದ ವಿಷಯ ಸಂಗ್ರಹಣೆಯನ್ನು ಹಲವಾರು ಆಯಾಮಗಳಿಂದ ಮಾಡಿಕೊಳ್ಳುವುದರ ಮೂಲಕ ಫೇಕ್ ಮಾಹಿತಿಯನ್ನು ತಿರಸ್ಕರಿಸಬಹುದು’ ಎಂದು ತಿಳಿಸಿದರು.
ಸಂಸ್ಥೆಯ ಅಧ್ಯಕ್ಷರಾದ ಡಾ. ಪೂರ್ಣಿಮಾ ಜಾರ್ಜ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾಗರ ಖಂಡ್ರೆಯವರು ಕೋವಿಡ್ ಸಂದರ್ಭದಲ್ಲಿ ಬಡಜನರ ಕಷ್ಟಗಳಿಗೆ ಸ್ಪಂದಿಸುವ ಮೂಲಕ ಸಾಮಾಜಿಕವಾಗಿ ಸೇವೆ ಸಲ್ಲಿಸಿದ್ದನ್ನು ನೆನೆದರು.
ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಸದಸ್ಯರಾದ ಚಂದ್ರಶೇಖರ ಪಾಟೀಲ್, ರವಿ ಮೂಲಗೆ, ಬೀದರ್ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾದ ಪೂಜಾ ಜಾರ್ಜ್ ಎಸ್., ಪ್ರತಿಷ್ಠಿತ ವ್ಯಕ್ತಿಯಾದ ಕಿರಣ ಸ್ಯಾಮುವೆಲ್, ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಚನ್ನವೀರ ಪಾಟೀಲ್, ಜ್ಞಾನಸುಧಾ ವಿದ್ಯಾಲಯದ ಪ್ರಾಚಾರ್ಯೆ ಸುನೀತಾ ಸ್ವಾಮಿ, ಉಪಪ್ರಾಚಾರ್ಯೆ ಕಲ್ಪನಾ ಮೋದಿ, ಮೇಲ್ವಿಚಾರಕರಾದ ರಜನಿ ಮೈಲೂರಕರ್ ಉಪಸ್ಥಿತರಿದ್ದರು.