ಹೊಸತನದ ಚಿಂತನೆಗಳಿಂದ ಅಗತ್ಯ ಕೌಶಲ್ಯಗಳ ಬೆಳೆಸಿಕೊಳ್ಳಿ: ಡಾ.ರಂಗಸ್ವಾಮಿ

KannadaprabhaNewsNetwork |  
Published : May 14, 2024, 01:09 AM IST
ಪೊಟೊ: 13ಎಸ್‌ಎಂಜಿಕೆಪಿ01ಶಿವಮೊಗ್ಗದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಸೋಮವಾರ ಕಾಲೇಜಿನ ಸಭಾಂಗಣದಲ್ಲಿ ಉಪನ್ಯಾಸಕರಿಗಾಗಿ ಏರ್ಪಡಿಸಿದ್ದ ಸಂಶೋಧನಾ ಪ್ರಕ್ರಿಯೆಗೆ ಆರ್ಥಿಕ ಸಹಕಾರ - ಸಮಗ್ರ ಅರಿವು ಕಾರ್ಯಾಗಾರವನ್ನು ವಿಟಿಯು ಗ್ಲೋಬಲ್ ಕ್ಯಾಂಪಸ್ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕ ಡಾ. .ಕೆ.ಜಿ.ಬಸವ ಕುಮಾರ್ ಉದ್ಘಾಟಿಸಿದರು. | Kannada Prabha

ಸಾರಾಂಶ

ಸಂಶೋಧನಾ ಪ್ರಬಂಧಗಳ ಮಂಡನೆಯಲ್ಲಿ ಭಾರತ ನಾಲ್ಕನೇ ಸ್ಥಾನದಲ್ಲಿದ್ದು, ಕಳೆದ ಐದು ವರ್ಷದಲ್ಲಿ 1.5 ದಶಲಕ್ಷ ಪ್ರಬಂಧಗಳು ಮಂಡನೆಯಾಗಿವೆ. ಅಂತಹ ನಾವೀನ್ಯ ಯೋಜನೆಗಳು ವಾಣಿಜ್ಯೀಕರಣಗೊಳ್ಳಬೇಕಿದೆ. ಹೊಸತನದ ಚಿಂತನೆಗಳ ಮೂಲಕ ಅಗತ್ಯ ಕೌಶಲ್ಯತೆಗಳ ಬೆಳೆಸಿಕೊಳ್ಳಿ, ದೇಶದ ಆರ್ಥಿಕ ವೃದ್ಧಿಗೆ ಕೊಡುಗೆಗಳನ್ನು ನೀಡಿ. ಈ ಹಿನ್ನೆಲೆಯಲ್ಲಿ ವಿದ್ಯಾಸಂಸ್ಥೆಗಳಲ್ಲಿ ಪ್ರಯೋಗಾತ್ಮಕ ವಾತಾವರಣ ನಿರ್ಮಿಸುವತ್ತ ಉಪನ್ಯಾಸಕ ಸಮೂಹ ಹೆಚ್ಚು ಕೇಂದ್ರಿಕರಿಸಬೇಕಿದೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ವಿದ್ಯಾಸಂಸ್ಥೆಗಳಲ್ಲಿ ಪ್ರಯೋಗಶೀಲ ವಾತಾವರಣ ನಿರ್ಮಾಣ ಮಾಡುವತ್ತ ಉಪನ್ಯಾಸಕ ಸಮೂಹ ಹೆಚ್ಚು ಒತ್ತು ನೀಡಬೇಕಿದೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕುಲಸಚಿವ ಡಾ.ಬಿ.ಈ.ರಂಗಸ್ವಾಮಿ ಕರೆ ನೀಡಿದರು.

ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಸೋಮವಾರ ಕಾಲೇಜಿನ ಸಭಾಂಗಣದಲ್ಲಿ ಉಪನ್ಯಾಸಕರಿಗಾಗಿ ಏರ್ಪಡಿಸಿದ್ದ ಸಂಶೋಧನಾ ಪ್ರಕ್ರಿಯೆಗೆ ಆರ್ಥಿಕ ಸಹಕಾರ - ಸಮಗ್ರ ಅರಿವು ಕಾರ್ಯಾಗಾರ ಉದ್ದೇಶಿಸಿ ಆನ್ಲೈನ್ ಮೂಲಕ ಮಾತನಾಡಿದ ಅವರು, ಭಾರತ ಸರ್ಕಾರವು ಅನುಸಂಧಾನ ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನದ ಮೂಲಕ ನಾವೀನ್ಯಯುತ ಪ್ರಯೋಗಗಳಿಗೆ ಪ್ರೇರಕ ವೇದಿಕೆಗಳನ್ನು ನೀಡುತ್ತಿದೆ. ಸಂಶೋಧನಾ ಪ್ರಬಂಧಗಳ ಮಂಡನೆಯಲ್ಲಿ ಭಾರತ ನಾಲ್ಕನೇ ಸ್ಥಾನದಲ್ಲಿದ್ದು, ಕಳೆದ ಐದು ವರ್ಷದಲ್ಲಿ 1.5 ದಶಲಕ್ಷ ಪ್ರಬಂಧಗಳು ಮಂಡನೆಯಾಗಿವೆ. ಅಂತಹ ನಾವೀನ್ಯ ಯೋಜನೆಗಳು ವಾಣಿಜ್ಯೀಕರಣಗೊಳ್ಳಬೇಕಿದೆ. ಹೊಸತನದ ಚಿಂತನೆಗಳ ಮೂಲಕ ಅಗತ್ಯ ಕೌಶಲ್ಯತೆಗಳ ಬೆಳೆಸಿಕೊಳ್ಳಿ, ದೇಶದ ಆರ್ಥಿಕ ವೃದ್ಧಿಗೆ ಕೊಡುಗೆಗಳನ್ನು ನೀಡಿ. ಈ ಹಿನ್ನೆಲೆಯಲ್ಲಿ ವಿದ್ಯಾಸಂಸ್ಥೆಗಳಲ್ಲಿ ಪ್ರಯೋಗಾತ್ಮಕ ವಾತಾವರಣ ನಿರ್ಮಿಸುವತ್ತ ಉಪನ್ಯಾಸಕ ಸಮೂಹ ಹೆಚ್ಚು ಕೇಂದ್ರಿಕರಿಸಬೇಕಿದೆ ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ನಾವು ನಡೆಸುವ ಪ್ರಯೋಗಗಳು ಹಾಗೂ ಆವಿಷ್ಕಾರಗಳು ಪರಿಸರಕ್ಕೆ ಹಾನಿಯಾಗದಂತಿರಬೇಕು. ನಾವೀನ್ಯತೆಯೊಂದಿಗೆ ಆರೋಗ್ಯಕರ ಪರಿಸರವನ್ನು ಮುಂದಿನ ತಲೆಮಾರಿಗೆ ನೀಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ತಿಳಿಸಿದರು.

ಸಂಶೋಧನಾ ಪ್ರಕ್ರಿಯೆಗೆ ಆರ್ಥಿಕ ಸಹಕಾರ ನೀಡುವ ಅನೇಕ ವೇದಿಕೆಗಳು ನಮ್ಮ ಮುಂದಿದೆ. ಅಂತಹ ಸೌಲಭ್ಯಗಳನ್ನು ಪಡೆಯುವಾಗ ನಮ್ಮ ನಾವೀನ್ಯ ಯೋಚನೆಗಳನ್ನು ಉತ್ತಮ ರೀತಿಯಲ್ಲಿ ಪ್ರಸ್ತುತಪಡಿಸಬೇಕು. ಸಂಶೋಧನೆಯ ಪ್ರಸ್ತಾವನೆಗಳು ಹೊಸ ಅವಕಾಶಗಳನ್ನು ಸೆಳೆಯುವಂತಿರಬೇಕು ಎಂದು ಸಲಹೆ ನೀಡಿದರು.

ವಿಟಿಯು ಗ್ಲೋಬಲ್ ಕ್ಯಾಂಪಸ್ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕ ಡಾ.ಕೆ.ಜಿ.ಬಸವ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜೆ.ಎನ್.ಎನ್.ಸಿ.ಇ ಕಾಲೇಜಿನ ಪ್ರಾಂಶುಪಾಲ ಡಾ.ವೈ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಶೈಕ್ಷಣಿಕ ಡೀನ್ ಡಾ.ಪಿ.ಮಂಜುನಾಥ, ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ ಸೇರಿ ಮತ್ತಿತರರಿದ್ದರು. ಸಹ ಪ್ರಾಧ್ಯಾಪಕಿ ಉಜ್ವಲ ರವಿಕುಮಾರ್ ಪ್ರಾರ್ಥಿಸಿ, ಡಾ.ಶ್ವೇತಾ ನಿರೂಪಿಸಿದರು. ವಿಟಿಯು ಮೈಸೂರು ವಿಭಾಗದ 23 ಎಂಜಿನಿಯರಿಂಗ್ ಕಾಲೇಜುಗಳ 110 ಕ್ಕೂ ಹೆಚ್ಚು ಸಂಶೋಧನಾರ್ಥಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!