ಮಕ್ಕಳಲ್ಲಿ ಕಷ್ಟಗಳನ್ನು ಎದುರಿಸುವ ಮನೋಸ್ಥೈರ್ಯ ಬೆಳೆಸಿ

KannadaprabhaNewsNetwork |  
Published : Mar 16, 2024, 01:47 AM ISTUpdated : Mar 16, 2024, 01:48 AM IST
ಚಿತ್ರ 15ಬಿಡಿಆರ್5ಬೀದರ್‌ ನಗರದ ಮಾಮನಕೇರಿಯಲ್ಲಿರುವ ಜ್ಞಾನಸುಧಾ ವಿದ್ಯಾಲದಯದ ಜ್ಞಾನರಂಗ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ‘ತಾಯಂದಿರ ದಿನಾಚರಣೆ’ ಆಚರಿಸಲಾಯಿತು. | Kannada Prabha

ಸಾರಾಂಶ

ಜೀವನದಲ್ಲಿ ಎದುರಾಗುವ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿಕೊಂಡು ಎದುರಿಸುವ ಮನೋಸ್ಥೈರ್ಯವನ್ನು ಇಂದಿನ ಮಕ್ಕಳಲ್ಲಿ ಬೆಳೆಸಬೇಕಾದ ಅವಶ್ಯಕತೆಯಿದೆ.

ಬೀದರ್: ಜೀವನದಲ್ಲಿ ಎದುರಾಗುವ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿಕೊಂಡು ಎದುರಿಸುವ ಮನೋಸ್ಥೈರ್ಯವನ್ನು ಇಂದಿನ ಮಕ್ಕಳಲ್ಲಿ ಬೆಳೆಸಬೇಕಾದ ಅವಶ್ಯಕತೆಯಿದೆ ಎಂದು ಜ್ಞಾನಸುಧಾ ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ಡಾ.ಪೂರ್ಣಿಮಾ ಜಾರ್ಜ್‌ ಅಭಿಪ್ರಾಯಪಟ್ಟರು.

ನಗರದ ಮಾಮನಕೇರಿಯಲ್ಲಿರುವ ಜ್ಞಾನಸುಧಾ ವಿದ್ಯಾಲದಯದ ಜ್ಞಾನರಂಗ ಸಭಾಂಗಣದಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣೆ ಪ್ರಯುಕ್ತ ತಾಯಂದಿರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, ‘ಮಕ್ಕಳ ವ್ಯಕ್ತಿತ್ವ ಉತ್ತಮವಾಗಿ ರೂಪಿಸುವಲ್ಲಿ ತಾಯಂದಿರ ಪಾತ್ರ ಬಹಳ ಮಹತ್ವದ್ದಾಗಿದೆ ಎಂದರು.

ಇಂದಿನ ಮಕ್ಕಳು ಹಲವಾರು ರೀತಿಯ ಮಾನಸಿಕ ಒತ್ತಡಕ್ಕೆ ಒಳಗಾಗಿ ಕಲಿಕೆಯಿಂದ ಹಿಂಜರಿಯುತ್ತಿದ್ದಾರೆ. ಆದ್ದರಿಂದ ಅವರ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಅವರೇ ಬಗೆಹರಿಸಿಕೊಳ್ಳುವ ಆತ್ಮವಿಶ್ವಾಸ ಹೆಚ್ಚಿಸಬೇಕಾಗಿದೆ ಎಂದು ತಿಳಿಸಿದರು.

ಮಕ್ಕಳನ್ನು ಪಾಲನೆ ಪೋಷಣೆ ಮಾಡುವುದೆಂದರೆ ತಾಯಿ ಪಾಲಿಗೆ ಒಂದು ರೀತಿಯ ತಪಸ್ಸು ಮಾಡಿದ ಹಾಗೆ. ಮಕ್ಕಳ ಪ್ರತಿಯೊಂದು ನಡವಳಿಕೆ ಮೇಲೆ ಗಮನವಿಡಬೇಕು. ತಪ್ಪು ಮಾಡಿದಾಗ ತಿದ್ದಿ ಬುದ್ಧಿ ಹೇಳಬೇಕು. ಪಾಲಕರಾದವರು ಮಕ್ಕಳ ಮುಂದೆ ಜಗಳವಾಡಿದರೆ ಅವರು ಅದನ್ನೇ ಹೆಚ್ಚಾಗಿ ಅನುಕರಣೆ ಮಾಡುವ ಸಾಧ್ಯತೆ ಇರುತ್ತದೆ ಎಂದರು.

ಮಕ್ಕಳ ಸರ್ವತೋಮುಖ ಬೆಳೆವಣಿಗೆಯಲ್ಲಿ ಶಾಲೆಯ ಪಾತ್ರ ಎಷ್ಟು ಮುಖ್ಯವೋ, ಪಾಲಕರ ಪಾತ್ರವೂ ಅಷ್ಟೇ ಮುಖ್ಯವಾಗಿದೆ. ಮಕ್ಕಳಲ್ಲಿ ಉತ್ತಮ ಕನಸುಗಳನ್ನು ಬಿತ್ತಿ, ಉದಾತ್ತವಾದ ಆಲೋಚನಾ ಶಕ್ತಿ ಬೆಳೆಸಿದಾಗ ಮಾತ್ರ ಅವರು ಭವಿಷ್ಯದಲ್ಲಿ ವಿಶ್ವದ ನಾಯಕನಾಗಿ ಹೊರಹೊಮ್ಮಲು ಸಾಧ್ಯವಿದೆ ಎಂದು ಹೇಳಿದರು.

ಬೀದರ್‌ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೈದ್ಯಾರಾದ ಡಾ.ಪುಷ್ಪಾ ಮಾತನಾಡಿ, ಮಕ್ಕಳಲ್ಲಿ ಮಾನವೀಯ ಗುಣಗಳನ್ನು ಬೆಳೆಸುವಲ್ಲಿ ತಾಯಿಯ ಪಾತ್ರ ಬಹಳ ಮುಖ್ಯವಾಗಿದೆ. ಇನ್ನೊಬ್ಬರೊಂದಿಗೆ ಯಾವ ರೀತಿ ಮಾತನಾಡಬೇಕು ಎಂಬ ಕೌಶಲ್ಯ ಅವರಲ್ಲಿ ಬೆಳೆಸಬೇಕು. ಮಕ್ಕಳನ್ನು ಹೆಚ್ಚಿನ ಅಂಕ ಪಡೆದ ಮಗುವಿಗೆ ಹೋಲಿಕೆ ಮಾಡಿ ಅಪಮಾನ ಮಾಡಿದರೆ ಅವರು ಒತ್ತಡಕ್ಕೆ ಒಳಗಾಗಿ ಮಾನಸಿಕ ಖಿನ್ನತೆಗೆ ಒಳಗಾಗುವ ಸಾಧ್ಯತೆ ಇರುತ್ತದೆ’ ಎಂದು ತಿಳಿಸಿದರು.

ಜ್ಞಾನಸುಧಾ ವಿದ್ಯಾಲಯದ ನಿರ್ದೇಶಕರಾದ ಡಾ.ಮುನೇಶ್ವರ ಲಾಖಾ ಮಾತನಾಡಿ, ‘ತಾಯಿ ಜವಾಬ್ದಾರಿ ಕೇವಲ ಮಕ್ಕಳನ್ನು ಶಾಲೆಗೆ ಕಳುಹಿಸುವುದೊಂದೇ ಅಲ್ಲ, ಆ ಜವಾಬ್ದಾರಿಯೊಂದಿಗೆ ಮಕ್ಕಳ ಪ್ರತಿಯೊಂದು ವರ್ತನೆ ಗಮನಿಸಬೇಕು. ಯಾವುದೇ ಕಾರಣಕ್ಕೂ ಮಕ್ಕಳಲ್ಲಿ ಬೆಳೆಯುವ ನಕರಾತ್ಮಕ ವರ್ತನೆಗಳನ್ನು ಮುಚ್ಚಿಡದೆ ಅದನ್ನು ಶಾಲೆಯಲ್ಲಿ ಶಿಕ್ಷಕರಿಗೆ ತಿಳಿಸಿದಾಗ ಮಾತ್ರ ಆ ವರ್ತನೆಯನ್ನು ತಿದ್ದಲು ಸಾಧ್ಯವಾಗುತ್ತದೆ ಎಂದರು.

ಜಿಎನ್‌ಡಿ ಎಂಜಿನಿಯರಿಂಗ್‌ ಕಾಲೇಜಿನ ಉಪನ್ಯಾಸಕ ಸೋನಿ ಮಾನಕಾರಿ ಮಾತನಾಡಿ, ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸುವ ದಿಸೆಯಲ್ಲಿ ಜ್ಞಾನಸುಧಾ ವಿದ್ಯಾಲಯ ನಿರಂತರವಾಗಿ ಶ್ರಮಿಸುತ್ತಿದ್ದು, ಅದಕ್ಕಾಗಿ ಹಲವಾರು ರೀತಿಯ ಪಠ್ಯೇತರ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿರುವುದು ಬಹಳ ಶ್ಲಾಘನೀಯವಾಗಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಖಜಾಂಚಿ ಸಂಗೀತಾ ಲಾಖಾ, ಜ್ಞಾನಸುಧಾ ವಿದ್ಯಾಲಯದ ಪ್ರಾಚಾರ್ಯರಾದ ಸುನೀತಾ ಸ್ವಾಮಿ, ಉಪಪ್ರಾಚಾರ್ಯರಾದ ಕಲ್ಪನಾ, ಮೇಲ್ವಿಚಾರಕರಾದ ರಜನಿ, ಸಾಯಿಗೀತಾ, ವಸಿಮಾ ಉಪಸ್ಥಿತರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ