ಭಗೀರಥರ ಛಲ, ದೃಢಸಂಕಲ್ಪ ಬೆಳೆಸಿಕೊಳ್ಳಿ: ಚಿದಾನಂದಪ್ಪ

KannadaprabhaNewsNetwork |  
Published : May 06, 2025, 12:19 AM IST
ಬಳ್ಳಾರಿಯಲ್ಲಿ ಭಾನುವಾರ ಜರುಗಿದ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ವಿ.ಚಿದಾನಂದಪ್ಪ ಅವರು ಮಾತನಾಡಿದರು.  | Kannada Prabha

ಸಾರಾಂಶ

ಮಹರ್ಷಿ ಭಗೀರಥರು ಛಲ ಮತ್ತು ದೃಢಸಂಕಲ್ಪ ಹೊಂದಿದವರು. ಇಂತಹ ಮಹನೀಯರ ಆದರ್ಶಗಳನ್ನು ನಾವೆಲ್ಲರೂ ಬೆಳೆಸಿಕೊಳ್ಳೋಣ.

ಬಳ್ಳಾರಿಯಲ್ಲಿ ಸಂಭ್ರಮದ ಶ್ರೀ ಭಗೀರಥ ಜಯಂತಿ ಆಚರಣೆಕನ್ನಡಪ್ರಭ ವಾರ್ತೆ ಬಳ್ಳಾರಿ

ಮಹರ್ಷಿ ಭಗೀರಥರು ಛಲ ಮತ್ತು ದೃಢಸಂಕಲ್ಪ ಹೊಂದಿದವರು. ಇಂತಹ ಮಹನೀಯರ ಆದರ್ಶಗಳನ್ನು ನಾವೆಲ್ಲರೂ ಬೆಳೆಸಿಕೊಳ್ಳೋಣ ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ವಿ. ಚಿದಾನಂದಪ್ಪ ಹೇಳಿದರು.

ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಭಾನುವಾರ ಏರ್ಪಡಿಸಿದ್ದ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮವನ್ನು ಮಹರ್ಷಿ ಭಗೀರಥ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಭಗೀರಥರು ಛಲ ಮತ್ತು ದೃಢ ವಿಶ್ವಾಸದಿಂದ ಶಿವನನ್ನು ಮೆಚ್ಚಿಸಲು ಘೋರ ತಪಸ್ಸು ಮಾಡಿದವರು ಎಂದು ತಿಳಿಸಿದರು.

ಸಹಾಯಕ ಆಯುಕ್ತ ಪ್ರಮೋದ್ ಮಾತನಾಡಿ, ಸೂರ್ಯವಂಶದ ರಾಜನಾದ ಭಗೀರಥ ಮಹಾರಾಜ ತನ್ನ ಜನರಿಗಾಗಿ ಶಿವನನ್ನು ಕುರಿತು ತಪಸ್ಸು ಮಾಡಿ ಗಂಗೆಯನ್ನು ಧರೆಗೆ ತಂದ ಮಹಾ ಪುರುಷ. ಅವರ ತತ್ವ-ಸಿದ್ದಾಂತಗಳು ಇಂದಿಗೂ ಪ್ರಸ್ತುತ ಎಂದರು.

ಭಗೀರಥ ಮಹರ್ಷಿಗಳ ತಪೋ ಶಕ್ತಿಗೆ ಶಿವನೇ ಪ್ರತ್ಯಕ್ಷವಾಗಿ, ಧರೆಗೆ ಗಂಗೆಯನ್ನು ಇಳಿಸಿದರು ಎಂಬುದನ್ನು ನಾವೆಲ್ಲರೂ ಅರಿತುಕೊಳ್ಳಬೇಕಾಗಿದೆ ಎಂದರು.

ಕನ್ನಡ ಉಪನ್ಯಾಸಕ ಅಮಾತಿ ಬಸವರಾಜ ವಿಶೇಷ ಉಪನ್ಯಾಸ ನೀಡಿ, ಭಗೀರಥರು ಶಿವನನ್ನು ಮೆಚ್ಚಿಸಲು ತಪಸ್ಸು ಮಾಡಿದವರು. ಪವಿತ್ರ ಗಂಗೆಯನ್ನು ತಪಸ್ಸು ಮಾಡುವ ಮೂಲಕ ಸ್ವರ್ಗದಿಂದ ಭೂಮಿಯ ಮೇಲೆ ತರಿಸಿದವರು ಎಂದರು.

ಕಾರ್ಯಕ್ರಮದಲ್ಲಿ ಬಿ. ಕಾಸಿಂ ಅಲಿ ತಂಡದವರು ಭಕ್ತಿ ಸಂಗೀತ ಪ್ರಸ್ತುತ ಪಡಿಸಿದರು.

ಈ ಸಂದರ್ಭ ಮಹಾನಗರ ಪಾಲಿಕೆಯ ಸಭಾ ನಾಯಕ ಪಿ.ಗಾದೆಪ್ಪ, ಜಿಲ್ಲಾ ಭಗೀರಥ ಉಪ್ಪಾರ ಸಂಘ ಅಧ್ಯಕ್ಷ ಹನುಮೇಶ್ ಉಪ್ಪಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಸಮಾಜದ ಮುಖಂಡರು, ಜನಪ್ರತಿನಿಧಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಸಡಗರದ ಮೆರವಣಿಗೆ:

ಭಗೀರಥ ಜಯಂತಿ ಅಂಗವಾಗಿ ಏರ್ಪಡಿಸಿದ್ದ ಮೆರವಣಿಗೆಯು ಸಡಗರದಿಂದ ನಡೆಯಿತು. ಮೆರವಣಿಗೆಯು ನಗರದ ರಾಜ್‌ಕುಮಾರ್ ರಸ್ತೆಯ ಮುನ್ಸಿಪಲ್ ಕಾಲೇಜು ಮೈದಾನದಿಂದ ಆರಂಭಗೊಂಡು ಗಡಿಗಿ ಚೆನ್ನಪ್ಪ ವೃತ್ತ-ಬೆಂಗಳೂರು ರಸ್ತೆ-ಹಳೆ ಬ್ರೂಸ್ ಪೇಟೆ ಪೊಲೀಸ್ ಠಾಣೆ ರಸ್ತೆ-ತೇರು ಬೀದಿ-ಹೆಚ್.ಆರ್.ಗವಿಯಪ್ಪ ವೃತ್ತ- ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದವರೆಗೆ ಸಾಗಿ ಬಂದು ಸಂಪನ್ನಗೊಂಡಿತು. ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಭಾಗವಹಿಸಿ ಮೆರಗು ನೀಡಿದವು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ