ಕನ್ನಡಪ್ರಭ ವಾರ್ತೆ ತೀರ್ಥಹಳ್ಳಿ
ಪಟ್ಟಣದ ಬಂಟರ ಭವನದಲ್ಲಿ ಗುರುವಾರ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದಿನ ಅವಧಿಯಲ್ಲಿ ಹಾಲಿ ಸಂಸದ ಬಿ.ವೈ.ರಾಘವೇಂದ್ರರ ನೇತೃತ್ವದಲ್ಲಿ ಕ್ಷೇತ್ರಕ್ಕೆ ಅನುದಾನ ಹರಿದು ಬಂದಿದ್ದು, ಈ ಕ್ಷೇತ್ರದಲ್ಲಿ ನಮ್ಮ ಗೆಲುವು ತಡೆಯುವ ಶಕ್ತಿ ಯಾರಿಗೂ ಇಲ್ಲ. ಬಿಜೆಪಿ ವರಿಷ್ಠರು ಹಾಗೂ ಎಚ್.ಡಿ.ದೇವೇಗೌಡರು ಮತ್ತು ಕುಮಾರಸ್ವಾಮಿಯವರ ಆಶಯದಂತೆ ಜೆಡಿಎಸ್ ಕಾರ್ಯಕರ್ತರೊಂದಿಗೆ ಸೇರಿ ಕಳೆದ ಅವಧಿಯಲ್ಲಿ ಗಳಿಸಿದ ಎರಡಷ್ಟು ಮತಗಳಿಂದ ಗೆಲ್ಲುತ್ತೇವೆ ಎಂದು ಹೇಳಿದರು.
ಬಿಜೆಪಿ ನೇತೃತ್ವದ ಈ ಎರಡು ಅವಧಿಯಲ್ಲಿ ರೈಲ್ವೆ, ವಿಮಾನ ಸೇರಿ ಉದ್ಯಮ ಕ್ಷೇತ್ರದಲ್ಲೂ ಗಣನೀಯ ಸಾಧನೆ ಮಾಡಲಾಗಿದೆ. ಬರ ನಿರ್ವಹಣೆ ಮಾಡಲಾಗದ ರಾಜ್ಯ ಸರ್ಕಾರ ಕಳೆದ ಚುನಾವಣೆಯಲ್ಲಿ ಜನರಿಗೆ ಆಮಿಷವೊಡ್ಡಿದ ಪರಿಣಾಮ ಬಿಜೆಪಿ, ಜೆಡಿಎಸ್ ವಿರೋಧ ಪಕ್ಷದಲ್ಲಿ ಕೂರುವ ಸ್ಥಿತಿ ನಿರ್ಮಾಣವಾಗಿದೆ. ತೆರಿಗೆ ಹಣ ದುರುಪಯೋಗ ಮಾಡಿಕೊಳ್ಳಲಾಗುತ್ತಿದ್ದು ಗ್ಯಾರಂಟಿ ಯೋಜನೆಯಲ್ಲೂ ಜನರಿಗೆ ಹಣ ಬರುತ್ತಿಲ್ಲ ಎಂದು ಟೀಕಿಸಿದರು.ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮ:
ಕೆ.ಎಸ್.ಈಶ್ವರಪ್ಪ ನಿರ್ಧಾರ ಬದಲಿಸುವ ವಿಶ್ವಾಸ:
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪ್ರಭಾರಿ, ಮಾಜಿ ಶಾಸಕ ರಘುಪತಿ ಭಟ್, ಕೆ.ಎಸ್ ಈಶ್ವರಪ್ಪ ಬಿಜೆಪಿ ಹಿರಿಯ ಮುಖಂಡರಾಗಿದ್ದು ಪಕ್ಷದ ನಿಲುವಿಗೆ ವಿರುದ್ಧವಾಗಿ ನಡೆಯಲಾರರು ಎಂಬ ವಿಶ್ವಾಸವಿದೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.ಮಂಡಲ ಬಿಜೆಪಿ ಅಧ್ಯಕ್ಷ ಹೆದ್ದೂರು ನವೀನ್, ಕಾರ್ಯದರ್ಶಿ ಮೋಹನ ಭಟ್, ಮಧುರಾಜ ಹೆಗ್ಡೆ, ಸಾಲೇಕೊಪ್ಪ ರಾಮಚಂದ್ರ, ಚಂದವಳ್ಳಿ ಸೋಮಶೇಕರ್, ಬೇಗುವಳ್ಳಿ ಸತೀಶ್, ಸಂದೇಶ ಜವಳಿ, ರಕ್ಷಿತ್, ಜೆಡಿಎಸ್ ಮುಖಂಡರಾದ ಗುರುದತ್, ಮೇದೋಳಿಗೆ ರಾಮಸ್ವಾಮಿ, ಶೈಲಾ ನಾಗರಾಜ್ ಇದ್ದರು.
ಸಾಮಾಜಿಕವಾಗಿಯೂ ದೇಶ ಬಲಿಷ್ಠಪ್ರಧಾನಿ ನರೇಂದ್ರ ಮೋದಿಯವರ ಎರಡು ಅವಧಿಯ ಆಡಳಿತದಲ್ಲಿ ದೇಶ ಜಗತ್ತಿನ 5ನೇ ದೊಡ್ಡ ಆರ್ಥಿಕ ಶಕ್ತಿಯಾಗಿ ರೂಪುಗೊಂಡಿದೆ. ವಿಶ್ವದ ಅತಿ ದೊಡ್ಡ ಸೈನ್ಯದ ಶಕ್ತಿಯನ್ನೂ ಹೊಂದಿ ಸುರಕ್ಷಿತವಾಗಿದ್ದು, ವಿಚ್ಛಿದ್ರಕಾರಕ ಶಕ್ತಿಗಳ ನಿರ್ನಾಮ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಸಾಮಾಜಿಕವಾಗಿಯೂ ಬಲಿಷ್ಠಗೊಂಡಿರುವ ಭಾರತದಲ್ಲಿ 20 ಕೋಟಿ ಕುಟುಂಬಗಳ ಬಡತನದ ರೇಖೆಯಿಂದ ಮೇಲೆತ್ತಲಾಗಿದೆ.
ಆರಗ ಜ್ಞಾನೇಂದ್ರ, ಶಾಸಕ