ಕನ್ನಡಪ್ರಭ ವಾರ್ತೆ ಸಾಗರ
ಪಟ್ಟಣದ ಡಿಎಸ್ಎಸ್ ಸಭಾಭವನದಲ್ಲಿ ಬಿಜೆಪಿ ನಗರ ಮಂಡಲ ವತಿಯಿಂದ ಆಯೋಜಿಸಲಾಗಿದ್ದ ವಿಕಸಿತ ಭಾರತ ಸಂಕಲ್ಪ ಅಭಿಯಾನದಲ್ಲಿ ಮಾತನಾಡಿದ ಅವರು, ಅನೇಕ ವರ್ಷಗಳ ಕಾಲ ಕಾಂಗ್ರೆಸ್ ಪಕ್ಷ ಗರೀಭಿ ಹಟಾವೋ ಎಂದು ಹೇಳುತ್ತಾ ದೇಶದ ಆಡಳಿತ ನಡೆಸಿತ್ತು. ಆದರೆ ಬಡತನ ನಿವಾರಣೆಯಾಗಿಲ್ಲ, ಕಾಂಗ್ರೆಸ್ಸೇತರ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಅಭಿವೃದ್ಧಿಪರ್ವ ಆರಂಭಗೊಂಡಿದೆ ಎಂದರು.
ಕಳೆದ ೧೧ ವರ್ಷದಲ್ಲಿ ದೇಶದಲ್ಲಿ ಹಣದುಬ್ಬರ ಕಡಿಮೆಯಾಗಿದೆ. ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯಾಗಿದೆ. ಒಂದು ಕಾಲದಲ್ಲಿ ಬಂದೂಕಿನ ನಳಿಗೆ ಕೆಳಗೆ ಮತದಾನ ನಡೆಯುತ್ತಿತ್ತು. ಈಗ ಪರಿಸ್ಥಿತಿ ಬದಲಾಗಿದ್ದು ಪಾರದರ್ಶಕ ಚುನಾವಣೆ ನಡೆಯುತ್ತಿದೆ. ದೇಶದಲ್ಲಿ ಪ್ರಜಾಪ್ರಭುತ್ವದ ಬೇರು ಗಟ್ಟಿಯಾಗಿದೆ. ೨೦೪೭ಕ್ಕೆ ವಿಕಸಿತ ಭಾರತ ವಿಶ್ವಕ್ಕೆ ನೇತೃತ್ವ ವಹಿಸಲಿದೆ. ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ಆಡಳಿತ ದೇಶವನ್ನು ವಿಶ್ವಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡಿದೆ. ಪಕ್ಷದ ಕಾರ್ಯಕರ್ತರು ಕೇಂದ್ರ ಸರ್ಕಾರದ ಸಾಧನೆಯನ್ನು ಮನೆಮನೆಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್ ಮಾತನಾಡಿ, ಕಳೆದ ೧೧ ವರ್ಷದಲ್ಲಿ ಭಾರತದ ಭವಿಷ್ಯ ಉಜ್ವಲವಾಗಿದೆ. ಹಿಂದೆ ಕಾಂಗ್ರೆಸ್ ಸರ್ಕಾರದ ಆಳ್ವಿಕೆ ಸಂದರ್ಭದಲ್ಲಿ ಭಾರತ ವಿಶ್ವದ ಎದುರು ಗುರುತಿಸಿಕೊಳ್ಳುವುದು ಕಷ್ಟವಾಗಿತ್ತು. ಇದೀಗ ಇಡೀ ವಿಶ್ವ ಭಾರತವನ್ನು ವಿಶೇಷವಾಗಿ ಗುರುತಿಸುತ್ತಿದ್ದು, ಇದಕ್ಕೆ ನರೇಂದ್ರ ಮೋದಿಯವರ ಸಮರ್ಥ ಆಡಳಿತವೇ ಕಾರಣವಾಗಿದೆ ಎಂದರು.
ನಗರಸಭೆ ಉಪಾಧ್ಯಕ್ಷೆ ಸವಿತಾ ವಾಸು, ಸದಸ್ಯರಾದ ಆರ್.ಶ್ರೀನಿವಾಸ್, ಮಧುರಾ ಶಿವಾನಂದ್, ಪ್ರದೀಪ್ ಆಚಾರಿ, ಪ್ರೇಮ ಕಿರಣ್ ಸಿಂಗ್, ಸತೀಶ್ ಬಾಬು, ಪರಶುರಾಮ್, ಸತೀಶ್ ಕೆ., ಸಂತೋಷ್ ರಾಯಲ್ ಇನ್ನಿತರರು ಹಾಜರಿದ್ದರು.