ಮೊರನಾಳ ಗ್ರಾಮದಲ್ಲಿ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ
ಕನ್ನಡಪ್ರಭ ವಾರ್ತೆ ಕೊಪ್ಪಳ
ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯಿತಿಯ ಮೊರನಾಳ ಗ್ರಾಮದ ಮಲಿಯಾಂಬಿಕಾ ದೇವಸ್ಥಾನದ ಆವರಣದಲ್ಲಿ ಬುಧವಾರ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ದತ್ತು ಗ್ರಾಮ ಅಭಿವೃದ್ಧಿಗಾಗಿ ಆಯ್ಕೆ ಮಾಡಿರುವ ಕುರಿತು ಗ್ರಾಮಸ್ಥರೊಂದಿಗೆ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಎಲ್ಲ ತಾಂತ್ರಿಕ ಸಹಾಯಕರು ಪ್ರತಿ ಕಾಲನಿಗೆ ಭೇಟಿ ನೀಡಿ ಚರಂಡಿ, ರಸ್ತೆ, ಶಾಲಾಭಿವೃದ್ಧಿ ಕಾಮಗಾರಿಗಳು ಅನುಷ್ಠಾನಿಸಲು ಸಂಪೂರ್ಣ ಮಾಹಿತಿ ಸಲ್ಲಿಸುವಂತೆ ಪ್ರಕಾಶ ತಿಳಿಸಿದರು. ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ಅವಶ್ಯವಿರುವ ಕಾಮಗಾರಿ ಕುರಿತು ಸಭೆಯಲ್ಲಿ ವಿವರಿಸಿದರು.ಗ್ರಾಮಕ್ಕೆ ಅವಶ್ಯವಿರುವ ಕಾಮಗಾರಿಗಳನ್ನು ಮಹಾತ್ಮಾ ಗಾಂಧಿ ನರೇಗಾ ಯೋಜನೆ ಹಾಗೂ ವಿವಿಧ ಇಲಾಖೆಗಳ ಒಗ್ಗೂಡಿಸುವಿಕೆ ಮೂಲಕ ಕಾಮಗಾರಿಗಳನ್ನು ಅನುಷ್ಠಾನಿಸಲಾಗುವುದು ಎಂದು ಸಭೆಯಲ್ಲಿ ಗ್ರಾಮಸ್ಥರಿಗೆ ಮನವರಿಕೆ ಮಾಡಿದರು.
ಈ ಸಂದರ್ಭ ನರೇಗಾ ಸಹಾಯಕ ನಿರ್ದೇಶಕ ಯಂಕಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷ ದುರಗಪ್ಪ ಭಜೆಂತ್ರಿ, ಸದಸ್ಯರಾದ ಅಂದಪ್ಪ ಚೀಲಗೋದ್ರ ಹಾಗೂ ಭರಮಪ್ಪ ಹುಳ್ಳಿ, ಪಿಡಿಒ ದಾನಪ್ಪ ಸಂಗಟಿ, ತಾಂತ್ರಿಕ ಸಂಯೋಜಕ ಯಮನೂರಪ್ಪ, ತಾಲೂಕು ಐಇಸಿ ಸಂಯೋಜಕ ದೇವರಾಜ ಪತ್ತಾರ, ಗ್ರಾಮದ ಮುಖಂಡರಾದ ಚಂದ್ರಪ್ಪ ಹುಳ್ಳಿ, ಯಲ್ಲಪ್ಪ ಮಾಗಳಾದ, ದೇವಪ್ಪ ಮಾಗಳಾದ, ಸಣ್ಣ ಈರಪ್ಪ ಅಣಬಿ, ಮಂಜಪ್ಪ ಸಂಗಟಿ ಸೇರಿದಂತೆ ತಾಂತ್ರಿಕ ಸಹಾಯಕರು, ಬಿಎಫ್ಟಿಗಳು, ಗ್ರಾಪಂ ಸಿಬ್ಬಂದಿ ಉಪಸ್ಥಿತರಿದ್ದರು.