ಶೈಕ್ಷಣಿಕ ಪ್ರಗತಿಯಿಂದ ಸಮುದಾಯಗಳ ಅಭಿವೃದ್ಧಿ: ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

KannadaprabhaNewsNetwork |  
Published : May 10, 2025, 01:02 AM IST
9ಎಎನ್ಟಿ1ಇಪಿ: ಆನವಟ್ಟಿ ಸಮೀಪದ ಹಿರೇಮಾಗಡಿ ಮಣ್ಣುವಡ್ಡಿಗೇರಿ ಗ್ರಾಮದಲ್ಲಿ ನಡೆದ ಸಿದ್ಧರಾಮೇಶ್ವರ ಜಯಂತಿ ಸಮಾರಂಭದಲ್ಲಿ, ಚಿತ್ರದುರ್ಗ ಮಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಮಾತನಾಡಿದರು. | Kannada Prabha

ಸಾರಾಂಶ

ಭೋವಿ ಜನಾಂಗ ಕಲ್ಲು ಒಡೆದು, ಕಟ್ಟಡ ನಿರ್ಮಾಣ ಮಾಡುವ ಕೆಲಸ ಮಾಡಿ ಬದುಕು ಕಟ್ಟಿಕೊಂಡಿದೆ. ದೈಹಿಕ ಶ್ರಮದ ಅಲೆಮಾರಿ ಜೀವನದಿಂದಾಗಿ ಅನಕ್ಷರಸ್ಥರ ಸಂಖ್ಯೆ ಹೆಚ್ಚಾಗಿದೆ. ವಡ್ಡರ ಬದುಕು ಸುಧಾರಿಸಬೇಕು ಎಂದರೆ, ತಮ್ಮ ಮಕ್ಕಳಿಗೆ ಸರಿಯಾದ ಶಿಕ್ಷಣ ಕಲಿಸಬೇಕು.

ಸಿದ್ಧರಾಮೇಶ್ವರ ಜಯಂತಿ, ಪ್ರತಿಭಾ ಪುರಸ್ಕಾರ

ಕನ್ನಡಪ್ರಭ ವಾರ್ತೆ ಆನವಟ್ಟಿ

ಭೋವಿ ಜನಾಂಗ ಕಲ್ಲು ಒಡೆದು, ಕಟ್ಟಡ ನಿರ್ಮಾಣ ಮಾಡುವ ಕೆಲಸ ಮಾಡಿ ಬದುಕು ಕಟ್ಟಿಕೊಂಡಿದೆ. ದೈಹಿಕ ಶ್ರಮದ ಅಲೆಮಾರಿ ಜೀವನದಿಂದಾಗಿ ಅನಕ್ಷರಸ್ಥರ ಸಂಖ್ಯೆ ಹೆಚ್ಚಾಗಿದೆ. ವಡ್ಡರ ಬದುಕು ಸುಧಾರಿಸಬೇಕು ಎಂದರೆ, ತಮ್ಮ ಮಕ್ಕಳಿಗೆ ಸರಿಯಾದ ಶಿಕ್ಷಣ ಕಲಿಸಬೇಕು. ಸಮುದಾಯಗಳಲ್ಲಿ ಶೈಕ್ಷಣಿಕ ಪ್ರಗತಿ ಆದಾಗ ಮಾತ್ರ, ಸಮಾಜ ಅಭಿವೃದ್ಧಿ ಕಾಣಲು ಸಾಧ್ಯ ಎಂದು ಬಾಗಲಕೋಟೆ ಮತ್ತು ಚಿತ್ರದುರ್ಗ ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮೀಜಿ ಕಿವಿಮಾತುಗಳನ್ನು ಹೇಳಿದರು.

ಇಲ್ಲಿ ಗುರುವಾರ ಹಿರೇಮಾಗಡಿ ಮಣ್ಣುವಡ್ಡಿಗೇರಿ ಗ್ರಾಮದಲ್ಲಿ ಭೋವಿ ಸಮಾಜ ಹಮ್ಮಿಕೊಂಡಿದ್ದ ಸಿದ್ಧರಾಮೇಶ್ವರ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಭೋವಿ ಸಮುದಾಯದ ಹಲವು ಪಂಗಡಗಳು ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕವಾಗಿ ಹಿಂದೆ ಉಳಿದಿವೆ. ಸರ್ಕಾರದ ಸವಲತ್ತುಗಳನ್ನು ಹಾಗೂ ರಾಜಕೀಯ ಸ್ಥಾನಮಾನಗಳನ್ನು ಪಡೆಯಬೇಕಾದರೆ, ಎಲ್ಲಾ ಪಂಗಡಗಳು ಸಂಘಟನೆಗೊಳ್ಳಬೇಕು ಎಂದರು.

ತಾಲೂಕು ಭೋವಿ ಕ್ಷೇಮಾಭಿವೃಧಿ ಸಂಘದ ಅಧ್ಯಕ್ಷ ಎಚ್. ಜಯಪ್ಪ, ಸರ್ಕಾರ ಈಗ ನಡೆಸುತ್ತಿರುವ ಜನಗಣತಿ ಮತ್ತು ಜಾತಿ ಒಳಮೀಸಲಾತಿ ಸಮೀಕ್ಷೆಯಲ್ಲಿ ಎಲ್ಲಾ ಪಂಗಡದವರು ಜಾತಿ ಭೋವಿ, ಉಪಜಾತಿ ವಡ್ಡರ ಎಂದು ಬರೆಯಿಸಿ ಮತ್ತು ಅಧಿಕಾರಿಗಳಿಗೆ ಸ್ವ-ಇಚ್ಛೆಯಿಂದ ಸಮೀಕ್ಷೆಯಲ್ಲಿ ಪಾಲ್ಗೊಂಡು ಸರಿಯಾದ ಮಾಹಿತಿ ನೀಡಿ ಎಂದು ಸಲಹೆ ನೀಡಿದರು.

ಮಣ್ಣುವಡ್ಡಿಗೇರಿಯಿಂದ, ದೇವಸ್ಥಾನದವರೆಗೂ ಮೆರವಣಿಗೆ ಮೂಲಕ ಅದ್ದೂರಿಯಾಗಿ ಸಿದ್ಧರಾಮೇಶ್ವರ ಸ್ವಾಮೀಜಿ ಅವರನ್ನು ಕರೆತರಲಾಯಿತು.

ಎಸ್ಎಸ್ಎಲ್‌ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಸಾಧನೆ ಮಾಡಿರುವ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಶಿಕಾರಿಪುರ ವೀರಕ್ತ ಮಠದ ಚನ್ನಬಸವೇಶ್ವರ ಸ್ವಾಮೀಜಿ ಸಾನಿಧ್ಯ ವಹಿಸಿದರು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗಪ್ಪ ಮಣ್ಣುವಡ್ಡಿಗೇರಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಂಘದ ಕಾರ್ಯಾಧ್ಯಕ್ಷ ಸುರೇಶ್ ಹಾವಣ್ಣನವರ್, ಜಿಲ್ಲಾ ಉಪಾಧ್ಯಕ್ಷ ಎಚ್.ಎಚ್ ಬಸವರಾಜಪ್ಪ, ಕಾರ್ಯದರ್ಶಿ ಎನ್.ಜಿ ಶಿವಕುಮಾರ್ ಹಿರೇಚೌಟಿ, ಉಪನ್ಯಾಸಕ ಬಿ.ಬಂಗಾರಪ್ಪ, ಶಿಕ್ಷಕರಾದ ಎಚ್.ವಿ.ಕೃಷ್ಣಪ್ಪ, ಪರಮೇಶ್ವರಪ್ಪ, ಮುಖಂಡರಾದ ಕೆ.ಟಿ ಹನುಮಂತಪ್ಪ, ನಾಗರಾಜಪ್ಪ, ಶಿವಾಜಪ್ಪ, ನಿಂಗಪ್ಪ, ನಾಗೇಂದ್ರಪ್ಪ ಇದ್ದರು.

PREV

Recommended Stories

ಹೆತ್ತವರ ಕನಸು ನನಸಾಗಿಸುವುದೇ ಮಕ್ಕಳ ಗುರಿಯಾಗಿರಲಿ: ಸಚಿವೆ ಹೆಬ್ಬಾಳ್ಕರ್
ರಾಜ್ಯದ ಅರ್ಥ ವ್ಯವಸ್ಥೆ ಆರೋಗ್ಯವಂತವಾಗಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್