ಕನ್ನಡಪ್ರಭ ವಾರ್ತೆ ಗುರುಮಠಕಲ್
ಪಟ್ಟಣದ ಎಸ್ವಿ ಪಿಯು ಕಾಲೇಜು ಆವರಣದಲ್ಲಿ ತಾಪಂ, ಪುರಸಭೆ, ಚೈತನ್ಯ ಪದವಿ ಕಾಲೇಜು ಹಾಗೂ ಎಸ್ವಿ ಪಿಯು ಕಾಲೇಜು ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಮತದಾನ ಪೆಟ್ಟಿಗೆ ಮಾದರಿಗೆ ರಾಷ್ಟ್ರೀಯ ಯುವ ಮತದಾರ ದಿನಾಚರಣೆ ಪತ್ರಿಕೆ ಅಂಟಿಸುವ ಮೂಲಕ ಚಾಲನೆ ನೀಡಿ, ಮಾತನಾಡಿದರು.
ಮತದಾನವೆಂಬುವುದು ಪ್ರತಿಯೊಬ್ಬರ ವೈಯಕ್ತಿಕ ಹಕ್ಕು. ಅದನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ. ಯಾವುದೇ ಆಮಿಷಗಳಿಗೊಳಗಾಗದೇ, ಅಮೂಲ್ಯವಾದ ಮತವನ್ನು ಯೋಗ್ಯ ಅಭ್ಯರ್ಥಿಗಳಿಗೆ ನೀಡಬೇಕು. ಇದರಿಂದ ಸದೃಢ ರಾಷ್ಟ್ರ ನಿರ್ಮಾಣ ಮಾಡಬಹುದಾಗಿದೆ ಎಂದರು.ಪುರಸಭೆ ಮುಖ್ಯಾಧಿಕಾರಿ ಭಾರತಿ ದಂಡೋತಿ ಮಾತನಾಡಿ, ಮತದಾನವು ಪ್ರತಿಯೊಬ್ಬರ ಜವಾಬ್ದಾರಿ ಮತ್ತು ಹಕ್ಕು. ಇದನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು. ಕಡ್ಡಾಯವಾಗಿ ಮತದಾನ ಮಾಡಬೇಕು. ಕಳೆದ ಬಾರಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾರರ ಪ್ರಮಾಣ ಹೆಚ್ಚಿಸುವಲ್ಲಿ ಅತ್ಯಂತ ಉತ್ತಮ ಕಾರ್ಯವಾಗಿದೆ. ಮತದಾನದ ಪ್ರಮಾಣ ಹೆಚ್ಚಿಸಲಾಗಿದೆ ಎಂದರು.