ಕನ್ನಡಪ್ರಭ ವಾರ್ತೆ ಚಾಮರಾಜನಗರ
ನಂತರ ಮಾತನಾಡಿದ ಅವರು, ಬೂದಿತಿಟ್ಟು ಗ್ರಾಮದಲ್ಲಿ ೨೦೨೫- ೨೦೨೬ನೇ ಸಾಲಿನ ಮಳೆ ಪರಿಹಾರ ಯೋಜನೆಯಡಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ₹೫೦ ಲಕ್ಷ, ಕಾಗಲವಾಡಿ ಮೋಳೆ ಗ್ರಾಮಕ್ಕೆ ರಸ್ತೆ, ಅಭಿವೃದ್ಧಿಗೆ ₹೮೦ಲಕ್ಷ , ಕರುಳುಮೋಳೆ ಗ್ರಾಮಕ್ಕೆ ರಸ್ತೆ, ಚರಂಡಿ ಅಭಿವೃದ್ಧಿಗೆ ₹೫೦ಲಕ್ಷ , ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆ ಅನುದಾನದಡಿ ಜ್ಯೋತಿಗೌಡನಪುರ ಮಾರ್ಗ ನಲ್ಲೂರು ಮೋಳೆ ಗ್ರಾಮಕ್ಕೆ ಸಂಪರ್ಕ ರಸ್ತೆಗೆ ₹೫೦ ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮಾಡಲಾಗುವುದು ಎಂದರು.
ಗ್ರಾಮೀಣ ಪ್ರದೇಶದ ರಸ್ತೆಗಳ ಅಭಿವೃದ್ಧಿ ದೇಶದ ಪ್ರಗತಿಗೆ ಪೂರಕವಾಗಿದೆ. ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಜನತೆಯ ಆಶಯಕ್ಕೆ ಬದ್ಧರಾಗಿ ಗ್ರಾಮಗಳಲ್ಲಿ ರಸ್ತೆ, ಚರಂಡಿ, ಸಮುದಾಯ ಭವನ, ಆಶ್ರಯ ಮನೆ, ಗಂಗಾ ಕಲ್ಯಾಣ ಯೋಜನೆ ಸೇರಿ ಸರ್ಕಾರ ಮಂಜೂರು ಮಾಡುವ ಅನುದಾನ ಹಾಗೂ ಸೌಲಭ್ಯಗಳನ್ನು ಜನರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಾಗುತ್ತಿದೆ ಎಂದರು.ಸಂಬಂಧಪಟ್ಟ ಗುತ್ತಿಗೆದಾರರು ಗುಣಮಟ್ಟದ ರಸ್ತೆ ನಿರ್ಮಾಣ ಮಾಡಿ, ಈ ಭಾಗದ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸೂಚನೆ ನೀಡಿದರು.