ಬ್ಯಾಡಗಿ: ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಹಳ್ಳಿ-ನಗರ ಎಂಬ ಸಾಮಾಜಿಕ ವಿಭಜನೆಗೆ ಕಡಿವಾಣ ಹಾಕುವುದಲ್ಲದೇ ದೇಶದೆಲ್ಲೆಡೆ ಆರ್ಥಿಕ, ಶೈಕ್ಷಣಿಕ ಹಾಗೂ ಸಮತೋಲಿತ ಪ್ರಾದೇಶಿಕ ಬೆಳವಣಿಗೆಗಳಿಗೆ ಕಾರಣವಾಗಲಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ತಿಳಿಸಿದರು. ತಾಲೂಕಿನ ಕದರಮಂಡಲಗಿಯಿಂದ-ಬೆಳಕೇರಿವರೆಗೆ 50 ಲಕ್ಷ ರು.ಗಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶಗಳ ರಸ್ತೆಗಳ ಅಭಿವೃದ್ಧಿಯಿಂದ ದೇಶದ ಆರ್ಥಿಕತೆ ಮತ್ತು ಸಾಮಾಜಿಕ ಪ್ರಗತಿ ಕಾಣಲು ಸಾಧ್ಯ. ಇವುಗಳಿಂದ ಗ್ರಾಮೀಣ ಜನರ ಜೀವನದ ಒಟ್ಟಾರೆ ಗುಣಮಟ್ಟ ಸುಧಾರಿಸಲು ಸಾಧ್ಯವಾಗಲಿದೆ ಎಂದರು.ಗ್ರಾಮೀಣ ವ್ಯವಹಾರಗಳ ಸ್ಥಾಪನೆ: ಗ್ರಾಮೀಣ ಪ್ರದೇಶದ ರಸ್ತೆಗಳು ಹಳ್ಳಿಗಳನ್ನು ಪಟ್ಟಣಗಳು, ಮಾರುಕಟ್ಟೆಗಳು, ಶಾಲೆ ಮತ್ತು ಆರೋಗ್ಯ ಸೌಲಭ್ಯಗಳಿಗೆ ಸಂಪರ್ಕಿಸುತ್ತವೆ. ಸಣ್ಣ ಪ್ರಮಾಣದ ಕೈಗಾರಿಕೆಗಳು ಮತ್ತು ಗ್ರಾಮೀಣ ವ್ಯವಹಾರಗಳ ಸ್ಥಾಪನೆಯನ್ನು ಉತ್ತೇಜಿಸುತ್ತದೆ. ಶಾಲೆ ಮತ್ತು ಕಾಲೇಜುಗಳನ್ನು ವಿದ್ಯಾರ್ಥಿಗಳು ಸುಲಭವಾಗಿ ಪ್ರವೇಶಿಸಬಹುದು. ಹೀಗಾಗಿ ಗ್ರಾಮೀಣ ರಸ್ತೆಗಳು ಅಭಿವೃದ್ಧಿಯು ಅತ್ಯಂತ ಮಹತ್ವ ಪಡೆದುಕೊಳ್ಳುತ್ತವೆ ಎಂದರು.ಆರ್ಥಿಕ ಬೆಳವಣಿಗೆ: ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಹತ್ತಿರದ ಮಾರುಕಟ್ಟೆಗಳಿಗೆ ಸುಲಭವಾಗಿ ಸಾಗಿಸಬಹುದು. ಅಲ್ಲದೇ ಉತ್ತಮ ರಸ್ತೆಗಳು ಸಮಯದ ಒತ್ತಡವನ್ನು ಕಡಿಮೆ ಮಾಡುವುದಲ್ಲದೇ ಆದಾಯ ಹೆಚ್ಚಿಸಬಹುದು. ರಸ್ತೆಗಳ ನಿರ್ಮಾಣ ಮತ್ತು ನಿರ್ವಹಣೆ ಸ್ಥಳೀಯವಾಗಿ ಉದ್ಯೋಗಗಳನ್ನು ಸೃಷ್ಟಿಸಲಿವೆ. ಗ್ರಾಮೀಣ ರಸ್ತೆಗಳು ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳೊಂದಿಗೆ ಗ್ರಾಮಗಳನ್ನು ಸಂಪರ್ಕಿಸುತ್ತವೆ. ಇದರಿಂದ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್, ನೀರು ಮತ್ತು ಸಂವಹನ ಮೂಲಸೌಕರ್ಯಗಳ ಅಭಿವೃದ್ಧಿ ಬೆಂಬಲಿಸಲಿವೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ತಾಲೂಕಾಧಕ್ಷ ದಾನಪ್ಪ ಚೂರಿ, ಮುಖಂಡರಾದ ಸುರೇಶ ಹುಳಬುತ್ತಿ, ಕಾಂತೇಶ ಓಲೇಕಾರ, ಮಲ್ಲಿಕಾರ್ಜುನ ಕರಲಿಂಗಪ್ಪನವರ, ರಮೇಶ ಸುತ್ತಕೋಟಿ, ಹಾಲಪ್ಪ ಸೇರಿದಂತೆ ಇನ್ನಿತರರಿದ್ದರು.