ಶ್ರೀ ಓಂಕಾರೇಶ್ವರ ದೇವಾಲಯದ ಅಭಿವೃದ್ಧಿ: ಶಾಸಕ ಡಾ.ಮಂತರ್ ಗೌಡ ಭರವಸೆ

KannadaprabhaNewsNetwork |  
Published : Jul 01, 2025, 12:48 AM IST
ಚಿತ್ರ : 30ಎಂಡಿಕೆ1 : ಮಡಿಕೇರಿಯ ಓಂಕಾರೇಶ್ವರ ದೇವಾಲಯಕ್ಕೆ ಶಾಸಕ ಡಾ. ಮಂತರ್ ಗೌಡ ಭೇಟಿ ನೀಡಿದರು.  | Kannada Prabha

ಸಾರಾಂಶ

ನಗರದ ಇತಿಹಾಸ ಪ್ರಸಿದ್ಧ ಶ್ರೀ ಒಂಕಾರೇಶ್ವರ ದೇವಾಲಯದ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ಕೋರಲು ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಲು ಶ್ರೀ ಒಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ನಿರ್ಧರಿಸಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ನಗರದ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ಕೋರಲು ರಾಜ್ಯ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಲು ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ನಿರ್ಧರಿಸಿದೆ.

ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಶ್ರೀ ಓಂಕಾರೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿದರು.

ಈ ಸಂದರ್ಭ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎ.ಸಿ.ಚುಮ್ಮಿ ದೇವಯ್ಯ ಹಾಗೂ ಪದಾಧಿಕಾರಿಗಳು ಮುಜರಾಯಿ ಸಚಿವರ ಬಳಿಗೆ ನಿಯೋಗ ತೆರಳುವ ಇಂಗಿತವನ್ನು ವ್ಯಕ್ತಪಡಿಸಿದರು.

ಇದಕ್ಕೆ ಬೆಂಬಲ ಸೂಚಿಸಿದ ಶಾಸಕರು, ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾಗಿ ಅನುದಾನ ಪಡೆಯಲು ತಮ್ಮ ಸಂಪೂರ್ಣ ಸಹಕಾರವಿದೆ ಎಂದು ಭರವಸೆ ನೀಡಿದರು.

ದೇವಾಲಯಕ್ಕೆ ಬರುವ ಭಕ್ತರಿಗೆ ದೇವಾಲಯ ವ್ಯವಸ್ಥಾಪನಾ ಸಮಿತಿಯಿಂದ ಅನುಕೂಲಕರ ವ್ಯವಸ್ಥೆಗಳನ್ನು ಕಲ್ಪಿಸಬೇಕು. ದೇವಾಲಯದ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಮತ್ತು ದೇವಾಲಯದ ಸಾಂಪ್ರದಾಯಿಕ ಉತ್ಸವಾದಿಗಳನ್ನು ಕಾಲಕಾಲಕ್ಕೆ ತಕ್ಕಂತೆ ನಡೆಸಿಕೊಂಡು ಹೋಗಬೇಕು ಎಂದು ಡಾ. ಮಂತರ್ ಗೌಡ ತಿಳಿಸಿದರು.

ಸಮಿತಿಯ ಸದಸ್ಯರಾದ ಜಿ.ರಾಜೇಂದ್ರ, ಎ.ಎಸ್.ಪ್ರಕಾಶ್, ಸದಸ್ಯರು, ಶ್ರೀ ಆಂಜನೇಯ ದೇವಾಲಯದ ಅರ್ಚಕ ಎಂ.ಬಿ.ಸಂತೋಷ್ ಹಾಗೂ ಶ್ರೀ ಓಂಕಾರೇಶ್ವರ ದೇವಾಲಯದ ಸಿಬ್ಬಂದಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಧಿವೇಶನ ಮುಗಿದ ಬಳಿಕ ಡಿಕೆಶಿಗೆ ಶುಭಸುದ್ದಿ : ಇಕ್ಬಾಲ್
ಬೆಳಗಾವೀಲೂ ‘ಕೈ’ ಡಿನ್ನರ್‌ ಸಭೆಗೆ ಬಿವೈವಿ ಕಿಡಿ