ಜನರ ನಿರೀಕ್ಷೆಗೆ ತಕ್ಕಂತೆ ಕ್ಷೇತ್ರದ ಅಭಿವೃದ್ಧಿ: ಶಾಸಕ ಕೆ.ಎಂ.ಉದಯ್

KannadaprabhaNewsNetwork |  
Published : Apr 14, 2025, 01:15 AM IST
13ಕೆಎಂಎನ್ ಡಿ33 | Kannada Prabha

ಸಾರಾಂಶ

ಅಭಿವೃದ್ಧಿ ವಿಚಾರದಲ್ಲಿ ಹಿಂದಿನ ಶಾಸಕರುಗಳ ನಿರ್ಲಕ್ಷದಿಂದ ಬೇಸತ್ತು ಕ್ಷೇತ್ರದ ಜನತೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ಹೆಚ್ಚಿನ ಮತಗಳನ್ನು ನೀಡಿ ಶಾಸಕನಾಗಿ ಆಯ್ಕೆ ಮಾಡಿದ್ದಾರೆ. ಮತ ನೀಡಿದ ಜನರಋಣ ತೀರಿಸುವ ಉದ್ದೇಶದಿಂದ ತಾವು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಎಲ್ಲಾ ಕ್ಷೇತ್ರಗಳಿಗಿಂತ ಹೆಚ್ಚಿನ ಅನುದಾನ ತಂದು ಅಭಿವೃದ್ಧಿಪಡಿಸುವ ಬಯಕೆ ಹೊಂದಿದ್ದೇನೆ.

ಕನ್ನಡಪ್ರಭ ವಾರ್ತೆ ಮದ್ದೂರು

ಕ್ಷೇತ್ರವನ್ನು ಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿಪಡಿಸುವ ಮೂಲಕ ಮತದಾರರ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದು ಶಾಸಕ ಕೆ.ಎಂ. ಉದಯ್ ಭಾನುವಾರ ಹೇಳಿದರು.

ಕಾವೇರಿ ನೀರಾವರಿ ನಿಗಮದಿಂದ 4.95 ಲಕ್ಷ ರು. ವೆಚ್ಚದಲ್ಲಿ ಪಟ್ಟಣದ ಮದ್ದೂರಮ್ಮ ಕಲ್ಯಾಣ ಮಂಟಪದ ಬಳಿ ಬೈರನ್ ನಾಲೆ ಸೇರುವ ರಸ್ತೆ ಮತ್ತು ಆಂತರಿಕ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿ ಮಾತನಾಡಿ, ಮಾಜಿ ಸಿಎಂ ಎಸ್.ಎಂ.ಕೃಷ್ಣರ ಅಧಿಕಾರ ಅವಧಿಯಲ್ಲಿ ಮದ್ದೂರು ಕ್ಷೇತ್ರ ಅಭಿವೃದ್ಧಿಯಾಗಿರುವುದನ್ನು ಬಿಟ್ಟರೆ ಕಳೆದ 20 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾಣದೆ ಹಿಂದುಳಿದ ಕ್ಷೇತ್ರವಾಗಿದೆ ಎಂದರು.

ಆನಂತರ ಕ್ಷೇತ್ರದಿಂದ ಆಯ್ಕೆಯಾದವರು ಕೇವಲ ರಾಜಕಾರಣಕ್ಕೆ ಮಾತ್ರ ಸೀಮಿತರಾಗಿದ್ದರೆ ಹೊರತು ನೀರಾವರಿ, ರಸ್ತೆ ಅಭಿವೃದ್ಧಿ ಸೇರಿದಂತೆ ಮೂಲ ಸಮಸ್ಯೆಗಳ ಬಗ್ಗೆ ದಿವ್ಯ ನಿರ್ಲಕ್ಷ ತಾಳಿರುವುದು ನನಗೆ ಬೇಸರ ತರಿಸಿದೆ ಎಂದರು.

ಅಭಿವೃದ್ಧಿ ವಿಚಾರದಲ್ಲಿ ಹಿಂದಿನ ಶಾಸಕರುಗಳ ನಿರ್ಲಕ್ಷದಿಂದ ಬೇಸತ್ತು ಕ್ಷೇತ್ರದ ಜನತೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ಹೆಚ್ಚಿನ ಮತಗಳನ್ನು ನೀಡಿ ಶಾಸಕನಾಗಿ ಆಯ್ಕೆ ಮಾಡಿದ್ದಾರೆ. ಮತ ನೀಡಿದ ಜನರಋಣ ತೀರಿಸುವ ಉದ್ದೇಶದಿಂದ ತಾವು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಎಲ್ಲಾ ಕ್ಷೇತ್ರಗಳಿಗಿಂತ ಹೆಚ್ಚಿನ ಅನುದಾನ ತಂದು ಅಭಿವೃದ್ಧಿಪಡಿಸುವ ಬಯಕೆ ಹೊಂದಿದ್ದೇನೆ ಎಂದರು.

ಸರ್ಕಾರದಿಂದ ಪ್ರಥಮ ಹಂತದಲ್ಲಿ 30 ಕೋಟಿ ರು. ಅನುದಾನ ತಂದು ರಸ್ತೆ, ಚರಂಡಿ ಅಭಿವೃದ್ಧಿಪಡಿಸುವ ಜೊತೆಗೆ ಪಟ್ಟಣದ ಅವೈಜ್ಞಾನಿಕ ಒಳಚರಂಡಿ ಯೋಜನೆಯನ್ನು ವೈಜ್ಞಾನಿಕವಾಗಿ ನಿರ್ಮಿಸಲು ಚಿಂತನೆ ನಡೆಸಿದ್ದೇನೆ. ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರ ತವರು ಕ್ಷೇತ್ರ ಅಭಿವೃದ್ಧಿ ವಿಚಾರದಲ್ಲಿ ಶೂನ್ಯ. ಇದಕ್ಕೆ ಈ ಹಿಂದೆ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಶಾಸಕರ ಕರ್ತವ್ಯ ಲೋಪ ಎದ್ದು ಕಾಣುತ್ತಿದೆ ಎಂದು ದೂರಿದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೆಲುವರಾಜು, ಪುರಸಭಾ ಉಪಾಧ್ಯಕ್ಷ ಟಿ.ಅರ್.ಪ್ರಸನ್ನ ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ವನಿತಾ, ಸದಸ್ಯರಾದ ಸರ್ವಮಂಗಳ, ಎಂ.ಬಿ.ಸಚಿನ್, ಶಾಂತಮ್ಮ, ಕಮಲನಾಥ್, ವೆಂಕಟೇಶ, ಬಸವರಾಜು. ಮಾಜಿ ಸದಸ್ಯರಾದ ಡಾಬಾ ಮಹೇಶ್, ಎಂ.ಡಿ.ಮಹಾಲಿಂಗಯ್ಯ, ಮುಖಂಡರಾದ ಅರುಣ್ ಕುಮಾರ್, ಯಶ್ವಂತ್,ಕಾವೇರಿ ನೀರಾವರಿ ನಿಗಮದ ಎಇಇ ನಾಗರಾಜು ಮತ್ತಿತರರು ಇದ್ದರು.

PREV

Recommended Stories

ಸಾಂಬ್ರಾ ವಿಮಾನ ನಿಲ್ದಾಣದವರೆಗೆ ಚತುಷ್ಪಥ ರಸ್ತೆ
ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ